Homeಕರ್ನಾಟಕಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಎಡಗೈ- ಬಲಗೈ ಸಮುದಾಯಗಳ ನಡುವಿನ ಒಗ್ಗಟ್ಟಿನ ಕೊರತೆಯು ಅಟ್ರಾಸಿಟಿ ಪ್ರಕರಣ ಮುಚ್ಚಿಹಾಕಲು ಬಳಕೆಯಾಗುತ್ತಿದೆ ಎಂಬ ಅನುಮಾನಗಳು ಮೂಡಿವೆ.

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದಾರೆಂದು 27 ಮಂದಿ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ, ಈ ಪ್ರಕರಣವನ್ನು ಮುಚ್ಚಿ ಹಾಕಲು ದಲಿತ ಮುಖಂಡರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ದಲಿತರಲ್ಲಿನ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳ ನಡುವಿನ ಮುನಿಸುಗಳ ಲಾಭ ಪಡೆಯಲು ಸವರ್ಣಿಯರು ಯತ್ನಿಸುತ್ತಿದ್ದಾರೆ. ಹರಿಹರಪುರದಲ್ಲಿ ಮಾದಿಗ ಸಮುದಾಯದ ಮೇಲೆ ಹಲ್ಲೆಯಾಗಿದ್ದು, ಹೊಲೆಯ ಸಮುದಾಯದ ಮುಖಂಡರನ್ನು ಕರೆಸಿ ಸವರ್ಣೀಯರು ಮಾತು ಕತೆ ನಡೆಸಿ, ಅವರಿಂದ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ.

ದಲಿತ ಮುಖಂಡರು ಮಾತುಕತೆ ನಡೆಸಿದ್ದಾರೆಂದು ವರದಿಗಳು ಆದ ಬಳಿಕ ಹರಿಹರಪುರದ ಸಂತ್ರಸ್ತ ಕುಟುಂಬಗಳ ಬಳಿ ವಿಚಾರಿಸಿದಾಗ, “ನಾವು ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಸವರ್ಣೀಯರ ಆಮಿಷಕ್ಕೆ ಒಳಗಾಗಿರುವವರು ದಲಿತರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಯತ್ನಿಸುತ್ತಿದ್ದಾರೆ. ಹಲ್ಲೆಗೊಳಗಾಗಿರುವ ಯುವಕರ ಮೇಲೆ ಸುಳ್ಳು ಆಪಾದನೆಗಳನ್ನು ಹೊರಿಸಿ ಪ್ರಕರಣ ಮುಚ್ಚಲು ಯತ್ನಿಸುತ್ತಿದ್ದಾರೆ” ಎಂದು ಹರಿಹರಪುರ ಮಾದಿಗ ಸಮುದಾಯದ ಮುಖಂಡರು, ಮಾದಿಗ ಸಮುದಾಯದ ಪರ ನಿಂತಿರುವ ಹೊಲೆಯ ಸಮುದಾಯದ ಮುಖಂಡರು ಹೇಳುತ್ತಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಮೇಲುಕೋಟೆ- ಪಾಂಡವಪುರ ಶಾಸಕರ ಸಂಧಾನ ಸಭೆ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಲಿತ ಮುಖಂಡರೊಂದಿಗೆ ಮೇಲುಕೋಟೆ- ಪಾಂಡವಪುರ ಕ್ಷೇತ್ರದ ಶಾಸಕ ಸಿ.ಎಸ್‌.ಪುಟ್ಟರಾಜು ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದೆ. ತನ್ನದಲ್ಲದ ಕ್ಷೇತ್ರದ ವಿವಾದದಲ್ಲಿ ಸಿ.ಎಸ್‌.ಪುಟ್ಟರಾಜು ಅವರು ಪಾಲ್ಗೊಂಡಿದ್ದು ಏತಕ್ಕೆ ಎಂಬ ಗೊಂದಲಗಳೂ ಉಂಟಾಗಿವೆ. ಕೆ.ಆರ್‌.ಪೇಟೆಗೆ ಬೇರೊಂದು ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಶಾಸಕರು, ಹಾಗೆಯೇ ಸಂಧಾನ ಸಭೆಗೂ ಆಗಮಿಸಿದ್ದರಷ್ಟೇ ಎಂದು ಸವರ್ಣೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.

