Homeಕರ್ನಾಟಕಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

ಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

- Advertisement -
- Advertisement -

ಭಾರತದಿಂದ ರಫ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್‌ಕಾರಕ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಮೇ 8 ,2025 ರಂದು ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಅಡಿಕೆ ಹಾಳೆ ರಫ್ತಿಗೆ

ಅಮೆರಿಕದ ಈ ನಿರ್ಭಂದವು ಅಮೆರಿಕ ಮಾತ್ರವಲ್ಲದೆ ಇಡಿ ಜಗತ್ತಿನ ಅಡಿಕೆ ಹಾಳೆ ಮಾರುಕಟ್ಟೆ ಮೇಲೆ ಕರಾಳ ಪರಿಣಾಮ ಬೀರುತ್ತಿದೆ. ಅಡಿಕೆ ಹಾಳೆಗಳಿಂದ ತಯಾರಾಗುತ್ತಿದ್ದ ಊಟದ ಪರಿಕರಗಳು ಜಾಗತಿಕವಾಗಿ ಸುಮಾರು ಮೂರುವರೆ ಸಾವಿರ ಕೋಟಿ ವಹಿವಾಟು ಇದ್ದು ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆಯೇ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿಗಳಷ್ಟಿದೆ ಎಂದು ರೈತ ಸಂಘಟನೆ ಹೇಳಿದೆ.

ದೇಶದಲ್ಲೇ ಅತಿ ದೊಡ್ಡ ಅಡಿಕೆ ಬೆಳೆ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ಈ ನಿರ್ಭಂಧದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಈ ಉದ್ಯಮದಲ್ಲಿ ತೊಡಗಿರುವ ಸಹಸ್ರಾರು ಜನರ ಉದ್ಯೋಗದ ಮೇಲೆ ದುಷ್ಪರಿಣಾಮಗಳು ಕಂಡು ಬರುತ್ತಿದೆ ಎಂದು ಅದು ತಿಳಿಸಿದೆ.

ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಿಂದ ನಡೆಯುತ್ತಿದ್ದ ರಪ್ತು ವಹಿವಾಟು ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಎಲೆ ಚುಕ್ಕಿ ರೋಗ, ಕೊಳೆ ರೋಗ ಮುಂತಾದ ಸಮಸ್ಯೆಗಳು ಸೇರಿದಂತೆ ಹಲವಾರು ವರ್ಷಗಳ ಬೆಲೆ ಕುಸಿತದ ಸಮಸ್ಯೆ ಅನುಭವಿಸಿ ಸತತ ನಷ್ಟದ ನಂತರ ಈ ವರ್ಷ ಸ್ವಲ್ಪ ಉತ್ತಮ ಬೆಲೆ ಪಡೆಯುವ ನಿರೀಕ್ಷೆಯಲ್ಲಿ ಇರುವಾಗಲೇ ಇಂತಹ ನಿರ್ಬಂಧಗಳು ಅಡಿಕೆ ಬೆಳೆಗಾರರನ್ನು‌ ಮತ್ತಷ್ಟು ಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಕೆಪಿಆರ್‌ಎಸ್ ಹೇಳಿದೆ.

ಅದ್ದರಿಂದ ಅಡಿಕೆ ಬೆಳೆ ಬೆಳೆಯುವ ಪ್ರದೇಶದ ಸಂಸತ್ ಸದಸ್ಯರು ಪ್ರಧಾನ ಮಂತ್ರಿಯ ಮೇಲೆ ಈ ತೊಡಕು ನಿವಾರಿಸುವಂತೆ ಒತ್ತಡ ತರಬೇಕು ಮತ್ತು ರಾಜ್ಯ ಸರ್ಕಾರ ಕೂಡ ತಕ್ಷಣ ಕೇಂದ್ರ ಸರ್ಕಾರವನ್ನು ಈ ಬಗ್ಗೆ ಒತ್ತಾಯಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಒಂದು ಕಡೆ ತನ್ನ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಯಾವುದೆ ರೀತಿಯ ಸುಂಕ ವಿಧಿಸದಂತೆ ಅಮೆರಿಕ ಹಾಗೂ ಯೂರೋಪಿಯನ್ ದೇಶಗಳು ಭಾರತದ ಮೇಲೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿವೆ. ಅದೆ ಸಂದರ್ಭದಲ್ಲಿ ಭಾರತದ ಸರಕುಗಳು ತನ್ನ ದೇಶದೊಳಗೆ ಬರದಂತೆ ಸುಂಕ ಮತ್ತು ಸುಂಕಯೇತರ ಅಡ್ಡಿ ಸೃಷ್ಟಿಸುತ್ತಿದೆ ಎಂದು ಕೆಪಿಆರ್‌ಎಸ್‌ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಮಾವು ಬೆಳೆಯನ್ನು ಇಂತಹದ್ದೆ ನೆಪ ಒಡ್ಡಿ ತಿರಸ್ಕರಿಸಿದ್ದರಿಂದ ಕೋಟ್ಯಾಂತರ ರೂ ಬೆಳೆ ನಾಶವಾಗಿದೆ ಎಂದು ಹೇಳಿರುವ ಸಂಘಟನೆಯು, ರಬ್ಬರ್ ಬೆಳೆಗೂ ಕೂಡ ಅರಣ್ಯ ನಾಶ ಮಾಡಿ ಬೆಳೆದಿಲ್ಲ ಎಂದು ಸರ್ಟಿಫಿಕೇಟ್ ಒದಗಿಸಲು ನಿರ್ಬಂಧ ಒಡ್ಡುತ್ತಿವೆ ಎಂದು ಹೇಳಿದೆ.

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲು ಇತ್ತೀಚಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಂದರ್ಭವನ್ನು ಕೂಡ ದುರುಪಯೋಗ ಮಾಡಿಕೊಂಡಿದೆ. ಇಂತಹ ಕತ್ತು ಹಿಸುಕುವ ಅಮೆರಿಕ ಕ್ರಮಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟುವಾಗಿ ಖಂಡಿಸುತ್ತಿಲ್ಲ ಎಂದು ಸಂಘಟನೆಯು ಆರೋಪಿಸಿದೆ.

ಚೀನಾ ಮತ್ತಿತರ ದೇಶಗಳ ರೀತಿ ತಿರುಗೇಟು ನೀಡಿ ನಮ್ಮ ದೇಶದ ಸ್ವಾವಲಂಬನೆ ಮತ್ತು ರೈತರ ಹಿತ ಕಾಪಾಡುವ ಕ್ರಮ ಕೈಗೊಳ್ಳದೇ ಟ್ರಂಪ್ ನ ಅಡಿಯಾಳಾಗಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ಹೇಳಿರುವ ಸಂಘಟನೆಯು, ಕೇಂದ್ರ ಸರ್ಕಾರ ಮೇಲಿಂದ ಮೇಲೆ ಅಮೆರಿಕದ ಒತ್ತಡಗಳಿಗೆ ಮಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...