Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....