“ಹರಿಹರಪುರದಲ್ಲಿ ಯಾವುದೇ ದಲಿತ ದೌರ್ಜನ್ಯ ನಡೆದಿಲ್ಲ. ಘಟನೆ ಶುದ್ಧ ಕಟ್ಟುಕತೆ. ಹಿಂದೆ ಕಳ್ಳತನ ಮಾಡಿ ಸಿಕ್ಕಿಬಿದ್ದವರು, ಹುಡುಗಿಯರನ್ನು ರೇಗಿಸಿದವರು, ರೇಪ್‌ ಕೇಸ್‌ನಲ್ಲಿ ಜೈಲಿಗೆ ಹೋಗಿ ಬಂದಿರುವ ಏಳೆಂಟು ಜನ ಅಯೋಗ್ಯರನ್ನು ಉಳಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಯತ್ನಿಸುತ್ತಿವೆ. ವಕೀಲರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ದಲಿತ ಮುಖಂಡ ಬಸ್ತಿ ರಂಗಪ್ಪ ಅವರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯವರು ಈ ಘಟನೆ ಶುದ್ಧ ಸುಳ್ಳು ಎಂದು ಹೇಳಿದ್ದಾರೆ” ಎಂದು ಮಾಧ್ಯಮವೊಂದರ ಜೊತೆ ಸವರ್ಣೀಯ ಸಮುದಾಯದ ಮುಖಂಡ, ಆರೋಪಿ ಶ್ರೀನಿವಾಸ್‌ ಮಾತನಾಡಿದ್ದು, ವಿಡಿಯೊ ವೈರಲ್ ಆಗಿದೆ. ಬಸ್ತಿ ರಂಗಪ್ಪ ಸಮ್ಮುಖದಲ್ಲಿ ಶ್ರೀನಿವಾಸ್ ಅವರು ಮಾತನಾಡುವುದನ್ನು ಇಲ್ಲಿ ಗಮನಿಸಬಹುದು.

ದೂರು ನೀಡಿರುವ ಯುವಕರು ಈ ಹಿಂದೆ ರೇಪ್‌ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಸವರ್ಣೀಯ ಮುಖಂಡರ ಆರೋಪದ ಕುರಿತು ಸ್ಪಷ್ಟನೆಯನ್ನು ಬಸ್ತಿ ರಂಗಪ್ಪ ಅವರಲ್ಲಿ ಕೇಳಿದಾಗ, “ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದರು. “ರೇಪ್‌ ಕೇಸ್‌ಗಳಲ್ಲಿ ನಮ್ಮ ಹುಡುಗರು ಯಾರೂ ಸೇರಿಲ್ಲ. ಆದರೆ ದೇವಾಲಯ ಪ್ರವೇಶದಿಂದ ಗಲಾಟೆಯಾಗಿದೆ ಎಂಬುದು ಸುಳ್ಳು. ದಲಿತ ಹುಡುಗರು ಅಲ್ಲಿನ ಹುಡುಗಿಯರಿಗೆ ಬಾಳೆಹಣ್ಣಿನಲ್ಲಿ ತೀಡಿದ್ದಾರೆ, ಬಲೂನಿನಲ್ಲಿ ಹೊಡೆದಿದ್ದಾರೆ. ಹೀಗಾಗಿ ಗಲಾಟೆಯಾಗಿದೆ” ಎಂದರು. “ಇದಕ್ಕೆ ಪುರಾವೆಗಳು ಇದ್ದಾವೆಯೇ” ಎಂದು ಕೇಳಿದಾಗ, “ವಿಡಿಯೊ ಕಳಿಸುತ್ತೇನೆ” ಎಂದರು. ಶ್ರೀನಿವಾಸ್‌ ಅವರು ವಿಡಿಯೊವೊಂದನ್ನು ಕಳುಹಿಸಿದ್ದು, ದಲಿತ ಹುಡುಗರು ಸಿನಿಮಾ ಹಾಡೊಂಡಕ್ಕೆ ಕುಣಿಯುತ್ತಿರುವುದನ್ನು ಕಾಣಬಹುದೇ ಹೊರತು, ಹುಡುಗಿಯರಿಗೆ ಬಾಳೇಹಣ್ಣಿನಲ್ಲಿ ಹೊಡೆದಿರುವುದಾಗಲೀ, ಬಲೂನಿನಲ್ಲಿ ಹೊಡೆದಿರುವುದಾಗಲೀ ಕಂಡು ಬಂದಿಲ್ಲ.

“ನೀವು ಹೇಳುತ್ತಿರುವುದಕ್ಕೂ, ಇಲ್ಲಿನ ವಿಡಿಯೊಕ್ಕೂ ಯಾವುದೇ ಸಂಬಂಧಗಳು ಕಂಡು ಬರುತ್ತಿಲ್ಲ. ಬೇರೆ ವಿಡಿಯೊ ಇದ್ದರೆ ಕಳಿಸಿಕೊಡಿ” ಎಂದು ಕೇಳಿದಾಗ, ಕಳಿಸಿಕೊಡುವುದಾಗಿ ತಿಳಿಸಿದ್ದರು. ಆದರೆ ಎಲ್ಲ ವಿಡಿಯೊಗಳು ಪೊಲೀಸರ ಬಳಿ ಇವೆ ಹೊರತು, ನಮ್ಮಲ್ಲಿ ಈಗ ಇಲ್ಲ ಎಂದು ತಿಳಿಸಿದರು. (ಹಾಗೇನಾದರೂ ವಿಡಿಯೋ ಸಿಕ್ಕಲ್ಲಿ, ಸತ್ಯಾಸತ್ಯತೆ ಪರಿಶೀಲಿಸಿ ಓದುಗರಿಗೆ ನೀಡಲಾಗುವುದು).

