Homeಕರ್ನಾಟಕಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಎಡಗೈ- ಬಲಗೈ ಸಮುದಾಯಗಳ ನಡುವಿನ ಒಗ್ಗಟ್ಟಿನ ಕೊರತೆಯು ಅಟ್ರಾಸಿಟಿ ಪ್ರಕರಣ ಮುಚ್ಚಿಹಾಕಲು ಬಳಕೆಯಾಗುತ್ತಿದೆ ಎಂಬ ಅನುಮಾನಗಳು ಮೂಡಿವೆ.

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದಾರೆಂದು 27 ಮಂದಿ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ, ಈ ಪ್ರಕರಣವನ್ನು ಮುಚ್ಚಿ ಹಾಕಲು ದಲಿತ ಮುಖಂಡರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ದಲಿತರಲ್ಲಿನ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳ ನಡುವಿನ ಮುನಿಸುಗಳ ಲಾಭ ಪಡೆಯಲು ಸವರ್ಣಿಯರು ಯತ್ನಿಸುತ್ತಿದ್ದಾರೆ. ಹರಿಹರಪುರದಲ್ಲಿ ಮಾದಿಗ ಸಮುದಾಯದ ಮೇಲೆ ಹಲ್ಲೆಯಾಗಿದ್ದು, ಹೊಲೆಯ ಸಮುದಾಯದ ಮುಖಂಡರನ್ನು ಕರೆಸಿ ಸವರ್ಣೀಯರು ಮಾತು ಕತೆ ನಡೆಸಿ, ಅವರಿಂದ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ.

ದಲಿತ ಮುಖಂಡರು ಮಾತುಕತೆ ನಡೆಸಿದ್ದಾರೆಂದು ವರದಿಗಳು ಆದ ಬಳಿಕ ಹರಿಹರಪುರದ ಸಂತ್ರಸ್ತ ಕುಟುಂಬಗಳ ಬಳಿ ವಿಚಾರಿಸಿದಾಗ, “ನಾವು ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಸವರ್ಣೀಯರ ಆಮಿಷಕ್ಕೆ ಒಳಗಾಗಿರುವವರು ದಲಿತರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಯತ್ನಿಸುತ್ತಿದ್ದಾರೆ. ಹಲ್ಲೆಗೊಳಗಾಗಿರುವ ಯುವಕರ ಮೇಲೆ ಸುಳ್ಳು ಆಪಾದನೆಗಳನ್ನು ಹೊರಿಸಿ ಪ್ರಕರಣ ಮುಚ್ಚಲು ಯತ್ನಿಸುತ್ತಿದ್ದಾರೆ” ಎಂದು ಹರಿಹರಪುರ ಮಾದಿಗ ಸಮುದಾಯದ ಮುಖಂಡರು, ಮಾದಿಗ ಸಮುದಾಯದ ಪರ ನಿಂತಿರುವ ಹೊಲೆಯ ಸಮುದಾಯದ ಮುಖಂಡರು ಹೇಳುತ್ತಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಮೇಲುಕೋಟೆ- ಪಾಂಡವಪುರ ಶಾಸಕರ ಸಂಧಾನ ಸಭೆ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಲಿತ ಮುಖಂಡರೊಂದಿಗೆ ಮೇಲುಕೋಟೆ- ಪಾಂಡವಪುರ ಕ್ಷೇತ್ರದ ಶಾಸಕ ಸಿ.ಎಸ್‌.ಪುಟ್ಟರಾಜು ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದೆ. ತನ್ನದಲ್ಲದ ಕ್ಷೇತ್ರದ ವಿವಾದದಲ್ಲಿ ಸಿ.ಎಸ್‌.ಪುಟ್ಟರಾಜು ಅವರು ಪಾಲ್ಗೊಂಡಿದ್ದು ಏತಕ್ಕೆ ಎಂಬ ಗೊಂದಲಗಳೂ ಉಂಟಾಗಿವೆ. ಕೆ.ಆರ್‌.ಪೇಟೆಗೆ ಬೇರೊಂದು ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಶಾಸಕರು, ಹಾಗೆಯೇ ಸಂಧಾನ ಸಭೆಗೂ ಆಗಮಿಸಿದ್ದರಷ್ಟೇ ಎಂದು ಸವರ್ಣೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.

