HomeಮುಖಪುಟKPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

- Advertisement -
- Advertisement -

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ ಮಾರ್ಗದರ್ಶನ ಮತ್ತು ಸೂಚನೆಯಂತೆಯೇ ಜ್ಞಾನೇಂದ್ರ ಕುಮಾರ್ ತಲೆಮರೆಸಿಕೊಂಡಿದ್ದರು ಎಂಬ ಸತ್ಯ ಹೊರಬಂದಿದ್ದು, ಅವರಿಗೆ ನೆರವಾದ ಆ ‘ಪ್ರಭಾವಿಗಳು’ ಯಾರು ಎಂಬ ಕುತೂಹಲ ಸಾರ್ವಜನಿಕ ವಲಯದಲ್ಲಿ ತೀವ್ರಗೊಂಡಿದೆ.

ಪ್ರಭಾವಿ ವ್ಯಕ್ತಿಗಳು ನೀಡುತ್ತಿದ್ದ ಮಾಹಿತಿ ಮತ್ತು ಸೂಚನೆಗಳ ಆಧಾರದ ಮೇಲೆಯೇ ಜ್ಞಾನೇಂದ್ರ ಕುಮಾರ್ ತಮ್ಮ ವಾಸ್ತವ್ಯದ ಸ್ಥಳಗಳನ್ನು ಪದೇ ಪದೇ ಬದಲಾಯಿಸುತ್ತಿದ್ದರು ಎಂದು ಸಿಐಡಿ ಮೂಲಗಳು ತಿಳಿಸಿವೆ.

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ ಬೆನ್ನಲ್ಲೇ ಜ್ಞಾನೇಂದ್ರ ಕುಮಾರ್ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಮುಂದಿನ ಗುರಿ ತಾವೇ ಆಗಬಹುದು ಎಂಬುದನ್ನು ಅರಿತು, ತಕ್ಷಣವೇ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರಿನಿಂದ ಎಸ್ಕೇಪ್ ಆಗಲು ಯೋಜಿಸಿದ್ದರು.

ರಾಜ್ಯದ ಪ್ರಭಾವಿಗಳ ಸಲಹೆಯಂತೆ ಸಣ್ಣ ಬಟ್ಟೆ ಬ್ಯಾಗ್ ಹಿಡಿದು ದೇವನಹಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದ ಅವರು, ಅಲ್ಲಿಂದ ನೋಯ್ಡಾದಲ್ಲಿ ಬಾಡಿಗೆ ಕೊಠಡಿ ಪಡೆದು ವಾಸ್ತವ್ಯ ಹೂಡಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.

ನೋಯ್ಡಾದಲ್ಲಿ ತಂಗಿದ್ದ ಕೊಠಡಿಗೆ ಜ್ಞಾನೇಂದ್ರ ಕುಮಾರ್ ಅವರು ರಾಷ್ಟ್ರೀಯ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿರುವ ತಮ್ಮ ಗೆಳತಿಯನ್ನು ಕರೆಸಿಕೊಂಡಿದ್ದರು. ಈ ವೇಳೆ ಪ್ರಭಾವಿ ವ್ಯಕ್ತಿಯೊಬ್ಬರಿಂದ ಕರೆ ಬಂದು, “ನಿನ್ನ ಮೇಲೆ ಯಾವುದೇ ಕ್ಷಣದಲ್ಲಾದರೂ ಇಡಿ ದಾಳಿಯಾಗಬಹುದು. ಹಗರಣದ ಪ್ರಮುಖ ದಾಖಲೆಗಳು ಇಡಿ ಕೈಸೇರಿವೆ, ತಕ್ಷಣ ಸ್ಥಳ ಖಾಲಿ ಮಾಡು” ಎಂದು ಎಚ್ಚರಿಸಿದ್ದರು. ಈ ವಿಚಾರ ತಿಳಿದ ಗೆಳತಿ ತೀವ್ರ ಕೋಪಗೊಂಡು, “ನಿನ್ನಿಂದಾಗಿ ನಾನು ತೊಂದರೆಗೆ ಸಿಲುಕುತ್ತೇನೆ” ಎಂದು ಜ್ಞಾನೇಂದ್ರ ಅವರಿಗೆ ಕಪಾಳಮೋಕ್ಷ ಮಾಡಿ ಅಲ್ಲಿಂದ ನಿರ್ಗಮಿಸಿದ್ದರು ಎನ್ನಲಾಗಿದೆ.

ಇಷ್ಟಕ್ಕೇ ನಿಲ್ಲದ ಹೈಡ್ರಾಮಾ, ಪ್ರಭಾವಿ ವ್ಯಕ್ತಿಯ ಸೂಚನೆಯಂತೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ದೆಹಲಿಗೆ ತೆರಳಿ ಜ್ಞಾನೇಂದ್ರ ಕುಮಾರ್ ಅವರನ್ನು ಭೇಟಿಯಾಗಿದ್ದರು. ಇಡಿ ಅಧಿಕಾರಿಗಳು ಬಂಧಿಸಿದರೆ ಅಥವಾ ದಾಖಲೆಗಳನ್ನು ಮುಂದೆ ಇಟ್ಟಾಗ ಹೇಗೆ ಉತ್ತರಿಸಬೇಕು, ತನಿಖೆಯನ್ನು ಹೇಗೆ ಎದುರಿಸಬೇಕು ಎಂದು ಕಾನೂನುನಾತ್ಮಕ ‘ಪಾಠ’ ಮಾಡಿದ್ದರು ಎನ್ನಲಾಗಿದೆ.

