Homeಕರ್ನಾಟಕಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

ಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

- Advertisement -
- Advertisement -

ಕೆ.ಆರ್ ಪೇಟೆಯ ಕೃಷ್ಣ ನಿಧನರಾಗಿದ್ದಾರೆ. ಈ ತಲೆಮಾರಿನ ರಾಜಕಾರಣಿಗಳು ಅನುಸರಿಸಲಾಗದ ಕೆಲವು ಮೌಲ್ಯಗಳನ್ನು ಬಿಟ್ಟುಹೋಗಿದ್ದಾರೆ. ಕೃಷ್ಣ ಮಂಡ್ಯ ಜಿಲ್ಲೆ ಕಂಡ ಅಪರೂಪದ ರಾಜಕಾರಣಿಗಳಾದ ಕೆ.ವಿ ಶಂಕರೇಗೌಡರು, ಎಚ್.ಟಿ ಕೃಷ್ಣಪ್ಪ, ಬಂಡಿ ಸಿದ್ದೇಗೌಡ, ಪಾಂಡವಪುರದ ಕೆಂಪಣ್ಣ, ಎಸ್.ಎಂ ಲಿಂಗಪ್ಪ ಇಂತಹವರ ಸಾಲಿಗೆ ಸೇರಿದವರು ಕೃಷ್ಣ. ಅವರು ಮೊದಲು ಮೇಷ್ಟರಾಗಿದ್ದವರು. ಆ ಹುದ್ದೆ ತೊರೆದು ರಾಜಕಾರಣಕ್ಕೆ ಬಂದರೂ ಕಡೆಯವರೆಗೂ ಬಡ ಮೇಷ್ಟರಂತೆಯೇ ಕಾಣುತ್ತಿದ್ದರು. ಅವರನ್ನು ಭೇಟಿಯಾಗಲು ಬಂದವರು ಹೇಳುವುದನ್ನ ಪೂರ್ಣ ಕೇಳಿಸಿಕೊಳ್ಳುವುದು, ಹೇಳಿದ್ದರಲ್ಲಿ ತಪ್ಪಾಗಿದ್ದರೆ ತಿದ್ದಿ ಬುದ್ಧಿ ಹೇಳುವ ಮೇಷ್ಟರ ಗುಣವನ್ನು ಬಿಡಲೇ ಇಲ್ಲ. ಅವರು 1983ರ ಕಾಂಗ್ರೆಸ್ ವಿರೋಧಿ ಅಲೆಯಿಂದ ಗೆದ್ದು ಬಂದವರು. ಆದರೆ ಕೆ.ಆರ್ ಪೇಟೆ ಜನಮನಗೆದ್ದು ಮೂರು ಬಾರಿ ಶಾಸಕರಾಗಿ, ಒಮ್ಮೆ ಮಂತ್ರಿಯಾಗಿ, ಲೋಕಸಭಾ ಸದಸ್ಯರಾಗಿ, ಕಡೆಗೆ ವಿಧಾನಸಭೆಯ ಸ್ಪೀಕರ್ ಆದರೂ ಸರಳ ಸಜ್ಜನಿಕೆಯ ಮೇಷ್ಟರಾಗಿ ಉಳಿದರು. ಕೃಷ್ಣರಿಗೆ ಎಲ್ಲ ಅವಕಾಶಗಳೂ ಒದಗಿಬರುವಂತೆ ಮಾಡಿದ ದೇವೇಗೌಡರು ಕೃಷ್ಣ ಅಲಂಕರಿಸಿದ್ದ ಸ್ಪೀಕರ್ ಸ್ಥಾನವನ್ನು ಬಹಳ ಚೆನ್ನಾಗಿ ಬಳಸಿಕೊಂಡರು. ಸ್ಪೀಕರ್ ಸ್ಥಾನದಲ್ಲಿ ಕುಳಿತು ಸಂವಿಧಾನಾತ್ಮಕವಾಗಿ ನಡೆದುಕೊಳ್ಳಲಾರದ ಯಾತನೆ ಅವರಿಗೆ ಕಡೆಯವರೆಗೂ ಉಳಿದಿತ್ತು. ಸಜ್ಜನ ರಾಜಕಾರಣಿಗಳಿಗೆ ಮುಖ ತೋರದಂತ ಕೀಳರಿಮೆ ಅನುಭವಿಸಿದ್ದರು.

