Homeಕರ್ನಾಟಕಕೆ.ಆರ್.ನಗರ ಕ್ಷೇತ್ರ ಸಮೀಕ್ಷೆ: ಅನುಕಂಪದಲ್ಲಿ `ರವಿ’ ಮೂಡುವರೇ? ಪ್ರಭಾವದಲ್ಲಿ `ಸಾರಾ’ ಗೆಲ್ಲುವರೇ?

ಕೆ.ಆರ್.ನಗರ ಕ್ಷೇತ್ರ ಸಮೀಕ್ಷೆ: ಅನುಕಂಪದಲ್ಲಿ `ರವಿ’ ಮೂಡುವರೇ? ಪ್ರಭಾವದಲ್ಲಿ `ಸಾರಾ’ ಗೆಲ್ಲುವರೇ?

- Advertisement -
- Advertisement -

‘ಭತ್ತದ ಕಣಜ’ ಎಂದೇ ಪ್ರಸಿದ್ಧವಾದ ಕೆ.ಆರ್.ನಗರ, ಕಾವೇರಿ ನದಿಯ ಫಲವನ್ನುಂಡ ಮೈಸೂರು ಜಿಲ್ಲೆಯ ಪ್ರಮುಖ ತಾಲ್ಲೂಕುಗಳಲ್ಲಿ ಒಂದು. ಮಂಡ್ಯ ಲೋಕಸಭಾ ವ್ಯಾಪ್ತಿಗೆ ಒಳಪಟ್ಟಿರುವ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರವು ಮೊದಲಿನಿಂದಲೂ ಕಾಂಗ್ರೆಸ್- ಜೆಡಿಎಸ್ ಪೈಪೋಟಿಯ ನೆಲ.

ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಜೆಡಿಎಸ್ಸಿನ ಮಾಜಿ ಸಚಿವ, ಹಾಲಿ ಶಾಸಕ ಸಾ.ರಾ.ಮಹೇಶ್, ದೇವೇಗೌಡರ ಕುಟುಂಬಕ್ಕೆ ಅತ್ಯಾಪ್ತರು. ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರೂ ಆಗಿದ್ದ ಸಾರಾ ಅವರಿಗೆ ಕಳೆದ ಚುನಾವಣೆಯಂತೆ ಈ ಸಲವೂ ಪೈಪೋಟಿ ಎದುರಾಗಿದೆ.

2018ರ ಚುನಾವಣೆಯಲ್ಲಿ 1779 ಮತಗಳ ಅಂತರದಲ್ಲಿ ಸೋಲನ್ನು ಕಂಡಿದ್ದ ಡಿ.ರವಿಶಂಕರ್ ಅವರಿಗೆ ಈ ಸಲವೂ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕೆಲಸ ಮಾಡಿರುವ ರವಿಶಂಕರ್, ಸಾರಾ ಮಹೇಶ್ ಅವರಿಗೆ ಪ್ರಬಲ ಪೈಪೋಟಿ ನೀಡಬಲ್ಲ ಅಭ್ಯರ್ಥಿ.

ಮಾಜಿ ಸಚಿವ, ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್ ಅವರ ಕರ್ಮಭೂಮಿ ಕೆ.ಆರ್.ನಗರ ಕ್ಷೇತ್ರವಾಗಿತ್ತು. ಒಂದು ಕಾಲಕ್ಕೆ ವಿಶ್ವನಾಥ್ ಅವರು ಇಲ್ಲಿಂದ ಗೆಲ್ಲುತ್ತಾ ಬಂದಿದ್ದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಬಳಿಕ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ಸಿನೊಂದಿಗೆ ಸಂಪರ್ಕ ಕಳೆದುಕೊಂಡು, ಸಮ್ಮಿಶ್ರ ಸರ್ಕಾರವನ್ನು ಉಳಿಸಿದವರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಶ್ವನಾಥ್ ನಂತರ ಬಿಜೆಪಿ ಸೇರಿ, ಹುಣಸೂರು ಉಪಚುನಾವಣೆಯಲ್ಲಿ ಸೋತರು. ಒಕ್ಕಲಿಗರು ಮತ್ತು ಕುರುಬ ಸಮುದಾಯದ ಪ್ರಾಬಲ್ಯವಿರುವ ಕೆ.ಆರ್.ನಗರದಲ್ಲಿ ಈಗ ಸಾರಾ ಅವರು ಹಿಡಿತ ಸಾಧಿಸಿದ್ದಾರೆ. 2008, 2013, 2018ರ ಚುನಾವಣೆಗಳಲ್ಲಿ ಜೆ.ಡಿ.ಎಸ್.ನಿಂದ ಪುನಾರಾಯ್ಕೆಯಾಗಿ ಸಚಿವರೂ ಆಗಿ ಕೆಲಸ ಮಾಡಿದ್ದಾರೆ.

