Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿ.. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ.

- Advertisement -
- Advertisement -

ನೀಟಾಗಿ ತೋಟ ಇಡುವುದೆಂದರೆ ಸಕಲ ಸಾವಯವ ವಸ್ತುಗಳನ್ನು ಅಲ್ಲಲ್ಲಿ ಗುಡ್ಡೆ ಹಾಕಿ ಸುಟ್ಟು, ತೋಟದ ಬದುಗಳನ್ನೆಲ್ಲಾ ಗುಡಿಸಿ ಅಂದವಾಗಿ ಕಾಣುವಂತೆ ಇಟ್ಟುಕೊಳ್ಳುವುದು ಎಂದು ನಂಬಿದ್ದ ನಮ್ಮಪ್ಪ ಹಾಗೇ ಇಟ್ಟುಕೊಂಡಿದ್ದರು. “ಇವರ ಅಪ್ಪ ಎಷ್ಟು ಅಚ್ಚುಕಟ್ಟಾಗಿ ತೋಟ ಇಟ್ಟುಕೊಂಡಿದ್ದರು, ನಡುಮನೆಯಂಥಾ ತೋಟವನ್ನು ಈ ಮನುಷ್ಯ ತಿಪ್ಪೆ ಗುಂಡಿ ಮಾಡಿ ಗಬ್ಬೆಬ್ಬಿಸಿದ್ದಾನೆ, ಇವನ ಪ್ರಯೋಗಕ್ಕಷ್ಟು ಬೆಂಕಿ ಹಾಕ, ಅಡವಾಗಿ ಸಂಬಳ ಬರುತ್ತೆ ಏನೇನಾದರು ಮಾಡಂಗಾಗುತ್ತೆ..” ಇತ್ಯಾದಿ ಬೈಗುಳಗಳನ್ನು ನಮ್ಮ ತೋಟದ ದಾರಿಯಲ್ಲಿ ಸಾಗುವ ಜನರು ಬಿತ್ತರಿಸುವಾಗ, ನಾನು ಬೇಲಿ ಸಾಲಲ್ಲಿ ಕೂತು ಆಲಿಸಿದ್ದೇನೆ. ಇದು ನನ್ನ ಭಾಗ್ಯ ಎಂದೇ ತಿಳಿದಿದ್ದೇನೆ. ಏಕೆಂದರೆ ಹಾಗೆ ಬೈದವರೇ ನಮ್ಮ ತೋಟವನ್ನು ಅನುಸರಿಸಿ ದಾರಿಗೆ ಬಂದಿದ್ದಾರೆ.

ಅವರ ಈ ಅಂಬೋಣಕ್ಕೆ ಕಾರಣವೂ ಇತ್ತು. ಮೊದಲು ನಾವು ತೋಟದ ಉಳುಮೆ ಬಿಟ್ಟಾಗ ಎಲ್ಲಾ ತೋಟದ ಉಳಿಕೆಯನ್ನು ಮರದ ಬುಡದಲ್ಲೆ ರಾಶಿಯಾಗುವಂತೆ ಬಿಟ್ಟ ಪರಿಣಾಮ ಅತಿಯಾಗಿ ಸೆದಾಲು ಉಂಟಾಯಿತು. ಅದರ ಮಧ್ಯದಲ್ಲಿ ಅನಗತ್ಯ ತರಾವರಿ ಗಿಡಗಳನ್ನು ಬೆಳೆಯಲು ಬಿಟ್ಟ ಕಾರಣ ತೋಟ ಕಾಡಿನ ಸ್ವರೂಪಕ್ಕೆ ತಲುಪಿತ್ತು. ನಡುಮನೆಯಂತಿದ್ದ ತೋಟವೀಗ ಒಡೆಯರಿಲ್ಲದೆ ರಜ ತುಂಬಿದ ತೋಟವಾಗಿ ಅವರಿಗೆ ಕಾಣತೊಡಗಿತ್ತು. ಕಾಲ ಕಳೆದಂತೆ ನಮಗೂ ಅದರ ಬಿಸಿ ತಟ್ಟಿತು. ತೋಟದೊಳಗೆ ಕೆಲಸ ಮಾಡುವುದು ಕಷ್ಟವಾಯಿತು. ಹುಳು ಹುಪ್ಪಡಿ ಮತ್ತು ಆಕಸ್ಮಿಕ ಬೆಂಕಿಯ ಭಯಗಳು ಸೇರಿಕೊಂಡು ನಮ್ಮನ್ನು ಎಚ್ಚರಿಸಿದವು.

