Homeಕರ್ನಾಟಕಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

- Advertisement -
- Advertisement -

ಮೈಶುಗರ್‌ ಸಕ್ಕರೆ ಕಾರ್ಖಾನೆಯನ್ನು 40 ವರ್ಷ ಖಾಸಗಿ ಗುತ್ತಿಗೆಗೆ ನೀಡುವ ಸರಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರೋಧ  ವ್ಯಕ್ತಪಡಿಸಿದ್ದಾರೆ. ಮೈಶುಗರ್‌ ಖಾಸಗೀಕರಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಸರ್ಕಾರ ಮಂಡ್ಯದ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ಕೈಗೊಂಡರೆ ಉಗ್ರ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಾಜಿ ಸಂಸದ ಜಿ ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದ ವೇಳೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಂಡ್ಯ ಜಿಲ್ಲೆ ರೈತರ ಸೇವೆಗೆಂದು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಮಹಾರಾಜರು ಒಂದು ದೊಡ್ಡ ಆಸ್ತಿ ಮಾಡಿ ಹೋಗಿದ್ದು ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸ್ವಾಮ್ಯಕ್ಕೆ ಒಪ್ಪಿಸದೇ ಸರಕಾರವೇ ಮುನ್ನಡೆಸುವ ಮೂಲಕ ಜಿಲ್ಲೆಯ ರೈತರ ಹಿತ ಕಾಪಾಡಬೇಕು,” ಎಂದಿದ್ದಾರೆ.

ಈಗಾಗಲೇ ಜಿಲ್ಲೆಯ ರೈತ ನಾಯಕರು ತಮ್ಮನ್ನೂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೂಡಲೇ ಕಾರ್ಖಾನೆ ಆರಂಭಿಸುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಎಂದು ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರ ಜೊತೆ ಈ ಕುರಿತು ಚರ್ಚಿಸುವುದಾಗಿ ಶಿವಕುಮಾರ್ ಇದೇ ಸಂದರ್ಭದಲ್ಲಿ ರೈತರಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರು, ಬಿರುಕು ಬಿಟ್ಟಿದ್ದರೆ ಅದನ್ನು ಪರಿಶೀಲಿಸಲು 40 ಮಂದಿ ಎಂಜಿನಿಯರ್‌ಗಳಿದ್ದು, ಅವರನ್ನೇ ಕೇಳಿ ಮಾಹಿತಿ ಪಡೆಯಲಿ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ನಡೆಯುತ್ತಿರುವ ವಿವಾದಗಳಿಗೆ ಸ್ಪಂದಿಸಲು ನಿರಾಕರಿಸಿದ ಅವರು ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಅವುಗಳ ಕುರಿತು ಸರ್ಕಾರದ ಗಮನ ಸೆಳೆಯುವುದರ ಕಡೆ ಮಾತ್ರ ಗಮನಹರಿಸಿರುವುದಾಗಿ ಪ್ರತಿಕ್ರಿಯಿಸಿದ್ದಾರೆ.

ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಚುನಾವಣೆಗಳಿಗೆ ಪಕ್ಷದ ಚಿಹ್ನೆಯಡಿ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವಿಗೆ ಕಾರ್ಯಯೋಜನೆ ರೂಪಿಸುವುದಾಗಿ ತಿಳಿಸಿದ ಕೆಪಿಸಿಸಿ ಅಧ್ಯಕ್ಷರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಟ್ಟಿಗೆ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ.

ಈ ವೇಳೆ ಕೆಪಿಸಿಸಿ ಸದಸ್ಯ ಎಸ್‌. ಗುರುಚರಣ್‌, ಬ್ಲಾಕ್‌ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಕದಲೂರು ರಾಮಕೃಷ್ಣ, ತಾ.ಪಂ. ಮಾಜಿ ಸದಸ್ಯ ಕೆ.ಆರ್‌. ಮಹೇಶ್‌, ಮುಖಂಡರಾದ ಸತೀಶ್‌, ಚಿದಂಬರ್‌, ಅಪ್ಪಾಜಿ, ಆಸೀಫ್‌, ಮುನ್ನಾವರ್‌, ಅಸ್ಲಾಂ, ವಿಜಿಕುಮಾರ್‌, ಮಹೇಶ್‌ ಇತರರಿದ್ದರು.

ಇದನ್ನೂ ಓದಿ: ಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...