Homeಕರ್ನಾಟಕರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

ರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

- Advertisement -
- Advertisement -

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದುಯವರಿಗೆ ಬರೆದಿರುವ ಪತ್ರದಲ್ಲಿ , ಕರ್ನಾಟಕ ನಾಡಿನ ಜನರ ಹೆಮ್ಮೆ, ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆ ವಿಚಾರವಾಗಿ ನಾನು ಇಂದು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಇದು ನನ್ನ ಕರ್ತವ್ಯವೂ ಆಗಿದೆ. ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಛೇರಿ ಹಾಗೂ ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ. ನಿಮಗೆ ತಿಳಿದಿರುವಂತೆ 2007ರಿಂದ ಇಸ್ರೋ ‘ಮಾನವಸಹಿತ ಬಾಹ್ಯಾಕಾಶ ಗಗನಯಾನ’ ಯೋಜನೆಗೆ ಬೇಕಾದ ತಂತ್ರಜ್ಞಾನವನ್ನು ಸಿದ್ಧಪಡಿಸಿಕೊಂಡು ಬಂದಿದೆ. ಇಸ್ರೋ ಸಂಸ್ಥೆ 2023ರಲ್ಲಿ ತನ್ನ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನದ ಜಿಎಸ್ಎಲ್ವಿ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಅಮೆರಿಕಾ, ಚೀನಾ, ಸೋವಿಯತ್ ಯೂನಿಯನ್ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಭಾರತವಾಗಲಿದೆ ಎಂದು ಗಮನ ಸೆಳೆದಿದ್ದಾರೆ.

“ಕನ್ನಡಿಗರು ಭಾವನಾತ್ಮಕ ವ್ಯಕ್ತಿಗಳಾಗಿದ್ದು, ಇಂತಹ ರಾಷ್ಟ್ರೀಯ ಕಾರ್ಯಕ್ರಮಗಳ ಆತಿಥ್ಯವನ್ನು ಬಹಳ ಹೆಮ್ಮೆಯಿಂದ ವಹಿಸಿಕೊಳ್ಳುತ್ತಾರೆ. ಅದೇ ರೀತಿ ಈ ಗಗನಯಾನ ಯೋಜನೆ ಬಗ್ಗೆಯೂ ಕನ್ನಡಿಗರು ಭಾವನಾತ್ಮಕ ಸಂಬಂಧ, ಮನಸ್ಥಿತಿ ಇಟ್ಟುಕೊಂಡಿದ್ದಾರೆ. ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಕೇಳಿ ಕನ್ನಡಿಗರು ಬೇಸರಗೊಂಡಿದ್ದಾರೆ.  ಈ ಯೋಜನೆ ಸ್ಥಳಾಂತರ ಆಗಿದ್ದೇ ಆದರೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಕಡೆಗಣಿಸಿ, ಅದಕ್ಕೆ ದ್ರೋಹ ಬಗೆದು, ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಭಾವಿಸಲಾಗುವುದು. ಅಷ್ಟೇ ಅಲ್ಲ, ಇದು ಕನ್ನಡಿಗರ ಸ್ವಾಭಿಮಾನ ಹಾಗೂ ಆತ್ಮಗೌರವಕ್ಕೆ ಧಕ್ಕೆ ತರಲಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದೇಶದ ಒಂದು ಭಾಗದ ಜನ ತಮಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಭಾವಿಸಿದರೆ ಅದು ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರಲಿದೆ. ಹೀಗಾಗಿ, ನಿಮ್ಮ ಕಾರ್ಯಾಲಯ ಕೂಡಲೇ ಮಧ್ಯಪ್ರವೇಶಿಸಿ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನವನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬರೆದಿರುವ ಪತ್ರದಲ್ಲಿ, “ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಮಾನವಸಹಿತ ಗಗನಯಾನ ಯೋಜನೆ ನಮ್ಮೆಲ್ಲರ ಹೆಮ್ಮೆ. ಇದು ಕನ್ನಡಿಗರ ಭಾವನೆಯ ವಿಚಾರವಾಗಿದೆ. ಕನ್ನಡಿಗರು ಭಾವನಾತ್ಮಕ ಜನರಾಗಿದ್ದು, ಈ ಯೋಜನೆ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಹುನ್ನಾರದ ವಿಚಾರ ಕೇಳಿ ಕನ್ನಡಿಗರು ದಿಗ್ಭ್ರಾಂತರಾಗಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಜನರ ಭಾವನೆಗೆ ಧಕ್ಕೆ ತಂದು ಈ ರೀತಿಯ ದ್ರೋಹ ಬಗೆದು, ಮಲತಾಯಿ ಧೋರಣೆ ತಾಳುತ್ತಿದೆ. ಈ ನಡೆಯು ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಇಸ್ರೋ ಯೋಜನೆ ಸ್ಥಳಾಂತರದ ಪ್ರಸ್ತಾವನೆ ಕೈಬಿಡುವಂತೆ ಕೋರಿ ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದು, ಅದರ ಪ್ರತಿಯನ್ನು ತಮಗೂ ಲಗತ್ತಿಸಲಾಗಿದೆ. ಹೀಗಾಗಿ ಈ ವಿಚಾರದಲ್ಲಿ ತಾವುಗಳು ಪ್ರಧಾನಿಗಳ ಬಳಿಗೆ ರಾಜ್ಯದ ಸಂಸದರ ನಿಯೋಗವನ್ನು ಕರೆದುಕೊಂಡು ಹೋಗಿ, ನಿಮ್ಮ ಕಚೇರಿಯ ಮೂಲಕ ಒತ್ತಡ ಹೇರಿ, ಈ ಮೇಲ್ಕಂಡ ವಿಚಾರದ ಬಗ್ಗೆ ಅವರಿಗೆ ಮನದಟ್ಟು ಮಾಡಿಕೊಡಿ. ಈ ಯೋಜನೆ ಸ್ಥಳಾಂತರ ಪ್ರಸ್ತಾವನೆ ಕೈಬಿಡುವಂತೆ ಮಾಡಿ ಕನ್ನಡಿಗರ ಸ್ವಾಭಿಮಾನ, ಆತ್ಮಗೌರವ ಎತ್ತಿ ಹಿಡಿಯಿರಿ ಎಂದು ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...