“ಐದು ಹುಡುಗರು ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಡೀ ದಲಿತ ಸಮುದಾಯವಲ್ಲ. ಹೀಗಾಗಿ ತಪ್ಪು ಮಾಡಿರುವ ಸವರ್ಣೀಯರಿಗೂ, ದಲಿತರಿಗೂ ಶಿಕ್ಷೆಯಾಗಲಿ. ಇಲ್ಲಿ ಜಾತಿ ಜಾತಿ ತರಬಾರದು” ಎಂಬುದು ಬಸ್ತಿ ರಂಗಪ್ಪ ಅವರ ವಾದ. ಆದರೆ ಪೊಲೀಸರಿಗೆ ದೂರು ನೀಡಿರುವವರಲ್ಲಿ ಒಟ್ಟು ಹನ್ನೆರಡು ಮಂದಿ ಇದ್ದು, ಅಂಗವಿಕಲ ವ್ಯಕ್ತಿಯೊಬ್ಬರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದನ್ನು ನಾನುಗೌರಿ.ಕಾಂ ಹೀಗಾಗಲೇ ವರದಿ ಮಾಡಿದೆ. (ವರದಿಯನ್ನು ಇಲ್ಲಿ ಓದಬಹುದು).

ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರ ಹೆಸರುಗಳನ್ನು ಬಸ್ತಿ ರಂಗಪ್ಪ ನಮ್ಮ ಗಮನಕ್ಕೆ ತಂದರು. ‌ಹೆಚ್ಚಿನ ಪರಿಶೀಲನೆ ನಡೆಸಿದಾಗ, ಈ ಸಭೆಯಲ್ಲಿ ಸಂತ್ರಸ್ತ ಕುಟುಂಬದ ಒಬ್ಬರೇ ಒಬ್ಬರು ದಲಿತರು ಪಾಲ್ಗೊಂಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿತು. ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರು ಬಲಗೈ (ಹೊಲೆಯ) ಸಮುದಾಯಕ್ಕೆ ಸೇರಿದವರು. ಹಲ್ಲೆಯಾಗಿರುವುದು ಎಡಗೈ (ಮಾದಿಗ) ಸಮುದಾಯದ ಮೇಲೆ. ಎಡಗೈ ಮತ್ತು ಬಲಗೈ ಸಮುದಾಯಗಳು ಅಣ್ಣತಮ್ಮಂದಿರಂತೆ ಇರದೆ ಕಿತ್ತಾಡಿಕೊಳ್ಳುತ್ತಿರುವುದರಿಂದ ಇದರ ಲಾಭವನ್ನು ಪಡೆಯಲು ಸವರ್ಣಿಯರು ಯತ್ನಿಸಿದ್ದಾರೆ ಎಂದು ಸಂತ್ರಸ್ತ ಯುವಕರಾದ ದರ್ಶನ್‌ ಮತ್ತು ಸಂಜು ಆರೋಪಿಸಿದ್ದಾರೆ.

ನಮ್ಮೊಂದಿಗೆ ಮಾತನಾಡಿರುವ ಆರೋಪಿ ಶ್ರೀನಿವಾಸ್, “ನಮ್ಮ ಊರಿನಲ್ಲಿ ಯಾವುದೇ ಜಾತಿ ವ್ಯವಸ್ಥೆ ಇಲ್ಲ. ಇದು ಜಾತಿ ಕಾರಣಕ್ಕೆ ನಡೆದ ಗಲಾಟೆಯಲ್ಲ. ಗಲಾಟೆ ಮಾಡಿದವರು ಹೀಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ” ಎಂದರು. “ಹರಿಹರಪುರವು ಜಾತಿ ಮುಕ್ತ ಗ್ರಾಮವೆಂದು ನೀವು ಹೇಳುತ್ತಿದ್ದೀರಿ. ಭಾರತಕ್ಕೆ ಇಂತಹ ಗ್ರಾಮಗಳ ಅಗತ್ಯವಿದೆ. ಮುಂದೊಮ್ಮೆ ಈ ಕುರಿತು ಪರಿಶೀಲಿಸಿ ವಿಶೇಷ ಲೇಖನ ಬರೆಯಲಾಗುವುದು” ಎಂದು ತಿಳಿಸಲಾಗಿದೆ.

ಸವರ್ಣೀಯರ ಮೇಲೆ ದೂರು ನೀಡಿರುವ ಯುವಕರನ್ನು ಸಂಪರ್ಕಿಸಿದಾಗ “ನಮ್ಮ ಮೇಲೆ ಯಾವುದೇ ಅತ್ಯಾಚಾರ ಪ್ರಕರಣ ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ. “ದಲಿತರು ಎಡಗೈ- ಬಲಗೈ ಎಂದು ಒಡೆದುಹೋದರೆ ಮುಂದೆ ಹೀಗೆಯೇ ದೌರ್ಜನ್ಯಕ್ಕೆ ಒಳಗಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...