Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...