ನಾವೀಗ ತೋಟದ ಉಳಿಕೆಯನ್ನು ನೆಲಕ್ಕೆ ವ್ಯವಸ್ಥಿತವಾಗಿ ಹೊದಿಸುತ್ತೇವೆ. ಅತಿ ಹೆಚ್ಚಾದ ಸಾವಯವ ಉಳಿಕೆಯನ್ನು ಬುಡದಿಂದ ತೆಗೆದು ಕಡಗಿಗೆ ಹಾಕುತ್ತೇವೆ. ಈ ಎಲ್ಲ ಉಳಿಕೆ ನೆಲದ ಸಂಪರ್ಕಕ್ಕೆ ಬರುವ ಕಾರಣ ಗೆದ್ದಲು ಆಯಾ ವರ್ಷದ ಉಳಿಕೆಯನ್ನು ಆಯಾ ವರ್ಷವೇ ತಿಂದು ಮಣ್ಣು ಮಾಡುತ್ತವೆ. ಅನಗತ್ಯ ಗಿಡಗಳನ್ನು ಕಿತ್ತುಹಾಕಿ ತಿರುಗಾಡಲು ಅನುಕೂಲ ಮಾಡಿಕೊಳ್ಳುತ್ತೇವೆ.

ಈಗ ತೋಟ ನೋಡಿದವರು ಮೊದಲಿನಂತೆ ಬೈಯ್ಯದೆ ಒಪ್ಪುವುದಕ್ಕೆ ಮನಸ್ಸು ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ತಾವೂ ಬೆಳೆಗಳ ಉಳಿಕೆಗಳನ್ನು ಸುಡುವುದನ್ನು ನಿಲ್ಲಿಸಿ ಗೆದ್ದಲಿಗೆ ಉಣಿಸುತ್ತಿದ್ದಾರೆ. ಈಗವರಿಗೆ ಗೊತ್ತಾಗಿದೆ ಸುಟ್ಟರೆ ಸಿಕ್ಕುವುದು ಬೂದಿಯೆಂದು, ತೋಟ ಸುಡುಗಾಡಾಗುವುದೆಂದು. ತೋಟ ಸ್ವಲ್ಪ ಅಸ್ತವ್ಯಸ್ತವಾಗಿದ್ದರೂ ಪರವಾಗಿಲ್ಲವೆಂಬ ತಿಳುವಳಿಕೆ ಅವರಿಗೀಗ ಬಂದಿದೆ.

ಕೆಲವರು ಇಂಥ ಸಾವಯವ ಉಳಿಕೆಗಳನ್ನು ಪುಡಿಮಾಡಲು ದೊಡ್ಡ ಮಿಷನ್‌ ತಂದು ಪ್ರಯತ್ನಿಸಿದರು. ಹೀಗೆ ಮಾಡದಿದ್ದರೆ ತೆಂಗಿನ ಎಡಮಟ್ಟೆ, ಕುರಂಬಳೆ, ಮಟ್ಟೆ ಇತ್ಯಾದಿಗಳು ಕರಗುವುದಿಲ್ಲವೆಂಬುದು ಇವರ ಅಂಬೋಣವಾಗಿತ್ತು. ಆದರೆ ಇದು ಬಲು ಖರ್ಚಿನ, ಅತಿ ಶ್ರಮದ ಬಾಬ್ತು. ನಿಜ, ಎಡಮಟ್ಟೆಗಳು ಬೇಗ ಕರಗುವುದಿಲ್ಲ, ಅದಕ್ಕೆ ನಾವು ಈ ಎಡಮಟ್ಟೆಗಳನ್ನು ಬೇಲಿ ಸಾಲಲ್ಲಿ ವ್ಯವಸ್ಥಿತವಾಗಿ ಒಟ್ಟುತ್ತೇವೆ. ಅವು ಅಲ್ಲಿ ನಿಧಾನವಾಗಿ ಗೆದ್ದಲು ಪಾಲಾಗಿ ಗೊಬ್ಬರವಾಗುತ್ತದೆ. ಬೆಟ್ಟಕ್ಕೆ ಕಲ್ಲು ಹೊರುವುದು ತಪ್ಪುತ್ತದೆ. ತೋಟದೊಳಗೇ ಗೊಬ್ಬರ ಉತ್ಪಾದನೆಯಾಗಿ ಮೇಲೆ ಫಲ ಪಲ್ಲವಿಸುವ ವಿಸ್ಮಯವಿದು.