ನಿವೃತ್ತ ಅಧಿಕಾರಿಯ ಭೇಟಿಯ ನಂತರ ಜ್ಞಾನೇಂದ್ರ ಕುಮಾರ್ ತಮ್ಮ ಮೂವರು ಐಎಎಸ್ ಬ್ಯಾಚ್‌ಮೇಟ್‌ಗಳನ್ನು ದೆಹಲಿಗೆ ಕರೆಸಿಕೊಂಡು, ನಾಲ್ವರೂ ಸೇರಿ ಶ್ರೀಲಂಕಾಗೆ ತೆರಳಿದ್ದರು. ಶ್ರೀಲಂಕಾದಲ್ಲಿ ಎರಡು ದಿನ ಉಳಿದುಕೊಂಡಿದ್ದಾಗ, ತಮ್ಮ ವಿರುದ್ಧ ಆಯೋಗ ಅಥವಾ ಪೊಲೀಸರು ‘ಲುಕ್ಔಟ್ ನೋಟಿಸ್’ ಹೊರಡಿಸುವ ಸಾಧ್ಯತೆ ಇದೆ ಎಂಬ ಸುಳಿವು ಸಿಕ್ಕಿತ್ತು. ಲುಕ್ಔಟ್ ನೋಟಿಸ್ ಜಾರಿಯಾದರೆ ವಿಮಾನ ನಿಲ್ದಾಣದಲ್ಲೇ ಸಿಕ್ಕಿಬೀಳುವ ಭೀತಿಯಿಂದ ಕೊಲಂಬೊದಿಂದ ತಕ್ಷಣ ಚೆನ್ನೈಗೆ ಮರಳಿದ್ದರು.

ಆ ನಂತರ ಚೆನ್ನೈನಿಂದ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜ್ಞಾನೇಂದ್ರ ಅವರು ಪ್ರಭಾವಿ ವ್ಯಕ್ತಿಗಳ ಸೂಚನೆಯಂತೆ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಯಾವುದೇ ಕಾರಣಕ್ಕೂ ಇಡಿ ನೋಟಿಸ್‌ಗೆ ಉತ್ತರಿಸದಂತೆ ಅವರಿಗೆ ಸೂಚನೆ ನೀಡಲಾಗಿತ್ತು.

ಸಿಐಡಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಕುಮಾರ್ ಎರಡು ದಿನ ವಿಚಾರಣೆಗೆ ಹಾಜರಾಗಿದ್ದರು. ಎರಡನೇ ದಿನ ವಿಚಾರಣೆ ಮುಗಿಸಿ ಸಿಐಡಿ ಕಚೇರಿಯಿಂದ ಹೊರಬರಲು ಮುಂದಾಗುತ್ತಿದ್ದಂತೆ, ಪ್ರಭಾವಿ ವ್ಯಕ್ತಿಯೊಬ್ಬರು ಕರೆ ಮಾಡಿ “ನಿನ್ನ ಮನೆಯ ಬಳಿ ಇಡಿ ಅಧಿಕಾರಿಗಳು ಕಾಯುತ್ತಿದ್ದಾರೆ” ಎಂದು ಎಚ್ಚರಿಸಿದ್ದರು. ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಅವರು ಹೊರಗೆ ಹೋಗದೆ ಮತ್ತೆ ಸಿಐಡಿ ಕಚೇರಿಯೊಳಗೇ ಸುರಕ್ಷಿತವಾಗಿ ಉಳಿಯಲು ಯತ್ನಿಸಿದ್ದರು. ಆದರೆ, ಈ ಹಿಂದೆ ನೀಡಿದ್ದ ನೋಟಿಸ್‌ಗಳಿಗೆ ಸರಿಯಾಗಿ ಸ್ಪಂದಿಸದ ಕಾರಣ ಸಿಐಡಿ ಅಧಿಕಾರಿಗಳೇ ಅವರನ್ನು ಮಧ್ಯರಾತ್ರಿ ಬಂಧಿಸಿದ್ದರು.

ಪ್ರಸ್ತುತ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿದ್ದು, ಕೆಪಿಎಸ್‌ಸಿ ಹಗರಣದ ಮೂಲ, ಪ್ರಭಾವಿ ರಾಜಕಾರಣಿಗಳೊಂದಿಗಿನ ಸಂಪರ್ಕ ಹಾಗೂ ಪರಾರಿಯಾಗಲು ನೆರವಾದ ಜಾಲವನ್ನು ಭೇದಿಸಲು ವಿಚಾರಣೆ ತೀವ್ರಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...