Homeಕರ್ನಾಟಕಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

ಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

- Advertisement -
- Advertisement -

ಕೆ.ಆರ್ ಪೇಟೆಯ ಕೃಷ್ಣ ನಿಧನರಾಗಿದ್ದಾರೆ. ಈ ತಲೆಮಾರಿನ ರಾಜಕಾರಣಿಗಳು ಅನುಸರಿಸಲಾಗದ ಕೆಲವು ಮೌಲ್ಯಗಳನ್ನು ಬಿಟ್ಟುಹೋಗಿದ್ದಾರೆ. ಕೃಷ್ಣ ಮಂಡ್ಯ ಜಿಲ್ಲೆ ಕಂಡ ಅಪರೂಪದ ರಾಜಕಾರಣಿಗಳಾದ ಕೆ.ವಿ ಶಂಕರೇಗೌಡರು, ಎಚ್.ಟಿ ಕೃಷ್ಣಪ್ಪ, ಬಂಡಿ ಸಿದ್ದೇಗೌಡ, ಪಾಂಡವಪುರದ ಕೆಂಪಣ್ಣ, ಎಸ್.ಎಂ ಲಿಂಗಪ್ಪ ಇಂತಹವರ ಸಾಲಿಗೆ ಸೇರಿದವರು ಕೃಷ್ಣ. ಅವರು ಮೊದಲು ಮೇಷ್ಟರಾಗಿದ್ದವರು. ಆ ಹುದ್ದೆ ತೊರೆದು ರಾಜಕಾರಣಕ್ಕೆ ಬಂದರೂ ಕಡೆಯವರೆಗೂ ಬಡ ಮೇಷ್ಟರಂತೆಯೇ ಕಾಣುತ್ತಿದ್ದರು. ಅವರನ್ನು ಭೇಟಿಯಾಗಲು ಬಂದವರು ಹೇಳುವುದನ್ನ ಪೂರ್ಣ ಕೇಳಿಸಿಕೊಳ್ಳುವುದು, ಹೇಳಿದ್ದರಲ್ಲಿ ತಪ್ಪಾಗಿದ್ದರೆ ತಿದ್ದಿ ಬುದ್ಧಿ ಹೇಳುವ ಮೇಷ್ಟರ ಗುಣವನ್ನು ಬಿಡಲೇ ಇಲ್ಲ. ಅವರು 1983ರ ಕಾಂಗ್ರೆಸ್ ವಿರೋಧಿ ಅಲೆಯಿಂದ ಗೆದ್ದು ಬಂದವರು. ಆದರೆ ಕೆ.ಆರ್ ಪೇಟೆ ಜನಮನಗೆದ್ದು ಮೂರು ಬಾರಿ ಶಾಸಕರಾಗಿ, ಒಮ್ಮೆ ಮಂತ್ರಿಯಾಗಿ, ಲೋಕಸಭಾ ಸದಸ್ಯರಾಗಿ, ಕಡೆಗೆ ವಿಧಾನಸಭೆಯ ಸ್ಪೀಕರ್ ಆದರೂ ಸರಳ ಸಜ್ಜನಿಕೆಯ ಮೇಷ್ಟರಾಗಿ ಉಳಿದರು. ಕೃಷ್ಣರಿಗೆ ಎಲ್ಲ ಅವಕಾಶಗಳೂ ಒದಗಿಬರುವಂತೆ ಮಾಡಿದ ದೇವೇಗೌಡರು ಕೃಷ್ಣ ಅಲಂಕರಿಸಿದ್ದ ಸ್ಪೀಕರ್ ಸ್ಥಾನವನ್ನು ಬಹಳ ಚೆನ್ನಾಗಿ ಬಳಸಿಕೊಂಡರು. ಸ್ಪೀಕರ್ ಸ್ಥಾನದಲ್ಲಿ ಕುಳಿತು ಸಂವಿಧಾನಾತ್ಮಕವಾಗಿ ನಡೆದುಕೊಳ್ಳಲಾರದ ಯಾತನೆ ಅವರಿಗೆ ಕಡೆಯವರೆಗೂ ಉಳಿದಿತ್ತು. ಸಜ್ಜನ ರಾಜಕಾರಣಿಗಳಿಗೆ ಮುಖ ತೋರದಂತ ಕೀಳರಿಮೆ ಅನುಭವಿಸಿದ್ದರು.