ಈಗ ನಮ್ಮ ತೋಟದ ಸುತ್ತಮುತ್ತಲ ರೈತರಿಗೆ ಸುಡುವುದರ ನೋವು ಮತ್ತು ಸಾವು ಅರ್ಥವಾಗಿದೆ. ಅವರು ಸುಡುತ್ತಿದ್ದುದು ಕೇವಲ ತೆಂಗಿನ ಉಳಿಕೆಗಳಷ್ಟೇ ಅಲ್ಲ, ನಮಗೆ ಉಪಕಾರಿಯಾದ ಗೆದ್ದಲನ್ನು ಇನ್ನಿತರ ಜೀವಿಗಳನ್ನು ಎಂಬ ಅರಿವು ಉಂಟಾಗಿದೆ. ಅದಕ್ಕೀಗ ಅವರು ಬೆಂಕಿಬೊಮ್ಮರ ಸ್ಥಾನಕ್ಕೆ ರಾಜಿನಾಮೆ ಬಿಸಾಕಿದ್ದಾರೆ. ಗೆದ್ದಲು ಸಂಭ್ರಮದಿಂದ ತೋಟಕ್ಕೆ ಗೊಬ್ಬರ ಉತ್ಪಾದಿಸಿ ಕೊಡುತ್ತಿವೆ. ಅವುಗಳಿಗೆ ಸಲಾಂ ಹೇಳಲು ಬೇರೆ ಕಾರಣ ಇನ್ನೇನು ಬೇಕು? ಆದರೂ ಮುಳ್ಳು ಇನ್ನಿತರ ಕಸಗಳನ್ನು ಸುಡುವುದು ಮುಂದುವರಿದಿದೆ. ಏನನ್ನೂ ಸುಡುವ ಅಗತ್ಯವಿಲ್ಲ, ಬಂಡೆಯೇ ದಿನಪತ್ತಿನ ಮೇಲೆ ಕರಗುತ್ತದೆ ಎಂದರೆ ಇದ್ಯಾವ ಲೆಕ್ಕ?

ಎಷ್ಟೋ ಜನ ಗೆದ್ದಲು ಎಂದರೆ ಸಾವು ಎಂದು ತಿಳಿಯುತ್ತಾರೆ. ಗೆದ್ದಲು ಎಂದರೆ ಹುತ್ತದತ್ತ ಇವರ ಚಿತ್ತ ಹರಿಯುತ್ತದೆ, ಹಾವುಗಳು ಇವರನ್ನು ಸುತ್ತಿಕೊಳ್ಳುತ್ತವೆ, ಗೆದ್ದಲು ಎಂದರೆ ನಾಶ ಎಂದೆ ಇವರ ಸ್ವಷ್ಟ ನಿಲುವು. ಆದರೆ ವಾಸ್ತವವೇ ಬೇರೆ. ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿಗಳೆಂದು ಅವರಿಗೆ ಗೊತ್ತಿಲ್ಲ. ನಿಮ್ಮ ಹೊಲ ತೋಟಗಳಲ್ಲಿ ಗೆದ್ದಲು ಒಣಗಿದ ಎಲೆ, ಗರಿ, ತೊಗಟೆ ಮುಂತಾದ ಪದಾರ್ಥಗಳನ್ನು ತಿಂದು ಬದುಕುತ್ತವೆ. ಇದರಿಂದ ಯಾರಿಗೂ ಯಾವ ತೊಂದರೆಯೂ ಇಲ್ಲ. ಇವುಗಳನ್ನು ಆಜನ್ಮ ವೈರಿಗಳೆಂದು ಭಾವಿಸುವುದು ತಪ್ಪು. ಅನೇಕರಿಗೆ ತಮ್ಮ ವೈರಿ ಯಾರೆಂದು ತಿಳಿಯುವುದೇ ಇಲ್ಲ, ತಮ್ಮ ಮಿತ್ರರನ್ನೇ ವೈರಿಗಳೆಂದು ತಿಳಿದು ಸುಟ್ಟು ಹಾಕುತ್ತಾರೆ. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ. ಕಡಿಮೆ ಖರ್ಚು ಒಳ್ಳೆ ಫಸಲು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ. ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೋಟವನ್ನು ಸುಡುಗಾಡು ಮಾಡದೆ ಕಾಯುವ ಕಾಡು ಮಾಡುವ ಸಂದೇಶದೊಂದಿಗೆ ಕೃಷಿಯ ಸಂತೋಷ ಸಾರುವ ಸುಂದರ ಲೇಖನ.
    ಧನ್ಯವಾದಗಳು ಬಿಳಿಗೆರೆ ಸರ್ ಮತ್ತು ಗೌರಿ.ಕಾಮ್

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...