Homeಕರ್ನಾಟಕಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

ಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

- Advertisement -
- Advertisement -

ಭಾರತದಿಂದ ರಫ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್‌ಕಾರಕ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಮೇ 8 ,2025 ರಂದು ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಅಡಿಕೆ ಹಾಳೆ ರಫ್ತಿಗೆ

ಅಮೆರಿಕದ ಈ ನಿರ್ಭಂದವು ಅಮೆರಿಕ ಮಾತ್ರವಲ್ಲದೆ ಇಡಿ ಜಗತ್ತಿನ ಅಡಿಕೆ ಹಾಳೆ ಮಾರುಕಟ್ಟೆ ಮೇಲೆ ಕರಾಳ ಪರಿಣಾಮ ಬೀರುತ್ತಿದೆ. ಅಡಿಕೆ ಹಾಳೆಗಳಿಂದ ತಯಾರಾಗುತ್ತಿದ್ದ ಊಟದ ಪರಿಕರಗಳು ಜಾಗತಿಕವಾಗಿ ಸುಮಾರು ಮೂರುವರೆ ಸಾವಿರ ಕೋಟಿ ವಹಿವಾಟು ಇದ್ದು ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆಯೇ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿಗಳಷ್ಟಿದೆ ಎಂದು ರೈತ ಸಂಘಟನೆ ಹೇಳಿದೆ.

ದೇಶದಲ್ಲೇ ಅತಿ ದೊಡ್ಡ ಅಡಿಕೆ ಬೆಳೆ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ಈ ನಿರ್ಭಂಧದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಈ ಉದ್ಯಮದಲ್ಲಿ ತೊಡಗಿರುವ ಸಹಸ್ರಾರು ಜನರ ಉದ್ಯೋಗದ ಮೇಲೆ ದುಷ್ಪರಿಣಾಮಗಳು ಕಂಡು ಬರುತ್ತಿದೆ ಎಂದು ಅದು ತಿಳಿಸಿದೆ.

ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಿಂದ ನಡೆಯುತ್ತಿದ್ದ ರಪ್ತು ವಹಿವಾಟು ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಎಲೆ ಚುಕ್ಕಿ ರೋಗ, ಕೊಳೆ ರೋಗ ಮುಂತಾದ ಸಮಸ್ಯೆಗಳು ಸೇರಿದಂತೆ ಹಲವಾರು ವರ್ಷಗಳ ಬೆಲೆ ಕುಸಿತದ ಸಮಸ್ಯೆ ಅನುಭವಿಸಿ ಸತತ ನಷ್ಟದ ನಂತರ ಈ ವರ್ಷ ಸ್ವಲ್ಪ ಉತ್ತಮ ಬೆಲೆ ಪಡೆಯುವ ನಿರೀಕ್ಷೆಯಲ್ಲಿ ಇರುವಾಗಲೇ ಇಂತಹ ನಿರ್ಬಂಧಗಳು ಅಡಿಕೆ ಬೆಳೆಗಾರರನ್ನು‌ ಮತ್ತಷ್ಟು ಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಕೆಪಿಆರ್‌ಎಸ್ ಹೇಳಿದೆ.

ಅದ್ದರಿಂದ ಅಡಿಕೆ ಬೆಳೆ ಬೆಳೆಯುವ ಪ್ರದೇಶದ ಸಂಸತ್ ಸದಸ್ಯರು ಪ್ರಧಾನ ಮಂತ್ರಿಯ ಮೇಲೆ ಈ ತೊಡಕು ನಿವಾರಿಸುವಂತೆ ಒತ್ತಡ ತರಬೇಕು ಮತ್ತು ರಾಜ್ಯ ಸರ್ಕಾರ ಕೂಡ ತಕ್ಷಣ ಕೇಂದ್ರ ಸರ್ಕಾರವನ್ನು ಈ ಬಗ್ಗೆ ಒತ್ತಾಯಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಒಂದು ಕಡೆ ತನ್ನ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಯಾವುದೆ ರೀತಿಯ ಸುಂಕ ವಿಧಿಸದಂತೆ ಅಮೆರಿಕ ಹಾಗೂ ಯೂರೋಪಿಯನ್ ದೇಶಗಳು ಭಾರತದ ಮೇಲೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿವೆ. ಅದೆ ಸಂದರ್ಭದಲ್ಲಿ ಭಾರತದ ಸರಕುಗಳು ತನ್ನ ದೇಶದೊಳಗೆ ಬರದಂತೆ ಸುಂಕ ಮತ್ತು ಸುಂಕಯೇತರ ಅಡ್ಡಿ ಸೃಷ್ಟಿಸುತ್ತಿದೆ ಎಂದು ಕೆಪಿಆರ್‌ಎಸ್‌ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಮಾವು ಬೆಳೆಯನ್ನು ಇಂತಹದ್ದೆ ನೆಪ ಒಡ್ಡಿ ತಿರಸ್ಕರಿಸಿದ್ದರಿಂದ ಕೋಟ್ಯಾಂತರ ರೂ ಬೆಳೆ ನಾಶವಾಗಿದೆ ಎಂದು ಹೇಳಿರುವ ಸಂಘಟನೆಯು, ರಬ್ಬರ್ ಬೆಳೆಗೂ ಕೂಡ ಅರಣ್ಯ ನಾಶ ಮಾಡಿ ಬೆಳೆದಿಲ್ಲ ಎಂದು ಸರ್ಟಿಫಿಕೇಟ್ ಒದಗಿಸಲು ನಿರ್ಬಂಧ ಒಡ್ಡುತ್ತಿವೆ ಎಂದು ಹೇಳಿದೆ.

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲು ಇತ್ತೀಚಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಂದರ್ಭವನ್ನು ಕೂಡ ದುರುಪಯೋಗ ಮಾಡಿಕೊಂಡಿದೆ. ಇಂತಹ ಕತ್ತು ಹಿಸುಕುವ ಅಮೆರಿಕ ಕ್ರಮಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟುವಾಗಿ ಖಂಡಿಸುತ್ತಿಲ್ಲ ಎಂದು ಸಂಘಟನೆಯು ಆರೋಪಿಸಿದೆ.

ಚೀನಾ ಮತ್ತಿತರ ದೇಶಗಳ ರೀತಿ ತಿರುಗೇಟು ನೀಡಿ ನಮ್ಮ ದೇಶದ ಸ್ವಾವಲಂಬನೆ ಮತ್ತು ರೈತರ ಹಿತ ಕಾಪಾಡುವ ಕ್ರಮ ಕೈಗೊಳ್ಳದೇ ಟ್ರಂಪ್ ನ ಅಡಿಯಾಳಾಗಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ಹೇಳಿರುವ ಸಂಘಟನೆಯು, ಕೇಂದ್ರ ಸರ್ಕಾರ ಮೇಲಿಂದ ಮೇಲೆ ಅಮೆರಿಕದ ಒತ್ತಡಗಳಿಗೆ ಮಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...