Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...