Homeಕರ್ನಾಟಕಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

ಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

- Advertisement -
- Advertisement -

ಕೆ.ಆರ್ ಪೇಟೆಯ ಕೃಷ್ಣ ನಿಧನರಾಗಿದ್ದಾರೆ. ಈ ತಲೆಮಾರಿನ ರಾಜಕಾರಣಿಗಳು ಅನುಸರಿಸಲಾಗದ ಕೆಲವು ಮೌಲ್ಯಗಳನ್ನು ಬಿಟ್ಟುಹೋಗಿದ್ದಾರೆ. ಕೃಷ್ಣ ಮಂಡ್ಯ ಜಿಲ್ಲೆ ಕಂಡ ಅಪರೂಪದ ರಾಜಕಾರಣಿಗಳಾದ ಕೆ.ವಿ ಶಂಕರೇಗೌಡರು, ಎಚ್.ಟಿ ಕೃಷ್ಣಪ್ಪ, ಬಂಡಿ ಸಿದ್ದೇಗೌಡ, ಪಾಂಡವಪುರದ ಕೆಂಪಣ್ಣ, ಎಸ್.ಎಂ ಲಿಂಗಪ್ಪ ಇಂತಹವರ ಸಾಲಿಗೆ ಸೇರಿದವರು ಕೃಷ್ಣ. ಅವರು ಮೊದಲು ಮೇಷ್ಟರಾಗಿದ್ದವರು. ಆ ಹುದ್ದೆ ತೊರೆದು ರಾಜಕಾರಣಕ್ಕೆ ಬಂದರೂ ಕಡೆಯವರೆಗೂ ಬಡ ಮೇಷ್ಟರಂತೆಯೇ ಕಾಣುತ್ತಿದ್ದರು. ಅವರನ್ನು ಭೇಟಿಯಾಗಲು ಬಂದವರು ಹೇಳುವುದನ್ನ ಪೂರ್ಣ ಕೇಳಿಸಿಕೊಳ್ಳುವುದು, ಹೇಳಿದ್ದರಲ್ಲಿ ತಪ್ಪಾಗಿದ್ದರೆ ತಿದ್ದಿ ಬುದ್ಧಿ ಹೇಳುವ ಮೇಷ್ಟರ ಗುಣವನ್ನು ಬಿಡಲೇ ಇಲ್ಲ. ಅವರು 1983ರ ಕಾಂಗ್ರೆಸ್ ವಿರೋಧಿ ಅಲೆಯಿಂದ ಗೆದ್ದು ಬಂದವರು. ಆದರೆ ಕೆ.ಆರ್ ಪೇಟೆ ಜನಮನಗೆದ್ದು ಮೂರು ಬಾರಿ ಶಾಸಕರಾಗಿ, ಒಮ್ಮೆ ಮಂತ್ರಿಯಾಗಿ, ಲೋಕಸಭಾ ಸದಸ್ಯರಾಗಿ, ಕಡೆಗೆ ವಿಧಾನಸಭೆಯ ಸ್ಪೀಕರ್ ಆದರೂ ಸರಳ ಸಜ್ಜನಿಕೆಯ ಮೇಷ್ಟರಾಗಿ ಉಳಿದರು. ಕೃಷ್ಣರಿಗೆ ಎಲ್ಲ ಅವಕಾಶಗಳೂ ಒದಗಿಬರುವಂತೆ ಮಾಡಿದ ದೇವೇಗೌಡರು ಕೃಷ್ಣ ಅಲಂಕರಿಸಿದ್ದ ಸ್ಪೀಕರ್ ಸ್ಥಾನವನ್ನು ಬಹಳ ಚೆನ್ನಾಗಿ ಬಳಸಿಕೊಂಡರು. ಸ್ಪೀಕರ್ ಸ್ಥಾನದಲ್ಲಿ ಕುಳಿತು ಸಂವಿಧಾನಾತ್ಮಕವಾಗಿ ನಡೆದುಕೊಳ್ಳಲಾರದ ಯಾತನೆ ಅವರಿಗೆ ಕಡೆಯವರೆಗೂ ಉಳಿದಿತ್ತು. ಸಜ್ಜನ ರಾಜಕಾರಣಿಗಳಿಗೆ ಮುಖ ತೋರದಂತ ಕೀಳರಿಮೆ ಅನುಭವಿಸಿದ್ದರು.

