Homeಕರ್ನಾಟಕರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

ರಾಜ್ಯದಿಂದ ಇಸ್ರೋ ಗಗನಯಾನ ಯೋಜನೆ ಗುಜರಾತ್‌ಗೆ: ಪ್ರಧಾನಿ, ಸಿಎಂಗೆ ಡಿ.ಕೆ.ಶಿವಕುಮಾರ್‌ ಪತ್ರ

- Advertisement -
- Advertisement -

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದುಯವರಿಗೆ ಬರೆದಿರುವ ಪತ್ರದಲ್ಲಿ , ಕರ್ನಾಟಕ ನಾಡಿನ ಜನರ ಹೆಮ್ಮೆ, ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆ ವಿಚಾರವಾಗಿ ನಾನು ಇಂದು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಇದು ನನ್ನ ಕರ್ತವ್ಯವೂ ಆಗಿದೆ. ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಛೇರಿ ಹಾಗೂ ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ. ನಿಮಗೆ ತಿಳಿದಿರುವಂತೆ 2007ರಿಂದ ಇಸ್ರೋ ‘ಮಾನವಸಹಿತ ಬಾಹ್ಯಾಕಾಶ ಗಗನಯಾನ’ ಯೋಜನೆಗೆ ಬೇಕಾದ ತಂತ್ರಜ್ಞಾನವನ್ನು ಸಿದ್ಧಪಡಿಸಿಕೊಂಡು ಬಂದಿದೆ. ಇಸ್ರೋ ಸಂಸ್ಥೆ 2023ರಲ್ಲಿ ತನ್ನ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನದ ಜಿಎಸ್ಎಲ್ವಿ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಅಮೆರಿಕಾ, ಚೀನಾ, ಸೋವಿಯತ್ ಯೂನಿಯನ್ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಭಾರತವಾಗಲಿದೆ ಎಂದು ಗಮನ ಸೆಳೆದಿದ್ದಾರೆ.

“ಕನ್ನಡಿಗರು ಭಾವನಾತ್ಮಕ ವ್ಯಕ್ತಿಗಳಾಗಿದ್ದು, ಇಂತಹ ರಾಷ್ಟ್ರೀಯ ಕಾರ್ಯಕ್ರಮಗಳ ಆತಿಥ್ಯವನ್ನು ಬಹಳ ಹೆಮ್ಮೆಯಿಂದ ವಹಿಸಿಕೊಳ್ಳುತ್ತಾರೆ. ಅದೇ ರೀತಿ ಈ ಗಗನಯಾನ ಯೋಜನೆ ಬಗ್ಗೆಯೂ ಕನ್ನಡಿಗರು ಭಾವನಾತ್ಮಕ ಸಂಬಂಧ, ಮನಸ್ಥಿತಿ ಇಟ್ಟುಕೊಂಡಿದ್ದಾರೆ. ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಕೇಳಿ ಕನ್ನಡಿಗರು ಬೇಸರಗೊಂಡಿದ್ದಾರೆ.  ಈ ಯೋಜನೆ ಸ್ಥಳಾಂತರ ಆಗಿದ್ದೇ ಆದರೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಕಡೆಗಣಿಸಿ, ಅದಕ್ಕೆ ದ್ರೋಹ ಬಗೆದು, ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಭಾವಿಸಲಾಗುವುದು. ಅಷ್ಟೇ ಅಲ್ಲ, ಇದು ಕನ್ನಡಿಗರ ಸ್ವಾಭಿಮಾನ ಹಾಗೂ ಆತ್ಮಗೌರವಕ್ಕೆ ಧಕ್ಕೆ ತರಲಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದೇಶದ ಒಂದು ಭಾಗದ ಜನ ತಮಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಭಾವಿಸಿದರೆ ಅದು ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರಲಿದೆ. ಹೀಗಾಗಿ, ನಿಮ್ಮ ಕಾರ್ಯಾಲಯ ಕೂಡಲೇ ಮಧ್ಯಪ್ರವೇಶಿಸಿ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನವನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬರೆದಿರುವ ಪತ್ರದಲ್ಲಿ, “ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಮಾನವಸಹಿತ ಗಗನಯಾನ ಯೋಜನೆ ನಮ್ಮೆಲ್ಲರ ಹೆಮ್ಮೆ. ಇದು ಕನ್ನಡಿಗರ ಭಾವನೆಯ ವಿಚಾರವಾಗಿದೆ. ಕನ್ನಡಿಗರು ಭಾವನಾತ್ಮಕ ಜನರಾಗಿದ್ದು, ಈ ಯೋಜನೆ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಹುನ್ನಾರದ ವಿಚಾರ ಕೇಳಿ ಕನ್ನಡಿಗರು ದಿಗ್ಭ್ರಾಂತರಾಗಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಜನರ ಭಾವನೆಗೆ ಧಕ್ಕೆ ತಂದು ಈ ರೀತಿಯ ದ್ರೋಹ ಬಗೆದು, ಮಲತಾಯಿ ಧೋರಣೆ ತಾಳುತ್ತಿದೆ. ಈ ನಡೆಯು ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಇಸ್ರೋ ಯೋಜನೆ ಸ್ಥಳಾಂತರದ ಪ್ರಸ್ತಾವನೆ ಕೈಬಿಡುವಂತೆ ಕೋರಿ ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದು, ಅದರ ಪ್ರತಿಯನ್ನು ತಮಗೂ ಲಗತ್ತಿಸಲಾಗಿದೆ. ಹೀಗಾಗಿ ಈ ವಿಚಾರದಲ್ಲಿ ತಾವುಗಳು ಪ್ರಧಾನಿಗಳ ಬಳಿಗೆ ರಾಜ್ಯದ ಸಂಸದರ ನಿಯೋಗವನ್ನು ಕರೆದುಕೊಂಡು ಹೋಗಿ, ನಿಮ್ಮ ಕಚೇರಿಯ ಮೂಲಕ ಒತ್ತಡ ಹೇರಿ, ಈ ಮೇಲ್ಕಂಡ ವಿಚಾರದ ಬಗ್ಗೆ ಅವರಿಗೆ ಮನದಟ್ಟು ಮಾಡಿಕೊಡಿ. ಈ ಯೋಜನೆ ಸ್ಥಳಾಂತರ ಪ್ರಸ್ತಾವನೆ ಕೈಬಿಡುವಂತೆ ಮಾಡಿ ಕನ್ನಡಿಗರ ಸ್ವಾಭಿಮಾನ, ಆತ್ಮಗೌರವ ಎತ್ತಿ ಹಿಡಿಯಿರಿ ಎಂದು ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...