Homeಕರ್ನಾಟಕರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

ರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

- Advertisement -
- Advertisement -

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದುಯವರಿಗೆ ಬರೆದಿರುವ ಪತ್ರದಲ್ಲಿ , ಕರ್ನಾಟಕ ನಾಡಿನ ಜನರ ಹೆಮ್ಮೆ, ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆ ವಿಚಾರವಾಗಿ ನಾನು ಇಂದು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಇದು ನನ್ನ ಕರ್ತವ್ಯವೂ ಆಗಿದೆ. ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಛೇರಿ ಹಾಗೂ ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ. ನಿಮಗೆ ತಿಳಿದಿರುವಂತೆ 2007ರಿಂದ ಇಸ್ರೋ ‘ಮಾನವಸಹಿತ ಬಾಹ್ಯಾಕಾಶ ಗಗನಯಾನ’ ಯೋಜನೆಗೆ ಬೇಕಾದ ತಂತ್ರಜ್ಞಾನವನ್ನು ಸಿದ್ಧಪಡಿಸಿಕೊಂಡು ಬಂದಿದೆ. ಇಸ್ರೋ ಸಂಸ್ಥೆ 2023ರಲ್ಲಿ ತನ್ನ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನದ ಜಿಎಸ್ಎಲ್ವಿ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಅಮೆರಿಕಾ, ಚೀನಾ, ಸೋವಿಯತ್ ಯೂನಿಯನ್ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಭಾರತವಾಗಲಿದೆ ಎಂದು ಗಮನ ಸೆಳೆದಿದ್ದಾರೆ.

“ಕನ್ನಡಿಗರು ಭಾವನಾತ್ಮಕ ವ್ಯಕ್ತಿಗಳಾಗಿದ್ದು, ಇಂತಹ ರಾಷ್ಟ್ರೀಯ ಕಾರ್ಯಕ್ರಮಗಳ ಆತಿಥ್ಯವನ್ನು ಬಹಳ ಹೆಮ್ಮೆಯಿಂದ ವಹಿಸಿಕೊಳ್ಳುತ್ತಾರೆ. ಅದೇ ರೀತಿ ಈ ಗಗನಯಾನ ಯೋಜನೆ ಬಗ್ಗೆಯೂ ಕನ್ನಡಿಗರು ಭಾವನಾತ್ಮಕ ಸಂಬಂಧ, ಮನಸ್ಥಿತಿ ಇಟ್ಟುಕೊಂಡಿದ್ದಾರೆ. ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಕೇಳಿ ಕನ್ನಡಿಗರು ಬೇಸರಗೊಂಡಿದ್ದಾರೆ.  ಈ ಯೋಜನೆ ಸ್ಥಳಾಂತರ ಆಗಿದ್ದೇ ಆದರೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಕಡೆಗಣಿಸಿ, ಅದಕ್ಕೆ ದ್ರೋಹ ಬಗೆದು, ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಭಾವಿಸಲಾಗುವುದು. ಅಷ್ಟೇ ಅಲ್ಲ, ಇದು ಕನ್ನಡಿಗರ ಸ್ವಾಭಿಮಾನ ಹಾಗೂ ಆತ್ಮಗೌರವಕ್ಕೆ ಧಕ್ಕೆ ತರಲಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದೇಶದ ಒಂದು ಭಾಗದ ಜನ ತಮಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಭಾವಿಸಿದರೆ ಅದು ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರಲಿದೆ. ಹೀಗಾಗಿ, ನಿಮ್ಮ ಕಾರ್ಯಾಲಯ ಕೂಡಲೇ ಮಧ್ಯಪ್ರವೇಶಿಸಿ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನವನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬರೆದಿರುವ ಪತ್ರದಲ್ಲಿ, “ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಮಾನವಸಹಿತ ಗಗನಯಾನ ಯೋಜನೆ ನಮ್ಮೆಲ್ಲರ ಹೆಮ್ಮೆ. ಇದು ಕನ್ನಡಿಗರ ಭಾವನೆಯ ವಿಚಾರವಾಗಿದೆ. ಕನ್ನಡಿಗರು ಭಾವನಾತ್ಮಕ ಜನರಾಗಿದ್ದು, ಈ ಯೋಜನೆ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಹುನ್ನಾರದ ವಿಚಾರ ಕೇಳಿ ಕನ್ನಡಿಗರು ದಿಗ್ಭ್ರಾಂತರಾಗಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಜನರ ಭಾವನೆಗೆ ಧಕ್ಕೆ ತಂದು ಈ ರೀತಿಯ ದ್ರೋಹ ಬಗೆದು, ಮಲತಾಯಿ ಧೋರಣೆ ತಾಳುತ್ತಿದೆ. ಈ ನಡೆಯು ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಇಸ್ರೋ ಯೋಜನೆ ಸ್ಥಳಾಂತರದ ಪ್ರಸ್ತಾವನೆ ಕೈಬಿಡುವಂತೆ ಕೋರಿ ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದು, ಅದರ ಪ್ರತಿಯನ್ನು ತಮಗೂ ಲಗತ್ತಿಸಲಾಗಿದೆ. ಹೀಗಾಗಿ ಈ ವಿಚಾರದಲ್ಲಿ ತಾವುಗಳು ಪ್ರಧಾನಿಗಳ ಬಳಿಗೆ ರಾಜ್ಯದ ಸಂಸದರ ನಿಯೋಗವನ್ನು ಕರೆದುಕೊಂಡು ಹೋಗಿ, ನಿಮ್ಮ ಕಚೇರಿಯ ಮೂಲಕ ಒತ್ತಡ ಹೇರಿ, ಈ ಮೇಲ್ಕಂಡ ವಿಚಾರದ ಬಗ್ಗೆ ಅವರಿಗೆ ಮನದಟ್ಟು ಮಾಡಿಕೊಡಿ. ಈ ಯೋಜನೆ ಸ್ಥಳಾಂತರ ಪ್ರಸ್ತಾವನೆ ಕೈಬಿಡುವಂತೆ ಮಾಡಿ ಕನ್ನಡಿಗರ ಸ್ವಾಭಿಮಾನ, ಆತ್ಮಗೌರವ ಎತ್ತಿ ಹಿಡಿಯಿರಿ ಎಂದು ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...