Homeಕರ್ನಾಟಕಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

- Advertisement -
- Advertisement -

ಮೈಶುಗರ್‌ ಸಕ್ಕರೆ ಕಾರ್ಖಾನೆಯನ್ನು 40 ವರ್ಷ ಖಾಸಗಿ ಗುತ್ತಿಗೆಗೆ ನೀಡುವ ಸರಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರೋಧ  ವ್ಯಕ್ತಪಡಿಸಿದ್ದಾರೆ. ಮೈಶುಗರ್‌ ಖಾಸಗೀಕರಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಸರ್ಕಾರ ಮಂಡ್ಯದ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ಕೈಗೊಂಡರೆ ಉಗ್ರ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಾಜಿ ಸಂಸದ ಜಿ ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದ ವೇಳೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಂಡ್ಯ ಜಿಲ್ಲೆ ರೈತರ ಸೇವೆಗೆಂದು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಮಹಾರಾಜರು ಒಂದು ದೊಡ್ಡ ಆಸ್ತಿ ಮಾಡಿ ಹೋಗಿದ್ದು ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸ್ವಾಮ್ಯಕ್ಕೆ ಒಪ್ಪಿಸದೇ ಸರಕಾರವೇ ಮುನ್ನಡೆಸುವ ಮೂಲಕ ಜಿಲ್ಲೆಯ ರೈತರ ಹಿತ ಕಾಪಾಡಬೇಕು,” ಎಂದಿದ್ದಾರೆ.

ಈಗಾಗಲೇ ಜಿಲ್ಲೆಯ ರೈತ ನಾಯಕರು ತಮ್ಮನ್ನೂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೂಡಲೇ ಕಾರ್ಖಾನೆ ಆರಂಭಿಸುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಎಂದು ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರ ಜೊತೆ ಈ ಕುರಿತು ಚರ್ಚಿಸುವುದಾಗಿ ಶಿವಕುಮಾರ್ ಇದೇ ಸಂದರ್ಭದಲ್ಲಿ ರೈತರಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರು, ಬಿರುಕು ಬಿಟ್ಟಿದ್ದರೆ ಅದನ್ನು ಪರಿಶೀಲಿಸಲು 40 ಮಂದಿ ಎಂಜಿನಿಯರ್‌ಗಳಿದ್ದು, ಅವರನ್ನೇ ಕೇಳಿ ಮಾಹಿತಿ ಪಡೆಯಲಿ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ನಡೆಯುತ್ತಿರುವ ವಿವಾದಗಳಿಗೆ ಸ್ಪಂದಿಸಲು ನಿರಾಕರಿಸಿದ ಅವರು ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಅವುಗಳ ಕುರಿತು ಸರ್ಕಾರದ ಗಮನ ಸೆಳೆಯುವುದರ ಕಡೆ ಮಾತ್ರ ಗಮನಹರಿಸಿರುವುದಾಗಿ ಪ್ರತಿಕ್ರಿಯಿಸಿದ್ದಾರೆ.

ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಚುನಾವಣೆಗಳಿಗೆ ಪಕ್ಷದ ಚಿಹ್ನೆಯಡಿ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವಿಗೆ ಕಾರ್ಯಯೋಜನೆ ರೂಪಿಸುವುದಾಗಿ ತಿಳಿಸಿದ ಕೆಪಿಸಿಸಿ ಅಧ್ಯಕ್ಷರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಟ್ಟಿಗೆ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ.

ಈ ವೇಳೆ ಕೆಪಿಸಿಸಿ ಸದಸ್ಯ ಎಸ್‌. ಗುರುಚರಣ್‌, ಬ್ಲಾಕ್‌ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಕದಲೂರು ರಾಮಕೃಷ್ಣ, ತಾ.ಪಂ. ಮಾಜಿ ಸದಸ್ಯ ಕೆ.ಆರ್‌. ಮಹೇಶ್‌, ಮುಖಂಡರಾದ ಸತೀಶ್‌, ಚಿದಂಬರ್‌, ಅಪ್ಪಾಜಿ, ಆಸೀಫ್‌, ಮುನ್ನಾವರ್‌, ಅಸ್ಲಾಂ, ವಿಜಿಕುಮಾರ್‌, ಮಹೇಶ್‌ ಇತರರಿದ್ದರು.

ಇದನ್ನೂ ಓದಿ: ಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...