“ಹರಿಹರಪುರದಲ್ಲಿ ಯಾವುದೇ ದಲಿತ ದೌರ್ಜನ್ಯ ನಡೆದಿಲ್ಲ. ಘಟನೆ ಶುದ್ಧ ಕಟ್ಟುಕತೆ. ಹಿಂದೆ ಕಳ್ಳತನ ಮಾಡಿ ಸಿಕ್ಕಿಬಿದ್ದವರು, ಹುಡುಗಿಯರನ್ನು ರೇಗಿಸಿದವರು, ರೇಪ್‌ ಕೇಸ್‌ನಲ್ಲಿ ಜೈಲಿಗೆ ಹೋಗಿ ಬಂದಿರುವ ಏಳೆಂಟು ಜನ ಅಯೋಗ್ಯರನ್ನು ಉಳಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಯತ್ನಿಸುತ್ತಿವೆ. ವಕೀಲರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ದಲಿತ ಮುಖಂಡ ಬಸ್ತಿ ರಂಗಪ್ಪ ಅವರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯವರು ಈ ಘಟನೆ ಶುದ್ಧ ಸುಳ್ಳು ಎಂದು ಹೇಳಿದ್ದಾರೆ” ಎಂದು ಮಾಧ್ಯಮವೊಂದರ ಜೊತೆ ಸವರ್ಣೀಯ ಸಮುದಾಯದ ಮುಖಂಡ, ಆರೋಪಿ ಶ್ರೀನಿವಾಸ್‌ ಮಾತನಾಡಿದ್ದು, ವಿಡಿಯೊ ವೈರಲ್ ಆಗಿದೆ. ಬಸ್ತಿ ರಂಗಪ್ಪ ಸಮ್ಮುಖದಲ್ಲಿ ಶ್ರೀನಿವಾಸ್ ಅವರು ಮಾತನಾಡುವುದನ್ನು ಇಲ್ಲಿ ಗಮನಿಸಬಹುದು.

ದೂರು ನೀಡಿರುವ ಯುವಕರು ಈ ಹಿಂದೆ ರೇಪ್‌ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಸವರ್ಣೀಯ ಮುಖಂಡರ ಆರೋಪದ ಕುರಿತು ಸ್ಪಷ್ಟನೆಯನ್ನು ಬಸ್ತಿ ರಂಗಪ್ಪ ಅವರಲ್ಲಿ ಕೇಳಿದಾಗ, “ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದರು. “ರೇಪ್‌ ಕೇಸ್‌ಗಳಲ್ಲಿ ನಮ್ಮ ಹುಡುಗರು ಯಾರೂ ಸೇರಿಲ್ಲ. ಆದರೆ ದೇವಾಲಯ ಪ್ರವೇಶದಿಂದ ಗಲಾಟೆಯಾಗಿದೆ ಎಂಬುದು ಸುಳ್ಳು. ದಲಿತ ಹುಡುಗರು ಅಲ್ಲಿನ ಹುಡುಗಿಯರಿಗೆ ಬಾಳೆಹಣ್ಣಿನಲ್ಲಿ ತೀಡಿದ್ದಾರೆ, ಬಲೂನಿನಲ್ಲಿ ಹೊಡೆದಿದ್ದಾರೆ. ಹೀಗಾಗಿ ಗಲಾಟೆಯಾಗಿದೆ” ಎಂದರು. “ಇದಕ್ಕೆ ಪುರಾವೆಗಳು ಇದ್ದಾವೆಯೇ” ಎಂದು ಕೇಳಿದಾಗ, “ವಿಡಿಯೊ ಕಳಿಸುತ್ತೇನೆ” ಎಂದರು. ಶ್ರೀನಿವಾಸ್‌ ಅವರು ವಿಡಿಯೊವೊಂದನ್ನು ಕಳುಹಿಸಿದ್ದು, ದಲಿತ ಹುಡುಗರು ಸಿನಿಮಾ ಹಾಡೊಂಡಕ್ಕೆ ಕುಣಿಯುತ್ತಿರುವುದನ್ನು ಕಾಣಬಹುದೇ ಹೊರತು, ಹುಡುಗಿಯರಿಗೆ ಬಾಳೇಹಣ್ಣಿನಲ್ಲಿ ಹೊಡೆದಿರುವುದಾಗಲೀ, ಬಲೂನಿನಲ್ಲಿ ಹೊಡೆದಿರುವುದಾಗಲೀ ಕಂಡು ಬಂದಿಲ್ಲ.

“ನೀವು ಹೇಳುತ್ತಿರುವುದಕ್ಕೂ, ಇಲ್ಲಿನ ವಿಡಿಯೊಕ್ಕೂ ಯಾವುದೇ ಸಂಬಂಧಗಳು ಕಂಡು ಬರುತ್ತಿಲ್ಲ. ಬೇರೆ ವಿಡಿಯೊ ಇದ್ದರೆ ಕಳಿಸಿಕೊಡಿ” ಎಂದು ಕೇಳಿದಾಗ, ಕಳಿಸಿಕೊಡುವುದಾಗಿ ತಿಳಿಸಿದ್ದರು. ಆದರೆ ಎಲ್ಲ ವಿಡಿಯೊಗಳು ಪೊಲೀಸರ ಬಳಿ ಇವೆ ಹೊರತು, ನಮ್ಮಲ್ಲಿ ಈಗ ಇಲ್ಲ ಎಂದು ತಿಳಿಸಿದರು. (ಹಾಗೇನಾದರೂ ವಿಡಿಯೋ ಸಿಕ್ಕಲ್ಲಿ, ಸತ್ಯಾಸತ್ಯತೆ ಪರಿಶೀಲಿಸಿ ಓದುಗರಿಗೆ ನೀಡಲಾಗುವುದು).

