Homeಕರ್ನಾಟಕಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

ಶ್ರದ್ಧಾಂಜಲಿ; ಕೃಷ್ಣ ಹೆಸರಿನ ಧರ್ಮರಾಯ!

- Advertisement -
- Advertisement -

ಕೆ.ಆರ್ ಪೇಟೆಯ ಕೃಷ್ಣ ನಿಧನರಾಗಿದ್ದಾರೆ. ಈ ತಲೆಮಾರಿನ ರಾಜಕಾರಣಿಗಳು ಅನುಸರಿಸಲಾಗದ ಕೆಲವು ಮೌಲ್ಯಗಳನ್ನು ಬಿಟ್ಟುಹೋಗಿದ್ದಾರೆ. ಕೃಷ್ಣ ಮಂಡ್ಯ ಜಿಲ್ಲೆ ಕಂಡ ಅಪರೂಪದ ರಾಜಕಾರಣಿಗಳಾದ ಕೆ.ವಿ ಶಂಕರೇಗೌಡರು, ಎಚ್.ಟಿ ಕೃಷ್ಣಪ್ಪ, ಬಂಡಿ ಸಿದ್ದೇಗೌಡ, ಪಾಂಡವಪುರದ ಕೆಂಪಣ್ಣ, ಎಸ್.ಎಂ ಲಿಂಗಪ್ಪ ಇಂತಹವರ ಸಾಲಿಗೆ ಸೇರಿದವರು ಕೃಷ್ಣ. ಅವರು ಮೊದಲು ಮೇಷ್ಟರಾಗಿದ್ದವರು. ಆ ಹುದ್ದೆ ತೊರೆದು ರಾಜಕಾರಣಕ್ಕೆ ಬಂದರೂ ಕಡೆಯವರೆಗೂ ಬಡ ಮೇಷ್ಟರಂತೆಯೇ ಕಾಣುತ್ತಿದ್ದರು. ಅವರನ್ನು ಭೇಟಿಯಾಗಲು ಬಂದವರು ಹೇಳುವುದನ್ನ ಪೂರ್ಣ ಕೇಳಿಸಿಕೊಳ್ಳುವುದು, ಹೇಳಿದ್ದರಲ್ಲಿ ತಪ್ಪಾಗಿದ್ದರೆ ತಿದ್ದಿ ಬುದ್ಧಿ ಹೇಳುವ ಮೇಷ್ಟರ ಗುಣವನ್ನು ಬಿಡಲೇ ಇಲ್ಲ. ಅವರು 1983ರ ಕಾಂಗ್ರೆಸ್ ವಿರೋಧಿ ಅಲೆಯಿಂದ ಗೆದ್ದು ಬಂದವರು. ಆದರೆ ಕೆ.ಆರ್ ಪೇಟೆ ಜನಮನಗೆದ್ದು ಮೂರು ಬಾರಿ ಶಾಸಕರಾಗಿ, ಒಮ್ಮೆ ಮಂತ್ರಿಯಾಗಿ, ಲೋಕಸಭಾ ಸದಸ್ಯರಾಗಿ, ಕಡೆಗೆ ವಿಧಾನಸಭೆಯ ಸ್ಪೀಕರ್ ಆದರೂ ಸರಳ ಸಜ್ಜನಿಕೆಯ ಮೇಷ್ಟರಾಗಿ ಉಳಿದರು. ಕೃಷ್ಣರಿಗೆ ಎಲ್ಲ ಅವಕಾಶಗಳೂ ಒದಗಿಬರುವಂತೆ ಮಾಡಿದ ದೇವೇಗೌಡರು ಕೃಷ್ಣ ಅಲಂಕರಿಸಿದ್ದ ಸ್ಪೀಕರ್ ಸ್ಥಾನವನ್ನು ಬಹಳ ಚೆನ್ನಾಗಿ ಬಳಸಿಕೊಂಡರು. ಸ್ಪೀಕರ್ ಸ್ಥಾನದಲ್ಲಿ ಕುಳಿತು ಸಂವಿಧಾನಾತ್ಮಕವಾಗಿ ನಡೆದುಕೊಳ್ಳಲಾರದ ಯಾತನೆ ಅವರಿಗೆ ಕಡೆಯವರೆಗೂ ಉಳಿದಿತ್ತು. ಸಜ್ಜನ ರಾಜಕಾರಣಿಗಳಿಗೆ ಮುಖ ತೋರದಂತ ಕೀಳರಿಮೆ ಅನುಭವಿಸಿದ್ದರು.

