Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...