ಈವರೆಗಿನ ಚುನಾವಣೆಯನ್ನು ನೋಡುವುದಾದರೆ 1952ರಲ್ಲಿ ಪಕ್ಷೇತರ ಅಭ್ಯರ್ಥಿ ಎಸ್.ಎಚ್.ತಮ್ಮಯ್ಯ, 1957ರಲ್ಲಿ ಕಾಂಗ್ರೆಸ್ಸಿನ ಎಚ್.ಎಂ.ಚನ್ನಬಸಪ್ಪ, 1962ರಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಗೌಡಯ್ಯ, 1967ರಲ್ಲಿ ಪಕ್ಷೇತರಾಗಿ ಕಣಕ್ಕಿಳಿದಿದ್ದ ಎಂ.ಬಸವರಾಜು, 1972ರಲ್ಲಿ ಕಾಂಗ್ರೆಸ್ಸಿನ ಎಚ್.ಬಿ.ಕೆಂಚೇಗೌಡ ಗೆದ್ದಿದ್ದರು. 1978ರಲ್ಲಿ ಇಂದಿರಾ ಕಾಂಗ್ರೆಸ್ ಮೂಲಕ ಕಣಕ್ಕಿಳಿದ ಎ.ಎಚ್.ವಿಶ್ವನಾಥ್ ಜನತಾ ಪಾರ್ಟಿಯ ಎಸ್.ನಂಜಪ್ಪ  ಅವರನ್ನು ಸೋಲಿಸಿದರು. 1983ರಲ್ಲಿ ವಿಶ್ವನಾಥ್ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಜನತಾ ಪಾರ್ಟಿಯ ನಂಜಪ್ಪನವರ ಎದುರು ಸೋಲು ಕಂಡರು. 1985ರಲ್ಲಿಯೂ ಎಸ್.ನಂಜಪ್ಪ ಅವರು ಕಾಂಗ್ರೆಸ್ಸಿನ ವಿಶ್ವನಾಥ್ ಅವರಿಗೆ ಸೋಲುಣಿಸಿದರು. 1989ರಲ್ಲಿ ಎಸ್.ನಂಜಪ್ಪ ಅವರ  ಎದುರು ವಿಶ್ವನಾಥ್ ಭಾರಿ ಅಂತರದಲ್ಲಿ (35,042 ಮತಗಳು) ಜಯಭೇರಿ ಭಾರಿಸಿದರು. 1994ರಲ್ಲಿ  ಎಸ್.ನಂಜಪ್ಪ ಜನತಾ ದಳದ ಹುರಿಯಾಳಾಗಿ 1307 ಮತದಂತರದಲ್ಲಿ ವಿಶ್ವನಾಥ್ ಅವರನ್ನು ಸೋಲಿಸಿದರು. 1999ರಲ್ಲಿ ವಿಶ್ವನಾಥ್, ಜೆಡಿಎಸ್ಸಿನ ಮಂಚನಹಳ್ಳಿ ಮಹಾದೇವ್ ವಿರುದ್ಧ 32993 ಮತಗಳ ಅಂತರದಲ್ಲಿ ದಿಗ್ವಿಜಯ ಸಾಧಿಸಿದ್ದರು. ಆದರೆ ಮಹಾದೇವ್ ಅವರಿಗೆ 2004 ಚುನಾವಣೆ ಕೈಹಿಡಿಯಿತು. ವಿಶ್ವನಾಥ್ ಎದುರು 323 ಮತಗಳ ಕಡಿಮೆ ಅಂತರದಲ್ಲಿ ವಿಜಯ ಪಡೆದರು.

