Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...