ಜನಾಭಿಪ್ರಾಯವಿಲ್ಲದ ನಾಯಕನನ್ನು ಮುಖ್ಯಮಂತ್ರಿಯಾಗಿ ಪ್ರತಿಷ್ಠಾಪಿಸುವ ಸಮಯದಲ್ಲಿ ಕೃಷ್ಣ, ದೇವೇಗೌಡರ ಸೂಚನೆಯಂತೆ ನಡೆದುಕೊಂಡರು. ಇದರ ಫಲವಾಗಿ ಆ ಮುಂದಿನ ಚುನಾವಣೆಯಲ್ಲಿ ಸೋತರು. 2013ರಲ್ಲಿ ಮತ್ತೆ ಚುನಾವಣೆ ಎದುರಾದಾಗ ಜೆಡಿಎಸ್ ವರಿಷ್ಠರು ಟಿಕೆಟ್ ನೀಡಲಿಲ್ಲ. ನಿಜಕ್ಕೂ ಕೃಷ್ಣ ಮಾಡಿದ ಉಪಕಾರಕ್ಕೆ ಜೆಡಿಎಸ್ ಕಡೆಯವರೆಗೂ ಅವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ ಆ ಸಮಯಕ್ಕಾಗಲೇ ಅವರು ಉಪಯೋಗಿಸಿ ಬಿಸಾಕಿದ ವಸ್ತುವಿನಂತಾಗಿದ್ದರು. ಏಕೆಂದರೆ ಬಾಂಬೆಯಿಂದ ಸೂಟ್‌ಕೇಸ್ ಹಿಡಿದು ಬಂದ ನಾರಾಯಣಗೌಡರು ಆಗಲೇ ಲಕಲಕ ಹೊಳೆಯುತ್ತಿದ್ದರು. ಇಂತಹವರ ಎದುರು ನಿವೃತ್ತ ಉಪಾಧ್ಯಾಯನಂತೆ ಕಾಣುವ ಕೃಷ್ಣ ಯಾರಿಗೆ ಬೇಕು! ಈ ಮೊದಲು ಅವರು ಚುನಾವಣೆಗೆ ನಿಂತಾಗ ಜನಗಳೇ ಚಂದಾ ಎತ್ತಿ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಆದರೆ ಈಗ ಅಂತಹ ಮೌಲ್ಯಗಳೇ ಪತನಗೊಂಡು ಮತದಾರನೆ ರಾಜಕಾರಣಿ ಕೈಯಿಂದ ಚಂದಾ ವಸೂಲಿಗಿಳಿಯುತ್ತಿದ್ದಾನೆ. ಆದ್ದರಿಂದ ಕೃಷ್ಣ ಮೂಲೆಗುಂಪಾದರು. ಅವರು ಕಡೆಯಲ್ಲಿ ಕಾಂಗ್ರೆಸ್ ಸೇರಿದರೂ ನಾರಾಯಣಗೌಡರೆದುರಿಗೆ ನಿಲ್ಲಲಾಗಲಿಲ್ಲ. ಕೃಷ್ಣರಂತಹ ಸಜ್ಜನ ರಾಜಕಾರಣಿಯನ್ನ ಬೆಂಬಲಿಸಿದ್ದ ಕೆ.ಆರ್ ಪೇಟೆ ಈಗ ಬಿಜೆಪಿ ಪಾಲಾಗಿದೆ. ಈ ಅನಾಹುತಕ್ಕೆ ಕಾರಣ ಕೃಷ್ಣರನ್ನ ದುರುಪಯೋಗಪಡಿಸಿಕೊಂಡವರು.