2004ರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಾ.ರಾ.ಮಹೇಶ್ ಪ್ರವೇಶ ರಾಜಕಾರಣಕ್ಕೆ ಆಯಿತು. ಬಿಜೆಪಿಯಿಂದ ಸ್ಪರ್ಧಿಸಿದ ಅವರಿಗೆ ಈ ಚುನಾವಣೆಯಲ್ಲಿ ಸೋಲಿನ ಅನುಭವವಾಯಿತು. ಒಕ್ಕಲಿಗರು, ಕುರುಬರೇ ಪ್ರಬಲವಾಗಿರುವ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆಲ್ಲಲು ಸಾಧ್ಯವಿಲ್ಲವೆಂದು ಅರಿತ ಸಾರಾ ಜೆಡಿಎಸ್ ಸೇರಿಕೊಂಡರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಂಬಿಕೆಯನ್ನು ಉಳಿಸಿಕೊಂಡರು. ಗೌಡರ ಕುಟುಂಬದ ನಂಬಿಕಸ್ಥರಾಗಿ ಬೆಳೆದರು. ಜಿ.ಟಿ.ದೇವೇಗೌಡರಷ್ಟೇ ಮೈಸೂರು ಭಾಗದಲ್ಲಿ ಹಿಡಿತವನ್ನು ಹೊಂದಿರುವ ಸಾರಾ, ಜಿಟಿಡಿಯವರಿಗೆ ಹೋಲಿಸಿದೆ ಒಂದು ಕೈ ಹೆಚ್ಚಿನದಾಗಿಯೇ ದೇವೇಗೌಡರ ಕುಟುಂಬಕ್ಕೆ ವಿಧೇಯರು.

2008ರಲ್ಲಿ ಕಾಂಗ್ರೆಸ್ಸಿನ ವಿಶ್ವನಾಥ್ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾದ ಸಾರಾ, 20548 ಮತಗಳ ಅಂತರದಲ್ಲಿ ಮೊದಲ ಸಲ ಗೆಲುವು ಕಂಡರು. ಒಮ್ಮೆ ಒಕ್ಕಲಿಗ, ಒಮ್ಮೆ ಕುರುಬ ಸಮುದಾಯದ ಅಭ್ಯರ್ಥಿಗಳು ಗೆಲ್ಲುತ್ತಾ ಬಂದಿದ್ದ ಕ್ಷೇತ್ರದಲ್ಲಿ ಈ ಸಂಪ್ರದಾಯವನ್ನು ಮುರಿದು ಒಕ್ಕಲಿಗರ ಹಿಡಿತಕ್ಕೆ ಕ್ಷೇತ್ರವನ್ನು ಮರಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

2008ರಲ್ಲಿ ಸೋತ ಬಳಿಕ ವಿಶ್ವನಾಥ್ ಅವರು ಲೋಕಸಭಾ ಕ್ಷೇತ್ರದತ್ತ ಹೊರಳಿದರು. ಮೈಸೂರು ಕೊಡಗು ಸಂಸದರಾಗಿ 2009ರಲ್ಲಿ ಗೆದ್ದರು. 2013ರಲ್ಲಿ ದೊಡ್ಡಸ್ವಾಮೇಗೌಡರಿಗೆ ಕೆ.ಆರ್.ನಗರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತು. ಆದರೆ ಸಾರಾ ಈ ಚುನಾವಣೆಯಲ್ಲಿ 15052 ಮತಗಳ ಅಂತರದಲ್ಲಿ ಮರುಆಯ್ಕೆಯಾದರು. 2018ರ ಚುನಾವಣೆ ರೋಚಕವಾಗಿತ್ತು. ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿದ ಡಿ.ರವಿಶಂಕರ್ 1779 ಮತದಂತರದಲ್ಲಿ ಸೋತಿದ್ದರಷ್ಟೇ. ಪ್ರಾಯಾಸದ ಗೆಲುವು ಪಡೆದ ಸಾರಾ ಅವರಿಗೆ ರವಿಶಂಕರ್ ಮತ್ತೆ ಎದುರಾಳಿಯಾಗಿದ್ದಾರೆ.