ಜನಾಭಿಪ್ರಾಯವಿಲ್ಲದ ನಾಯಕನನ್ನು ಮುಖ್ಯಮಂತ್ರಿಯಾಗಿ ಪ್ರತಿಷ್ಠಾಪಿಸುವ ಸಮಯದಲ್ಲಿ ಕೃಷ್ಣ, ದೇವೇಗೌಡರ ಸೂಚನೆಯಂತೆ ನಡೆದುಕೊಂಡರು. ಇದರ ಫಲವಾಗಿ ಆ ಮುಂದಿನ ಚುನಾವಣೆಯಲ್ಲಿ ಸೋತರು. 2013ರಲ್ಲಿ ಮತ್ತೆ ಚುನಾವಣೆ ಎದುರಾದಾಗ ಜೆಡಿಎಸ್ ವರಿಷ್ಠರು ಟಿಕೆಟ್ ನೀಡಲಿಲ್ಲ. ನಿಜಕ್ಕೂ ಕೃಷ್ಣ ಮಾಡಿದ ಉಪಕಾರಕ್ಕೆ ಜೆಡಿಎಸ್ ಕಡೆಯವರೆಗೂ ಅವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ ಆ ಸಮಯಕ್ಕಾಗಲೇ ಅವರು ಉಪಯೋಗಿಸಿ ಬಿಸಾಕಿದ ವಸ್ತುವಿನಂತಾಗಿದ್ದರು. ಏಕೆಂದರೆ ಬಾಂಬೆಯಿಂದ ಸೂಟ್‌ಕೇಸ್ ಹಿಡಿದು ಬಂದ ನಾರಾಯಣಗೌಡರು ಆಗಲೇ ಲಕಲಕ ಹೊಳೆಯುತ್ತಿದ್ದರು. ಇಂತಹವರ ಎದುರು ನಿವೃತ್ತ ಉಪಾಧ್ಯಾಯನಂತೆ ಕಾಣುವ ಕೃಷ್ಣ ಯಾರಿಗೆ ಬೇಕು! ಈ ಮೊದಲು ಅವರು ಚುನಾವಣೆಗೆ ನಿಂತಾಗ ಜನಗಳೇ ಚಂದಾ ಎತ್ತಿ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಆದರೆ ಈಗ ಅಂತಹ ಮೌಲ್ಯಗಳೇ ಪತನಗೊಂಡು ಮತದಾರನೆ ರಾಜಕಾರಣಿ ಕೈಯಿಂದ ಚಂದಾ ವಸೂಲಿಗಿಳಿಯುತ್ತಿದ್ದಾನೆ. ಆದ್ದರಿಂದ ಕೃಷ್ಣ ಮೂಲೆಗುಂಪಾದರು. ಅವರು ಕಡೆಯಲ್ಲಿ ಕಾಂಗ್ರೆಸ್ ಸೇರಿದರೂ ನಾರಾಯಣಗೌಡರೆದುರಿಗೆ ನಿಲ್ಲಲಾಗಲಿಲ್ಲ. ಕೃಷ್ಣರಂತಹ ಸಜ್ಜನ ರಾಜಕಾರಣಿಯನ್ನ ಬೆಂಬಲಿಸಿದ್ದ ಕೆ.ಆರ್ ಪೇಟೆ ಈಗ ಬಿಜೆಪಿ ಪಾಲಾಗಿದೆ. ಈ ಅನಾಹುತಕ್ಕೆ ಕಾರಣ ಕೃಷ್ಣರನ್ನ ದುರುಪಯೋಗಪಡಿಸಿಕೊಂಡವರು.