ಕೃಷ್ಣ ಅಜಾತಶತ್ರು. ಅವರನ್ನ ಟೀಕಿಸಲು ಮತ್ತು ವಿರೋಧಿಸಲು ಕಾರಣಗಳೇ ಇಲ್ಲದಂತೆ ಬದುಕಿದವರು. ಅವರೊಮ್ಮೆ ನಾಗಮಂಗಲ ಐಬಿಗೆ ಬಂದಾಗ ಜನತಾದಳದ ಕಾರ್ಯಕರ್ತನೊಬ್ಬ ಕೇಳಿಸಿಕೊಳ್ಳಲು ಅಸಹ್ಯವಾಗುವ ಬೈಗುಳದಿಂದ ಬೈದ. ಕೃಷ್ಣ ನಗುತ್ತಲೇ ಅದನ್ನ ಸಹಿಸಿಕೊಂಡರು. ಅಂತಹ ಅಸಮಾನ್ಯ ತಾಳ್ಮೆ ಹೊಂದಿದ್ದರು. ಆದರೆ, ಸಾವಿರಾರು ರೂಪಾಯಿ ಸಂಬಳ ಎಣಿಸುವ ಅಧಿಕಾರಿಗಳು ಜನಗಳ ಕೆಲಸ ಮಾಡಿಕೊಡದಿದ್ದರೆ ಅಧಿಕಾರಿಗೆ ಭೂತ ಬಿಡಿಸುತ್ತಿದ್ದರು. ಇದು ಯಾರಿಗೂ ಗೊತ್ತಾಗುತ್ತಿರಲಿಲ್ಲ, ಯಾಕೆಂದರೆ ಅಧಿಕಾರಿಯನ್ನು ತಮ್ಮ ಛೇಂಬರಿಗೆ ಕರೆದು, ಬಾಗಿಲು ಹಾಕಿಕೊಂಡು, ಏರುದನಿಯಲ್ಲಿ ಬೈಯ್ಯುತ್ತಾ, “ಜನಗಳನ್ನು ನನ್ನವರೆಗೂ ಬುಟ್ಟಿದ್ದೀಯಾ, ನೀನ್ಯಾಕ್ಲ ಇರದು? ವಸಿ ಸಂಬ್ಳ ತಗತಿಯೇನೂ” ಎಂದು ಮಂಗಳಾರತಿ ಮಾಡಿ, ಎಚ್ಚರಿಸಿ, ರಿಪೇರಿ ಕೆಲಸ ಮುಗಿಸಿದಂತೆ ಈಚೆ ಬಂದು, ನಂತರ ಎಂದಿನ ಪ್ರಸನ್ನತೆ ಮತ್ತು ಸಮಾಧಾನದಿಂದ “ಸಾಯಬ್ರಿಗೇಳಿದ್ದೀನಿ, ಅವುರು ಮಾಡಿಕೊಡ್ತಾರೆ ಹೋಗ್ರಪ್ಪ ಎಂದು ಕಳಿಸುತ್ತಿದ್ದರು. ಇದು ಈ ಲೋಕಕ್ಕೆ ಗೊತ್ತಿಲ್ಲದಂತೆ ನಡೆದ ವ್ಯವಹಾರ.

ಕೃಷ್ಣ ಶಾಸಕ, ಮಂತ್ರಿ, ಸ್ಪೀಕರ್ ಹೀಗೆ ಹಲವಾರು ಹುದ್ದೆ ನಿಭಾಯಿಸಿದವರು. ದುಡ್ಡು ಮಾಡಿದವರಲ್ಲ. ಅದಾಗಿ ಬಂದುದನ್ನು ಬಡವರಿಗೆ, ಅನಾರೋಗ್ಯದವರಿಗೆ ಹಂಚುತ್ತಿದ್ದರು. ಮಹಾರಾಜ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿದ್ದ ಪತ್ನಿ ಇಂದಿರಮ್ಮ ಮತ್ತು ಸಾಕುಮಗಳು ಮಂಜುಳ ಇದಿಷ್ಟೆ ಅವರ ಸಂಸಾರವಾಗಿದ್ದರೂ ಇಡೀ ತಾಲೂಕನ್ನೇ ಬಂಧು ಬಳಗವಾಗಿ ಪರಿಗಣಿಸಿದ್ದರು. ಸಾಮಾನ್ಯರಂತೆ ಸರಕಾರಿ ಬಸ್ಸಿನಲ್ಲಿ, ಆಟೋದಲ್ಲಿ ಓಡಾಡುತ್ತಿದ್ದರು. ಸದ್ಯಕ್ಕೆ ಈ ತರಹ ರಾಜಕಾರಣಿ ಮಂಡ್ಯ ಜಿಲ್ಲೆಯಲ್ಲಿ ಯಾರೂ ಇಲ್ಲ ಎಂಬುದೇ ನೋವಿನ ಸಂಗತಿ.


ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿ ಚಳುವಳಿಯ ಪಿತಾಮಹ ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...