ಜನಾಭಿಪ್ರಾಯವಿಲ್ಲದ ನಾಯಕನನ್ನು ಮುಖ್ಯಮಂತ್ರಿಯಾಗಿ ಪ್ರತಿಷ್ಠಾಪಿಸುವ ಸಮಯದಲ್ಲಿ ಕೃಷ್ಣ, ದೇವೇಗೌಡರ ಸೂಚನೆಯಂತೆ ನಡೆದುಕೊಂಡರು. ಇದರ ಫಲವಾಗಿ ಆ ಮುಂದಿನ ಚುನಾವಣೆಯಲ್ಲಿ ಸೋತರು. 2013ರಲ್ಲಿ ಮತ್ತೆ ಚುನಾವಣೆ ಎದುರಾದಾಗ ಜೆಡಿಎಸ್ ವರಿಷ್ಠರು ಟಿಕೆಟ್ ನೀಡಲಿಲ್ಲ. ನಿಜಕ್ಕೂ ಕೃಷ್ಣ ಮಾಡಿದ ಉಪಕಾರಕ್ಕೆ ಜೆಡಿಎಸ್ ಕಡೆಯವರೆಗೂ ಅವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ ಆ ಸಮಯಕ್ಕಾಗಲೇ ಅವರು ಉಪಯೋಗಿಸಿ ಬಿಸಾಕಿದ ವಸ್ತುವಿನಂತಾಗಿದ್ದರು. ಏಕೆಂದರೆ ಬಾಂಬೆಯಿಂದ ಸೂಟ್‌ಕೇಸ್ ಹಿಡಿದು ಬಂದ ನಾರಾಯಣಗೌಡರು ಆಗಲೇ ಲಕಲಕ ಹೊಳೆಯುತ್ತಿದ್ದರು. ಇಂತಹವರ ಎದುರು ನಿವೃತ್ತ ಉಪಾಧ್ಯಾಯನಂತೆ ಕಾಣುವ ಕೃಷ್ಣ ಯಾರಿಗೆ ಬೇಕು! ಈ ಮೊದಲು ಅವರು ಚುನಾವಣೆಗೆ ನಿಂತಾಗ ಜನಗಳೇ ಚಂದಾ ಎತ್ತಿ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಆದರೆ ಈಗ ಅಂತಹ ಮೌಲ್ಯಗಳೇ ಪತನಗೊಂಡು ಮತದಾರನೆ ರಾಜಕಾರಣಿ ಕೈಯಿಂದ ಚಂದಾ ವಸೂಲಿಗಿಳಿಯುತ್ತಿದ್ದಾನೆ. ಆದ್ದರಿಂದ ಕೃಷ್ಣ ಮೂಲೆಗುಂಪಾದರು. ಅವರು ಕಡೆಯಲ್ಲಿ ಕಾಂಗ್ರೆಸ್ ಸೇರಿದರೂ ನಾರಾಯಣಗೌಡರೆದುರಿಗೆ ನಿಲ್ಲಲಾಗಲಿಲ್ಲ. ಕೃಷ್ಣರಂತಹ ಸಜ್ಜನ ರಾಜಕಾರಣಿಯನ್ನ ಬೆಂಬಲಿಸಿದ್ದ ಕೆ.ಆರ್ ಪೇಟೆ ಈಗ ಬಿಜೆಪಿ ಪಾಲಾಗಿದೆ. ಈ ಅನಾಹುತಕ್ಕೆ ಕಾರಣ ಕೃಷ್ಣರನ್ನ ದುರುಪಯೋಗಪಡಿಸಿಕೊಂಡವರು.

