Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...