ಕುರುಬ ಸಮುದಾಯದ ಡಿ.ರವಿಶಂಕರ್ ಅವರು ರಾಜಕೀಯ ಹಿನ್ನೆಲೆಯ ಕುಟುಂಬದವರು. 2013ರಲ್ಲಿ ಸೋತಿದ್ದ ದೊಡ್ಡಸ್ವಾಮಿಗೌಡರ ಪುತ್ರ ರವಿಶಂಕರ್. ಜಿಪಂ ಸದಸ್ಯರಾಗಿ, ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದಾರೆ. ಜನರೊಂದಿಗೆ ಬೆರೆಯಬಲ್ಲವರೂ ಆದ ರವಿಯವರ ಕುಟುಂಬದ ಮೇಲೆ ಅನುಕಂಪವೂ ಇದೆ. ಒಮ್ಮೆ ತಂದೆ, ಮತ್ತೊಮ್ಮೆ ಮಗ ಸೋತಿದ್ದಾರೆ. ಈ ಬಾರಿಯೂ ಸೋತರೆ ದೊಡ್ಡಸ್ವಾಮಿಗೌಡರ ಕುಟುಂಬಕ್ಕೆ ಹ್ಯಾಟ್ರಿಕ್ ಸೋಲಾದಂತೆ ಆಗುತ್ತದೆ.

ಬಿಜೆಪಿ ವಿಚಾರಕ್ಕೆ ಬರುವುದಾದರೆ ಇಲ್ಲಿ ಆ ಪಕ್ಷಕ್ಕೆ ನೆಲೆ ಇಲ್ಲ. ಬಿಜೆಪಿಯ ಸಾಂಪ್ರದಾಯಿಕ ಮತದಾರರಾದ ವೀರಶೈವ, ಲಿಂಗಾಯತರು ಕ್ಷೇತ್ರದಲ್ಲಿ ಗಣನೀಯವಾಗಿ ಇಲ್ಲ. ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಹೊಸಹಳ್ಳಿ ವೆಂಕಟೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಬಿಜೆಪಿ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬುದು ಕ್ಷೇತ್ರದ ಮತದಾರರ ಮಾತು. ಈ ಬಾರಿ ಕೆ.ಆರ್.ನಗರದ ರಣಕಣದಲ್ಲಿ ಎಂಟು ಮಂದಿ ಇದ್ದಾರೆ. ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಬಿಎಸ್ಪಿಯ ಭರತ್ ಕುಮಾರ್, ಎಎಪಿಯ ಮುರುಗೇಶ್, ಕೆ.ಆರ್.ಎಸ್. ಪಕ್ಷದ ಪರಮೇಶ್, ಉತ್ತಮ ಪ್ರಜಾಕೀಯದ ಕೆ.ಮೋಹನ್, ಪಕ್ಷೇತರ ಅಭ್ಯರ್ಥಿ ಶಿವುಗೌಡ ಕಣದಲ್ಲಿದ್ದಾರೆ.

ಒಂದು ಅಂದಾಜಿನ ಪ್ರಕಾರ 70,000 ಒಕ್ಕಲಿಗರು, 60,000 ಕುರುಬರು, 15,000 ಮುಸ್ಲಿಮರು, 12,000 ಉಪ್ಪಾರ ಶೆಟ್ಟರು, 6000 ಲಿಂಗಾಯತ ಸಮುದಾಯದ ಮತದಾರರಿದ್ದರೆ; ಪರಿಶಿಷ್ಟ ಜಾತಿಯ 30,000, ಪರಿಶಿಷ್ಟ ಪಂಗಡದ 25,000 ಮತಗಳಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮುಸ್ಲಿಮರು ಯಾವ ಅಭ್ಯರ್ಥಿಯನ್ನು ಕೈಹಿಡಿಯಲಿದ್ದಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ. ಸಾರಾ ಜೊತೆಯಲ್ಲಿ ಒಕ್ಕಲಿಗರು, ರವಿಶಂಕರ್ ಜೊತೆಯಲ್ಲಿ ಕುರುಬರು ನಿಂತುಕೊಳ್ಳುವುದು ಸ್ಪಷ್ಟ. `ಹಣಾ’ಹಣಿಯ ವಿಚಾರದಲ್ಲಿ ಸಾರಾ ಅವರಿಗೆ ಹೋಲಿಸಿದರೆ ರವಿಶಂಕರ್ ಪ್ರಭಾವ ಕಡಿಮೆ.

