Homeಕರ್ನಾಟಕರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

ರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

- Advertisement -
- Advertisement -

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದುಯವರಿಗೆ ಬರೆದಿರುವ ಪತ್ರದಲ್ಲಿ , ಕರ್ನಾಟಕ ನಾಡಿನ ಜನರ ಹೆಮ್ಮೆ, ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆ ವಿಚಾರವಾಗಿ ನಾನು ಇಂದು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಇದು ನನ್ನ ಕರ್ತವ್ಯವೂ ಆಗಿದೆ. ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಛೇರಿ ಹಾಗೂ ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ. ನಿಮಗೆ ತಿಳಿದಿರುವಂತೆ 2007ರಿಂದ ಇಸ್ರೋ ‘ಮಾನವಸಹಿತ ಬಾಹ್ಯಾಕಾಶ ಗಗನಯಾನ’ ಯೋಜನೆಗೆ ಬೇಕಾದ ತಂತ್ರಜ್ಞಾನವನ್ನು ಸಿದ್ಧಪಡಿಸಿಕೊಂಡು ಬಂದಿದೆ. ಇಸ್ರೋ ಸಂಸ್ಥೆ 2023ರಲ್ಲಿ ತನ್ನ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನದ ಜಿಎಸ್ಎಲ್ವಿ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಅಮೆರಿಕಾ, ಚೀನಾ, ಸೋವಿಯತ್ ಯೂನಿಯನ್ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಭಾರತವಾಗಲಿದೆ ಎಂದು ಗಮನ ಸೆಳೆದಿದ್ದಾರೆ.

“ಕನ್ನಡಿಗರು ಭಾವನಾತ್ಮಕ ವ್ಯಕ್ತಿಗಳಾಗಿದ್ದು, ಇಂತಹ ರಾಷ್ಟ್ರೀಯ ಕಾರ್ಯಕ್ರಮಗಳ ಆತಿಥ್ಯವನ್ನು ಬಹಳ ಹೆಮ್ಮೆಯಿಂದ ವಹಿಸಿಕೊಳ್ಳುತ್ತಾರೆ. ಅದೇ ರೀತಿ ಈ ಗಗನಯಾನ ಯೋಜನೆ ಬಗ್ಗೆಯೂ ಕನ್ನಡಿಗರು ಭಾವನಾತ್ಮಕ ಸಂಬಂಧ, ಮನಸ್ಥಿತಿ ಇಟ್ಟುಕೊಂಡಿದ್ದಾರೆ. ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಕೇಳಿ ಕನ್ನಡಿಗರು ಬೇಸರಗೊಂಡಿದ್ದಾರೆ.  ಈ ಯೋಜನೆ ಸ್ಥಳಾಂತರ ಆಗಿದ್ದೇ ಆದರೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಕಡೆಗಣಿಸಿ, ಅದಕ್ಕೆ ದ್ರೋಹ ಬಗೆದು, ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಭಾವಿಸಲಾಗುವುದು. ಅಷ್ಟೇ ಅಲ್ಲ, ಇದು ಕನ್ನಡಿಗರ ಸ್ವಾಭಿಮಾನ ಹಾಗೂ ಆತ್ಮಗೌರವಕ್ಕೆ ಧಕ್ಕೆ ತರಲಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದೇಶದ ಒಂದು ಭಾಗದ ಜನ ತಮಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಭಾವಿಸಿದರೆ ಅದು ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರಲಿದೆ. ಹೀಗಾಗಿ, ನಿಮ್ಮ ಕಾರ್ಯಾಲಯ ಕೂಡಲೇ ಮಧ್ಯಪ್ರವೇಶಿಸಿ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನವನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬರೆದಿರುವ ಪತ್ರದಲ್ಲಿ, “ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಮಾನವಸಹಿತ ಗಗನಯಾನ ಯೋಜನೆ ನಮ್ಮೆಲ್ಲರ ಹೆಮ್ಮೆ. ಇದು ಕನ್ನಡಿಗರ ಭಾವನೆಯ ವಿಚಾರವಾಗಿದೆ. ಕನ್ನಡಿಗರು ಭಾವನಾತ್ಮಕ ಜನರಾಗಿದ್ದು, ಈ ಯೋಜನೆ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಹುನ್ನಾರದ ವಿಚಾರ ಕೇಳಿ ಕನ್ನಡಿಗರು ದಿಗ್ಭ್ರಾಂತರಾಗಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಜನರ ಭಾವನೆಗೆ ಧಕ್ಕೆ ತಂದು ಈ ರೀತಿಯ ದ್ರೋಹ ಬಗೆದು, ಮಲತಾಯಿ ಧೋರಣೆ ತಾಳುತ್ತಿದೆ. ಈ ನಡೆಯು ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಇಸ್ರೋ ಯೋಜನೆ ಸ್ಥಳಾಂತರದ ಪ್ರಸ್ತಾವನೆ ಕೈಬಿಡುವಂತೆ ಕೋರಿ ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದು, ಅದರ ಪ್ರತಿಯನ್ನು ತಮಗೂ ಲಗತ್ತಿಸಲಾಗಿದೆ. ಹೀಗಾಗಿ ಈ ವಿಚಾರದಲ್ಲಿ ತಾವುಗಳು ಪ್ರಧಾನಿಗಳ ಬಳಿಗೆ ರಾಜ್ಯದ ಸಂಸದರ ನಿಯೋಗವನ್ನು ಕರೆದುಕೊಂಡು ಹೋಗಿ, ನಿಮ್ಮ ಕಚೇರಿಯ ಮೂಲಕ ಒತ್ತಡ ಹೇರಿ, ಈ ಮೇಲ್ಕಂಡ ವಿಚಾರದ ಬಗ್ಗೆ ಅವರಿಗೆ ಮನದಟ್ಟು ಮಾಡಿಕೊಡಿ. ಈ ಯೋಜನೆ ಸ್ಥಳಾಂತರ ಪ್ರಸ್ತಾವನೆ ಕೈಬಿಡುವಂತೆ ಮಾಡಿ ಕನ್ನಡಿಗರ ಸ್ವಾಭಿಮಾನ, ಆತ್ಮಗೌರವ ಎತ್ತಿ ಹಿಡಿಯಿರಿ ಎಂದು ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...