Homeಕರ್ನಾಟಕಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

ಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

- Advertisement -
- Advertisement -

ಭಾರತದಿಂದ ರಫ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್‌ಕಾರಕ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಮೇ 8 ,2025 ರಂದು ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಅಡಿಕೆ ಹಾಳೆ ರಫ್ತಿಗೆ

ಅಮೆರಿಕದ ಈ ನಿರ್ಭಂದವು ಅಮೆರಿಕ ಮಾತ್ರವಲ್ಲದೆ ಇಡಿ ಜಗತ್ತಿನ ಅಡಿಕೆ ಹಾಳೆ ಮಾರುಕಟ್ಟೆ ಮೇಲೆ ಕರಾಳ ಪರಿಣಾಮ ಬೀರುತ್ತಿದೆ. ಅಡಿಕೆ ಹಾಳೆಗಳಿಂದ ತಯಾರಾಗುತ್ತಿದ್ದ ಊಟದ ಪರಿಕರಗಳು ಜಾಗತಿಕವಾಗಿ ಸುಮಾರು ಮೂರುವರೆ ಸಾವಿರ ಕೋಟಿ ವಹಿವಾಟು ಇದ್ದು ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆಯೇ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿಗಳಷ್ಟಿದೆ ಎಂದು ರೈತ ಸಂಘಟನೆ ಹೇಳಿದೆ.

ದೇಶದಲ್ಲೇ ಅತಿ ದೊಡ್ಡ ಅಡಿಕೆ ಬೆಳೆ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ಈ ನಿರ್ಭಂಧದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಈ ಉದ್ಯಮದಲ್ಲಿ ತೊಡಗಿರುವ ಸಹಸ್ರಾರು ಜನರ ಉದ್ಯೋಗದ ಮೇಲೆ ದುಷ್ಪರಿಣಾಮಗಳು ಕಂಡು ಬರುತ್ತಿದೆ ಎಂದು ಅದು ತಿಳಿಸಿದೆ.

ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಿಂದ ನಡೆಯುತ್ತಿದ್ದ ರಪ್ತು ವಹಿವಾಟು ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಎಲೆ ಚುಕ್ಕಿ ರೋಗ, ಕೊಳೆ ರೋಗ ಮುಂತಾದ ಸಮಸ್ಯೆಗಳು ಸೇರಿದಂತೆ ಹಲವಾರು ವರ್ಷಗಳ ಬೆಲೆ ಕುಸಿತದ ಸಮಸ್ಯೆ ಅನುಭವಿಸಿ ಸತತ ನಷ್ಟದ ನಂತರ ಈ ವರ್ಷ ಸ್ವಲ್ಪ ಉತ್ತಮ ಬೆಲೆ ಪಡೆಯುವ ನಿರೀಕ್ಷೆಯಲ್ಲಿ ಇರುವಾಗಲೇ ಇಂತಹ ನಿರ್ಬಂಧಗಳು ಅಡಿಕೆ ಬೆಳೆಗಾರರನ್ನು‌ ಮತ್ತಷ್ಟು ಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಕೆಪಿಆರ್‌ಎಸ್ ಹೇಳಿದೆ.

ಅದ್ದರಿಂದ ಅಡಿಕೆ ಬೆಳೆ ಬೆಳೆಯುವ ಪ್ರದೇಶದ ಸಂಸತ್ ಸದಸ್ಯರು ಪ್ರಧಾನ ಮಂತ್ರಿಯ ಮೇಲೆ ಈ ತೊಡಕು ನಿವಾರಿಸುವಂತೆ ಒತ್ತಡ ತರಬೇಕು ಮತ್ತು ರಾಜ್ಯ ಸರ್ಕಾರ ಕೂಡ ತಕ್ಷಣ ಕೇಂದ್ರ ಸರ್ಕಾರವನ್ನು ಈ ಬಗ್ಗೆ ಒತ್ತಾಯಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಒಂದು ಕಡೆ ತನ್ನ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಯಾವುದೆ ರೀತಿಯ ಸುಂಕ ವಿಧಿಸದಂತೆ ಅಮೆರಿಕ ಹಾಗೂ ಯೂರೋಪಿಯನ್ ದೇಶಗಳು ಭಾರತದ ಮೇಲೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿವೆ. ಅದೆ ಸಂದರ್ಭದಲ್ಲಿ ಭಾರತದ ಸರಕುಗಳು ತನ್ನ ದೇಶದೊಳಗೆ ಬರದಂತೆ ಸುಂಕ ಮತ್ತು ಸುಂಕಯೇತರ ಅಡ್ಡಿ ಸೃಷ್ಟಿಸುತ್ತಿದೆ ಎಂದು ಕೆಪಿಆರ್‌ಎಸ್‌ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಮಾವು ಬೆಳೆಯನ್ನು ಇಂತಹದ್ದೆ ನೆಪ ಒಡ್ಡಿ ತಿರಸ್ಕರಿಸಿದ್ದರಿಂದ ಕೋಟ್ಯಾಂತರ ರೂ ಬೆಳೆ ನಾಶವಾಗಿದೆ ಎಂದು ಹೇಳಿರುವ ಸಂಘಟನೆಯು, ರಬ್ಬರ್ ಬೆಳೆಗೂ ಕೂಡ ಅರಣ್ಯ ನಾಶ ಮಾಡಿ ಬೆಳೆದಿಲ್ಲ ಎಂದು ಸರ್ಟಿಫಿಕೇಟ್ ಒದಗಿಸಲು ನಿರ್ಬಂಧ ಒಡ್ಡುತ್ತಿವೆ ಎಂದು ಹೇಳಿದೆ.

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲು ಇತ್ತೀಚಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಂದರ್ಭವನ್ನು ಕೂಡ ದುರುಪಯೋಗ ಮಾಡಿಕೊಂಡಿದೆ. ಇಂತಹ ಕತ್ತು ಹಿಸುಕುವ ಅಮೆರಿಕ ಕ್ರಮಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟುವಾಗಿ ಖಂಡಿಸುತ್ತಿಲ್ಲ ಎಂದು ಸಂಘಟನೆಯು ಆರೋಪಿಸಿದೆ.

ಚೀನಾ ಮತ್ತಿತರ ದೇಶಗಳ ರೀತಿ ತಿರುಗೇಟು ನೀಡಿ ನಮ್ಮ ದೇಶದ ಸ್ವಾವಲಂಬನೆ ಮತ್ತು ರೈತರ ಹಿತ ಕಾಪಾಡುವ ಕ್ರಮ ಕೈಗೊಳ್ಳದೇ ಟ್ರಂಪ್ ನ ಅಡಿಯಾಳಾಗಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ಹೇಳಿರುವ ಸಂಘಟನೆಯು, ಕೇಂದ್ರ ಸರ್ಕಾರ ಮೇಲಿಂದ ಮೇಲೆ ಅಮೆರಿಕದ ಒತ್ತಡಗಳಿಗೆ ಮಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...