ಕಳೆದ ಆರು ತಿಂಗಳಿಂದ ಸಾರಾ ಕ್ಷೇತ್ರದಲ್ಲಿಯೇ ಬೀಡುಬಿಟ್ಟಿದ್ದಾರೆ. ಮದುವೆ, ಸಾವು, ನೋವು ಯಾವುದೇ ಸಂಭವಿಸಿದರೂ ಅಲ್ಲಿ ಸಾರಾ ಹಾಜರಿರುತ್ತಾರೆ. ಎಲ್ಲ ಜನರೊಂದಿಗೂ ಒಳ್ಳೆಯ ಸಂಪರ್ಕ ಹೊಂದಿದ್ದಾರೆ. ಜನರಿಗೆ ಸುಲಭವಾಗಿ ಸಿಗುತ್ತಾರೆ. ಕ್ಷೇತ್ರದಲ್ಲಿ  ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಈಗಾಗಲೇ ಪ್ರಚಾರ ನಡೆಸಿದ್ದಾರೆ. ಸಾರಾ ಅವರು ಮಾಡುತ್ತಿರುವ ಕೆಲಸಗಳು, ನಿರಂತರ ಜನಸಂಪರ್ಕ  ಅವರ ಕೈಹಿಡಿಯಲಿವೆ ಎಂದು ಊಹಿಸಲಾಗಿದೆ. ಅಲ್ಲದೆ `ಸಾಲಿಗ್ರಾಮ’ವನ್ನು ತಾಲ್ಲೂಕನ್ನಾಗಿ ಮಾಡಿದ್ದು ಸಾರಾ ಅವರ ಮೇಲೆ ಒಳ್ಳೆಯ ಅಭಿಪ್ರಾಯ ಮೂಡಲು ಕಾರಣವಾಗಿದೆ.

ಇತ್ತ ರವಿಶಂಕರ್ ಸುಮ್ಮನೆ ಕುಳಿತ್ತಿಲ್ಲ.  ಎರಡು ವರ್ಷಗಳಿಂದಲೂ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕಾರಣ ರವಿಶಂಕರ್ ಅವರಿಗೆ ಮತ್ತೊಂದು ಅವಕಾಶವನ್ನು ಕಾಂಗ್ರೆಸ್ ನೀಡಿರುವುದು ಪಕ್ಕಾ. ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯವನ್ನು ರವಿ ಹೊಂದಿದ್ದಾರೆ. ಜನಾಶೀರ್ವಾದ ಯಾತ್ರೆಯನ್ನು ಕ್ಷೇತ್ರದ್ಯಾಂತ ನಡೆಸಿ, ಮತಯಾಚಿಸುತ್ತಿದ್ದಾರೆ. ಎರಡು ವರ್ಷಗಳಿಂದಲೂ ಕ್ಷೇತ್ರದ ಪ್ರತಿ ಮನೆಗೂ ಭೇಟಿ ನೀಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಸಾರಾ ಅವರಂತೆಯೇ ಯಾವುದೇ ಸಾವು, ನೋವು, ಶುಭಸಮಾರಂಭಗಳಲ್ಲಿ ರವಿ ಪಾಲ್ಗೊಳ್ಳುತ್ತಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಇವರನ್ನು ಕ್ಷೇತ್ರದ ಜನತೆ ಹೇಗೆ ನೋಡುತ್ತಾರೆಂಬ ಕುತೂಹಲ ಸದ್ಯಕ್ಕೆ ಉಳಿದಿದೆ. ರವಿಯವರ ಮೇಲಿನ ಅನುಕಂಪ ಮತ್ತು ಸಾರಾ ಅವರಿಗಿರುವ ಪ್ರಭಾವದ ಮೇಲೆ ಫಲಿತಾಂಶ ತೋಯ್ದಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...