“ಐದು ಹುಡುಗರು ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಡೀ ದಲಿತ ಸಮುದಾಯವಲ್ಲ. ಹೀಗಾಗಿ ತಪ್ಪು ಮಾಡಿರುವ ಸವರ್ಣೀಯರಿಗೂ, ದಲಿತರಿಗೂ ಶಿಕ್ಷೆಯಾಗಲಿ. ಇಲ್ಲಿ ಜಾತಿ ಜಾತಿ ತರಬಾರದು” ಎಂಬುದು ಬಸ್ತಿ ರಂಗಪ್ಪ ಅವರ ವಾದ. ಆದರೆ ಪೊಲೀಸರಿಗೆ ದೂರು ನೀಡಿರುವವರಲ್ಲಿ ಒಟ್ಟು ಹನ್ನೆರಡು ಮಂದಿ ಇದ್ದು, ಅಂಗವಿಕಲ ವ್ಯಕ್ತಿಯೊಬ್ಬರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದನ್ನು ನಾನುಗೌರಿ.ಕಾಂ ಹೀಗಾಗಲೇ ವರದಿ ಮಾಡಿದೆ. (ವರದಿಯನ್ನು ಇಲ್ಲಿ ಓದಬಹುದು).

ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರ ಹೆಸರುಗಳನ್ನು ಬಸ್ತಿ ರಂಗಪ್ಪ ನಮ್ಮ ಗಮನಕ್ಕೆ ತಂದರು. ‌ಹೆಚ್ಚಿನ ಪರಿಶೀಲನೆ ನಡೆಸಿದಾಗ, ಈ ಸಭೆಯಲ್ಲಿ ಸಂತ್ರಸ್ತ ಕುಟುಂಬದ ಒಬ್ಬರೇ ಒಬ್ಬರು ದಲಿತರು ಪಾಲ್ಗೊಂಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿತು. ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರು ಬಲಗೈ (ಹೊಲೆಯ) ಸಮುದಾಯಕ್ಕೆ ಸೇರಿದವರು. ಹಲ್ಲೆಯಾಗಿರುವುದು ಎಡಗೈ (ಮಾದಿಗ) ಸಮುದಾಯದ ಮೇಲೆ. ಎಡಗೈ ಮತ್ತು ಬಲಗೈ ಸಮುದಾಯಗಳು ಅಣ್ಣತಮ್ಮಂದಿರಂತೆ ಇರದೆ ಕಿತ್ತಾಡಿಕೊಳ್ಳುತ್ತಿರುವುದರಿಂದ ಇದರ ಲಾಭವನ್ನು ಪಡೆಯಲು ಸವರ್ಣಿಯರು ಯತ್ನಿಸಿದ್ದಾರೆ ಎಂದು ಸಂತ್ರಸ್ತ ಯುವಕರಾದ ದರ್ಶನ್‌ ಮತ್ತು ಸಂಜು ಆರೋಪಿಸಿದ್ದಾರೆ.

ನಮ್ಮೊಂದಿಗೆ ಮಾತನಾಡಿರುವ ಆರೋಪಿ ಶ್ರೀನಿವಾಸ್, “ನಮ್ಮ ಊರಿನಲ್ಲಿ ಯಾವುದೇ ಜಾತಿ ವ್ಯವಸ್ಥೆ ಇಲ್ಲ. ಇದು ಜಾತಿ ಕಾರಣಕ್ಕೆ ನಡೆದ ಗಲಾಟೆಯಲ್ಲ. ಗಲಾಟೆ ಮಾಡಿದವರು ಹೀಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ” ಎಂದರು. “ಹರಿಹರಪುರವು ಜಾತಿ ಮುಕ್ತ ಗ್ರಾಮವೆಂದು ನೀವು ಹೇಳುತ್ತಿದ್ದೀರಿ. ಭಾರತಕ್ಕೆ ಇಂತಹ ಗ್ರಾಮಗಳ ಅಗತ್ಯವಿದೆ. ಮುಂದೊಮ್ಮೆ ಈ ಕುರಿತು ಪರಿಶೀಲಿಸಿ ವಿಶೇಷ ಲೇಖನ ಬರೆಯಲಾಗುವುದು” ಎಂದು ತಿಳಿಸಲಾಗಿದೆ.

ಸವರ್ಣೀಯರ ಮೇಲೆ ದೂರು ನೀಡಿರುವ ಯುವಕರನ್ನು ಸಂಪರ್ಕಿಸಿದಾಗ “ನಮ್ಮ ಮೇಲೆ ಯಾವುದೇ ಅತ್ಯಾಚಾರ ಪ್ರಕರಣ ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ. “ದಲಿತರು ಎಡಗೈ- ಬಲಗೈ ಎಂದು ಒಡೆದುಹೋದರೆ ಮುಂದೆ ಹೀಗೆಯೇ ದೌರ್ಜನ್ಯಕ್ಕೆ ಒಳಗಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...