Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...