ಕೃಷ್ಣ ಅಜಾತಶತ್ರು. ಅವರನ್ನ ಟೀಕಿಸಲು ಮತ್ತು ವಿರೋಧಿಸಲು ಕಾರಣಗಳೇ ಇಲ್ಲದಂತೆ ಬದುಕಿದವರು. ಅವರೊಮ್ಮೆ ನಾಗಮಂಗಲ ಐಬಿಗೆ ಬಂದಾಗ ಜನತಾದಳದ ಕಾರ್ಯಕರ್ತನೊಬ್ಬ ಕೇಳಿಸಿಕೊಳ್ಳಲು ಅಸಹ್ಯವಾಗುವ ಬೈಗುಳದಿಂದ ಬೈದ. ಕೃಷ್ಣ ನಗುತ್ತಲೇ ಅದನ್ನ ಸಹಿಸಿಕೊಂಡರು. ಅಂತಹ ಅಸಮಾನ್ಯ ತಾಳ್ಮೆ ಹೊಂದಿದ್ದರು. ಆದರೆ, ಸಾವಿರಾರು ರೂಪಾಯಿ ಸಂಬಳ ಎಣಿಸುವ ಅಧಿಕಾರಿಗಳು ಜನಗಳ ಕೆಲಸ ಮಾಡಿಕೊಡದಿದ್ದರೆ ಅಧಿಕಾರಿಗೆ ಭೂತ ಬಿಡಿಸುತ್ತಿದ್ದರು. ಇದು ಯಾರಿಗೂ ಗೊತ್ತಾಗುತ್ತಿರಲಿಲ್ಲ, ಯಾಕೆಂದರೆ ಅಧಿಕಾರಿಯನ್ನು ತಮ್ಮ ಛೇಂಬರಿಗೆ ಕರೆದು, ಬಾಗಿಲು ಹಾಕಿಕೊಂಡು, ಏರುದನಿಯಲ್ಲಿ ಬೈಯ್ಯುತ್ತಾ, “ಜನಗಳನ್ನು ನನ್ನವರೆಗೂ ಬುಟ್ಟಿದ್ದೀಯಾ, ನೀನ್ಯಾಕ್ಲ ಇರದು? ವಸಿ ಸಂಬ್ಳ ತಗತಿಯೇನೂ” ಎಂದು ಮಂಗಳಾರತಿ ಮಾಡಿ, ಎಚ್ಚರಿಸಿ, ರಿಪೇರಿ ಕೆಲಸ ಮುಗಿಸಿದಂತೆ ಈಚೆ ಬಂದು, ನಂತರ ಎಂದಿನ ಪ್ರಸನ್ನತೆ ಮತ್ತು ಸಮಾಧಾನದಿಂದ “ಸಾಯಬ್ರಿಗೇಳಿದ್ದೀನಿ, ಅವುರು ಮಾಡಿಕೊಡ್ತಾರೆ ಹೋಗ್ರಪ್ಪ ಎಂದು ಕಳಿಸುತ್ತಿದ್ದರು. ಇದು ಈ ಲೋಕಕ್ಕೆ ಗೊತ್ತಿಲ್ಲದಂತೆ ನಡೆದ ವ್ಯವಹಾರ.

ಕೃಷ್ಣ ಶಾಸಕ, ಮಂತ್ರಿ, ಸ್ಪೀಕರ್ ಹೀಗೆ ಹಲವಾರು ಹುದ್ದೆ ನಿಭಾಯಿಸಿದವರು. ದುಡ್ಡು ಮಾಡಿದವರಲ್ಲ. ಅದಾಗಿ ಬಂದುದನ್ನು ಬಡವರಿಗೆ, ಅನಾರೋಗ್ಯದವರಿಗೆ ಹಂಚುತ್ತಿದ್ದರು. ಮಹಾರಾಜ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿದ್ದ ಪತ್ನಿ ಇಂದಿರಮ್ಮ ಮತ್ತು ಸಾಕುಮಗಳು ಮಂಜುಳ ಇದಿಷ್ಟೆ ಅವರ ಸಂಸಾರವಾಗಿದ್ದರೂ ಇಡೀ ತಾಲೂಕನ್ನೇ ಬಂಧು ಬಳಗವಾಗಿ ಪರಿಗಣಿಸಿದ್ದರು. ಸಾಮಾನ್ಯರಂತೆ ಸರಕಾರಿ ಬಸ್ಸಿನಲ್ಲಿ, ಆಟೋದಲ್ಲಿ ಓಡಾಡುತ್ತಿದ್ದರು. ಸದ್ಯಕ್ಕೆ ಈ ತರಹ ರಾಜಕಾರಣಿ ಮಂಡ್ಯ ಜಿಲ್ಲೆಯಲ್ಲಿ ಯಾರೂ ಇಲ್ಲ ಎಂಬುದೇ ನೋವಿನ ಸಂಗತಿ.


ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿ ಚಳುವಳಿಯ ಪಿತಾಮಹ ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...