Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...