Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....