ಜನಾಭಿಪ್ರಾಯವಿಲ್ಲದ ನಾಯಕನನ್ನು ಮುಖ್ಯಮಂತ್ರಿಯಾಗಿ ಪ್ರತಿಷ್ಠಾಪಿಸುವ ಸಮಯದಲ್ಲಿ ಕೃಷ್ಣ, ದೇವೇಗೌಡರ ಸೂಚನೆಯಂತೆ ನಡೆದುಕೊಂಡರು. ಇದರ ಫಲವಾಗಿ ಆ ಮುಂದಿನ ಚುನಾವಣೆಯಲ್ಲಿ ಸೋತರು. 2013ರಲ್ಲಿ ಮತ್ತೆ ಚುನಾವಣೆ ಎದುರಾದಾಗ ಜೆಡಿಎಸ್ ವರಿಷ್ಠರು ಟಿಕೆಟ್ ನೀಡಲಿಲ್ಲ. ನಿಜಕ್ಕೂ ಕೃಷ್ಣ ಮಾಡಿದ ಉಪಕಾರಕ್ಕೆ ಜೆಡಿಎಸ್ ಕಡೆಯವರೆಗೂ ಅವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ ಆ ಸಮಯಕ್ಕಾಗಲೇ ಅವರು ಉಪಯೋಗಿಸಿ ಬಿಸಾಕಿದ ವಸ್ತುವಿನಂತಾಗಿದ್ದರು. ಏಕೆಂದರೆ ಬಾಂಬೆಯಿಂದ ಸೂಟ್‌ಕೇಸ್ ಹಿಡಿದು ಬಂದ ನಾರಾಯಣಗೌಡರು ಆಗಲೇ ಲಕಲಕ ಹೊಳೆಯುತ್ತಿದ್ದರು. ಇಂತಹವರ ಎದುರು ನಿವೃತ್ತ ಉಪಾಧ್ಯಾಯನಂತೆ ಕಾಣುವ ಕೃಷ್ಣ ಯಾರಿಗೆ ಬೇಕು! ಈ ಮೊದಲು ಅವರು ಚುನಾವಣೆಗೆ ನಿಂತಾಗ ಜನಗಳೇ ಚಂದಾ ಎತ್ತಿ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಆದರೆ ಈಗ ಅಂತಹ ಮೌಲ್ಯಗಳೇ ಪತನಗೊಂಡು ಮತದಾರನೆ ರಾಜಕಾರಣಿ ಕೈಯಿಂದ ಚಂದಾ ವಸೂಲಿಗಿಳಿಯುತ್ತಿದ್ದಾನೆ. ಆದ್ದರಿಂದ ಕೃಷ್ಣ ಮೂಲೆಗುಂಪಾದರು. ಅವರು ಕಡೆಯಲ್ಲಿ ಕಾಂಗ್ರೆಸ್ ಸೇರಿದರೂ ನಾರಾಯಣಗೌಡರೆದುರಿಗೆ ನಿಲ್ಲಲಾಗಲಿಲ್ಲ. ಕೃಷ್ಣರಂತಹ ಸಜ್ಜನ ರಾಜಕಾರಣಿಯನ್ನ ಬೆಂಬಲಿಸಿದ್ದ ಕೆ.ಆರ್ ಪೇಟೆ ಈಗ ಬಿಜೆಪಿ ಪಾಲಾಗಿದೆ. ಈ ಅನಾಹುತಕ್ಕೆ ಕಾರಣ ಕೃಷ್ಣರನ್ನ ದುರುಪಯೋಗಪಡಿಸಿಕೊಂಡವರು.

