Homeಕರ್ನಾಟಕಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

ಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

- Advertisement -
- Advertisement -

ಭಾರತದಿಂದ ರಫ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್‌ಕಾರಕ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಮೇ 8 ,2025 ರಂದು ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಅಡಿಕೆ ಹಾಳೆ ರಫ್ತಿಗೆ

ಅಮೆರಿಕದ ಈ ನಿರ್ಭಂದವು ಅಮೆರಿಕ ಮಾತ್ರವಲ್ಲದೆ ಇಡಿ ಜಗತ್ತಿನ ಅಡಿಕೆ ಹಾಳೆ ಮಾರುಕಟ್ಟೆ ಮೇಲೆ ಕರಾಳ ಪರಿಣಾಮ ಬೀರುತ್ತಿದೆ. ಅಡಿಕೆ ಹಾಳೆಗಳಿಂದ ತಯಾರಾಗುತ್ತಿದ್ದ ಊಟದ ಪರಿಕರಗಳು ಜಾಗತಿಕವಾಗಿ ಸುಮಾರು ಮೂರುವರೆ ಸಾವಿರ ಕೋಟಿ ವಹಿವಾಟು ಇದ್ದು ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆಯೇ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿಗಳಷ್ಟಿದೆ ಎಂದು ರೈತ ಸಂಘಟನೆ ಹೇಳಿದೆ.

ದೇಶದಲ್ಲೇ ಅತಿ ದೊಡ್ಡ ಅಡಿಕೆ ಬೆಳೆ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ಈ ನಿರ್ಭಂಧದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಈ ಉದ್ಯಮದಲ್ಲಿ ತೊಡಗಿರುವ ಸಹಸ್ರಾರು ಜನರ ಉದ್ಯೋಗದ ಮೇಲೆ ದುಷ್ಪರಿಣಾಮಗಳು ಕಂಡು ಬರುತ್ತಿದೆ ಎಂದು ಅದು ತಿಳಿಸಿದೆ.

ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಿಂದ ನಡೆಯುತ್ತಿದ್ದ ರಪ್ತು ವಹಿವಾಟು ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಎಲೆ ಚುಕ್ಕಿ ರೋಗ, ಕೊಳೆ ರೋಗ ಮುಂತಾದ ಸಮಸ್ಯೆಗಳು ಸೇರಿದಂತೆ ಹಲವಾರು ವರ್ಷಗಳ ಬೆಲೆ ಕುಸಿತದ ಸಮಸ್ಯೆ ಅನುಭವಿಸಿ ಸತತ ನಷ್ಟದ ನಂತರ ಈ ವರ್ಷ ಸ್ವಲ್ಪ ಉತ್ತಮ ಬೆಲೆ ಪಡೆಯುವ ನಿರೀಕ್ಷೆಯಲ್ಲಿ ಇರುವಾಗಲೇ ಇಂತಹ ನಿರ್ಬಂಧಗಳು ಅಡಿಕೆ ಬೆಳೆಗಾರರನ್ನು‌ ಮತ್ತಷ್ಟು ಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಕೆಪಿಆರ್‌ಎಸ್ ಹೇಳಿದೆ.

ಅದ್ದರಿಂದ ಅಡಿಕೆ ಬೆಳೆ ಬೆಳೆಯುವ ಪ್ರದೇಶದ ಸಂಸತ್ ಸದಸ್ಯರು ಪ್ರಧಾನ ಮಂತ್ರಿಯ ಮೇಲೆ ಈ ತೊಡಕು ನಿವಾರಿಸುವಂತೆ ಒತ್ತಡ ತರಬೇಕು ಮತ್ತು ರಾಜ್ಯ ಸರ್ಕಾರ ಕೂಡ ತಕ್ಷಣ ಕೇಂದ್ರ ಸರ್ಕಾರವನ್ನು ಈ ಬಗ್ಗೆ ಒತ್ತಾಯಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಒಂದು ಕಡೆ ತನ್ನ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಯಾವುದೆ ರೀತಿಯ ಸುಂಕ ವಿಧಿಸದಂತೆ ಅಮೆರಿಕ ಹಾಗೂ ಯೂರೋಪಿಯನ್ ದೇಶಗಳು ಭಾರತದ ಮೇಲೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿವೆ. ಅದೆ ಸಂದರ್ಭದಲ್ಲಿ ಭಾರತದ ಸರಕುಗಳು ತನ್ನ ದೇಶದೊಳಗೆ ಬರದಂತೆ ಸುಂಕ ಮತ್ತು ಸುಂಕಯೇತರ ಅಡ್ಡಿ ಸೃಷ್ಟಿಸುತ್ತಿದೆ ಎಂದು ಕೆಪಿಆರ್‌ಎಸ್‌ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಮಾವು ಬೆಳೆಯನ್ನು ಇಂತಹದ್ದೆ ನೆಪ ಒಡ್ಡಿ ತಿರಸ್ಕರಿಸಿದ್ದರಿಂದ ಕೋಟ್ಯಾಂತರ ರೂ ಬೆಳೆ ನಾಶವಾಗಿದೆ ಎಂದು ಹೇಳಿರುವ ಸಂಘಟನೆಯು, ರಬ್ಬರ್ ಬೆಳೆಗೂ ಕೂಡ ಅರಣ್ಯ ನಾಶ ಮಾಡಿ ಬೆಳೆದಿಲ್ಲ ಎಂದು ಸರ್ಟಿಫಿಕೇಟ್ ಒದಗಿಸಲು ನಿರ್ಬಂಧ ಒಡ್ಡುತ್ತಿವೆ ಎಂದು ಹೇಳಿದೆ.

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲು ಇತ್ತೀಚಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಂದರ್ಭವನ್ನು ಕೂಡ ದುರುಪಯೋಗ ಮಾಡಿಕೊಂಡಿದೆ. ಇಂತಹ ಕತ್ತು ಹಿಸುಕುವ ಅಮೆರಿಕ ಕ್ರಮಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟುವಾಗಿ ಖಂಡಿಸುತ್ತಿಲ್ಲ ಎಂದು ಸಂಘಟನೆಯು ಆರೋಪಿಸಿದೆ.

ಚೀನಾ ಮತ್ತಿತರ ದೇಶಗಳ ರೀತಿ ತಿರುಗೇಟು ನೀಡಿ ನಮ್ಮ ದೇಶದ ಸ್ವಾವಲಂಬನೆ ಮತ್ತು ರೈತರ ಹಿತ ಕಾಪಾಡುವ ಕ್ರಮ ಕೈಗೊಳ್ಳದೇ ಟ್ರಂಪ್ ನ ಅಡಿಯಾಳಾಗಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ಹೇಳಿರುವ ಸಂಘಟನೆಯು, ಕೇಂದ್ರ ಸರ್ಕಾರ ಮೇಲಿಂದ ಮೇಲೆ ಅಮೆರಿಕದ ಒತ್ತಡಗಳಿಗೆ ಮಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...