ಕೃಷ್ಣ ಅಜಾತಶತ್ರು. ಅವರನ್ನ ಟೀಕಿಸಲು ಮತ್ತು ವಿರೋಧಿಸಲು ಕಾರಣಗಳೇ ಇಲ್ಲದಂತೆ ಬದುಕಿದವರು. ಅವರೊಮ್ಮೆ ನಾಗಮಂಗಲ ಐಬಿಗೆ ಬಂದಾಗ ಜನತಾದಳದ ಕಾರ್ಯಕರ್ತನೊಬ್ಬ ಕೇಳಿಸಿಕೊಳ್ಳಲು ಅಸಹ್ಯವಾಗುವ ಬೈಗುಳದಿಂದ ಬೈದ. ಕೃಷ್ಣ ನಗುತ್ತಲೇ ಅದನ್ನ ಸಹಿಸಿಕೊಂಡರು. ಅಂತಹ ಅಸಮಾನ್ಯ ತಾಳ್ಮೆ ಹೊಂದಿದ್ದರು. ಆದರೆ, ಸಾವಿರಾರು ರೂಪಾಯಿ ಸಂಬಳ ಎಣಿಸುವ ಅಧಿಕಾರಿಗಳು ಜನಗಳ ಕೆಲಸ ಮಾಡಿಕೊಡದಿದ್ದರೆ ಅಧಿಕಾರಿಗೆ ಭೂತ ಬಿಡಿಸುತ್ತಿದ್ದರು. ಇದು ಯಾರಿಗೂ ಗೊತ್ತಾಗುತ್ತಿರಲಿಲ್ಲ, ಯಾಕೆಂದರೆ ಅಧಿಕಾರಿಯನ್ನು ತಮ್ಮ ಛೇಂಬರಿಗೆ ಕರೆದು, ಬಾಗಿಲು ಹಾಕಿಕೊಂಡು, ಏರುದನಿಯಲ್ಲಿ ಬೈಯ್ಯುತ್ತಾ, “ಜನಗಳನ್ನು ನನ್ನವರೆಗೂ ಬುಟ್ಟಿದ್ದೀಯಾ, ನೀನ್ಯಾಕ್ಲ ಇರದು? ವಸಿ ಸಂಬ್ಳ ತಗತಿಯೇನೂ” ಎಂದು ಮಂಗಳಾರತಿ ಮಾಡಿ, ಎಚ್ಚರಿಸಿ, ರಿಪೇರಿ ಕೆಲಸ ಮುಗಿಸಿದಂತೆ ಈಚೆ ಬಂದು, ನಂತರ ಎಂದಿನ ಪ್ರಸನ್ನತೆ ಮತ್ತು ಸಮಾಧಾನದಿಂದ “ಸಾಯಬ್ರಿಗೇಳಿದ್ದೀನಿ, ಅವುರು ಮಾಡಿಕೊಡ್ತಾರೆ ಹೋಗ್ರಪ್ಪ ಎಂದು ಕಳಿಸುತ್ತಿದ್ದರು. ಇದು ಈ ಲೋಕಕ್ಕೆ ಗೊತ್ತಿಲ್ಲದಂತೆ ನಡೆದ ವ್ಯವಹಾರ.

ಕೃಷ್ಣ ಶಾಸಕ, ಮಂತ್ರಿ, ಸ್ಪೀಕರ್ ಹೀಗೆ ಹಲವಾರು ಹುದ್ದೆ ನಿಭಾಯಿಸಿದವರು. ದುಡ್ಡು ಮಾಡಿದವರಲ್ಲ. ಅದಾಗಿ ಬಂದುದನ್ನು ಬಡವರಿಗೆ, ಅನಾರೋಗ್ಯದವರಿಗೆ ಹಂಚುತ್ತಿದ್ದರು. ಮಹಾರಾಜ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿದ್ದ ಪತ್ನಿ ಇಂದಿರಮ್ಮ ಮತ್ತು ಸಾಕುಮಗಳು ಮಂಜುಳ ಇದಿಷ್ಟೆ ಅವರ ಸಂಸಾರವಾಗಿದ್ದರೂ ಇಡೀ ತಾಲೂಕನ್ನೇ ಬಂಧು ಬಳಗವಾಗಿ ಪರಿಗಣಿಸಿದ್ದರು. ಸಾಮಾನ್ಯರಂತೆ ಸರಕಾರಿ ಬಸ್ಸಿನಲ್ಲಿ, ಆಟೋದಲ್ಲಿ ಓಡಾಡುತ್ತಿದ್ದರು. ಸದ್ಯಕ್ಕೆ ಈ ತರಹ ರಾಜಕಾರಣಿ ಮಂಡ್ಯ ಜಿಲ್ಲೆಯಲ್ಲಿ ಯಾರೂ ಇಲ್ಲ ಎಂಬುದೇ ನೋವಿನ ಸಂಗತಿ.


ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿ ಚಳುವಳಿಯ ಪಿತಾಮಹ ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...