Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...