Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...