Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...