Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...