ಕೃಷ್ಣ ಅಜಾತಶತ್ರು. ಅವರನ್ನ ಟೀಕಿಸಲು ಮತ್ತು ವಿರೋಧಿಸಲು ಕಾರಣಗಳೇ ಇಲ್ಲದಂತೆ ಬದುಕಿದವರು. ಅವರೊಮ್ಮೆ ನಾಗಮಂಗಲ ಐಬಿಗೆ ಬಂದಾಗ ಜನತಾದಳದ ಕಾರ್ಯಕರ್ತನೊಬ್ಬ ಕೇಳಿಸಿಕೊಳ್ಳಲು ಅಸಹ್ಯವಾಗುವ ಬೈಗುಳದಿಂದ ಬೈದ. ಕೃಷ್ಣ ನಗುತ್ತಲೇ ಅದನ್ನ ಸಹಿಸಿಕೊಂಡರು. ಅಂತಹ ಅಸಮಾನ್ಯ ತಾಳ್ಮೆ ಹೊಂದಿದ್ದರು. ಆದರೆ, ಸಾವಿರಾರು ರೂಪಾಯಿ ಸಂಬಳ ಎಣಿಸುವ ಅಧಿಕಾರಿಗಳು ಜನಗಳ ಕೆಲಸ ಮಾಡಿಕೊಡದಿದ್ದರೆ ಅಧಿಕಾರಿಗೆ ಭೂತ ಬಿಡಿಸುತ್ತಿದ್ದರು. ಇದು ಯಾರಿಗೂ ಗೊತ್ತಾಗುತ್ತಿರಲಿಲ್ಲ, ಯಾಕೆಂದರೆ ಅಧಿಕಾರಿಯನ್ನು ತಮ್ಮ ಛೇಂಬರಿಗೆ ಕರೆದು, ಬಾಗಿಲು ಹಾಕಿಕೊಂಡು, ಏರುದನಿಯಲ್ಲಿ ಬೈಯ್ಯುತ್ತಾ, “ಜನಗಳನ್ನು ನನ್ನವರೆಗೂ ಬುಟ್ಟಿದ್ದೀಯಾ, ನೀನ್ಯಾಕ್ಲ ಇರದು? ವಸಿ ಸಂಬ್ಳ ತಗತಿಯೇನೂ” ಎಂದು ಮಂಗಳಾರತಿ ಮಾಡಿ, ಎಚ್ಚರಿಸಿ, ರಿಪೇರಿ ಕೆಲಸ ಮುಗಿಸಿದಂತೆ ಈಚೆ ಬಂದು, ನಂತರ ಎಂದಿನ ಪ್ರಸನ್ನತೆ ಮತ್ತು ಸಮಾಧಾನದಿಂದ “ಸಾಯಬ್ರಿಗೇಳಿದ್ದೀನಿ, ಅವುರು ಮಾಡಿಕೊಡ್ತಾರೆ ಹೋಗ್ರಪ್ಪ ಎಂದು ಕಳಿಸುತ್ತಿದ್ದರು. ಇದು ಈ ಲೋಕಕ್ಕೆ ಗೊತ್ತಿಲ್ಲದಂತೆ ನಡೆದ ವ್ಯವಹಾರ.

ಕೃಷ್ಣ ಶಾಸಕ, ಮಂತ್ರಿ, ಸ್ಪೀಕರ್ ಹೀಗೆ ಹಲವಾರು ಹುದ್ದೆ ನಿಭಾಯಿಸಿದವರು. ದುಡ್ಡು ಮಾಡಿದವರಲ್ಲ. ಅದಾಗಿ ಬಂದುದನ್ನು ಬಡವರಿಗೆ, ಅನಾರೋಗ್ಯದವರಿಗೆ ಹಂಚುತ್ತಿದ್ದರು. ಮಹಾರಾಜ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿದ್ದ ಪತ್ನಿ ಇಂದಿರಮ್ಮ ಮತ್ತು ಸಾಕುಮಗಳು ಮಂಜುಳ ಇದಿಷ್ಟೆ ಅವರ ಸಂಸಾರವಾಗಿದ್ದರೂ ಇಡೀ ತಾಲೂಕನ್ನೇ ಬಂಧು ಬಳಗವಾಗಿ ಪರಿಗಣಿಸಿದ್ದರು. ಸಾಮಾನ್ಯರಂತೆ ಸರಕಾರಿ ಬಸ್ಸಿನಲ್ಲಿ, ಆಟೋದಲ್ಲಿ ಓಡಾಡುತ್ತಿದ್ದರು. ಸದ್ಯಕ್ಕೆ ಈ ತರಹ ರಾಜಕಾರಣಿ ಮಂಡ್ಯ ಜಿಲ್ಲೆಯಲ್ಲಿ ಯಾರೂ ಇಲ್ಲ ಎಂಬುದೇ ನೋವಿನ ಸಂಗತಿ.


ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿ ಚಳುವಳಿಯ ಪಿತಾಮಹ ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...