Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...