Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...