Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿ.. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ.

- Advertisement -
- Advertisement -

ನೀಟಾಗಿ ತೋಟ ಇಡುವುದೆಂದರೆ ಸಕಲ ಸಾವಯವ ವಸ್ತುಗಳನ್ನು ಅಲ್ಲಲ್ಲಿ ಗುಡ್ಡೆ ಹಾಕಿ ಸುಟ್ಟು, ತೋಟದ ಬದುಗಳನ್ನೆಲ್ಲಾ ಗುಡಿಸಿ ಅಂದವಾಗಿ ಕಾಣುವಂತೆ ಇಟ್ಟುಕೊಳ್ಳುವುದು ಎಂದು ನಂಬಿದ್ದ ನಮ್ಮಪ್ಪ ಹಾಗೇ ಇಟ್ಟುಕೊಂಡಿದ್ದರು. “ಇವರ ಅಪ್ಪ ಎಷ್ಟು ಅಚ್ಚುಕಟ್ಟಾಗಿ ತೋಟ ಇಟ್ಟುಕೊಂಡಿದ್ದರು, ನಡುಮನೆಯಂಥಾ ತೋಟವನ್ನು ಈ ಮನುಷ್ಯ ತಿಪ್ಪೆ ಗುಂಡಿ ಮಾಡಿ ಗಬ್ಬೆಬ್ಬಿಸಿದ್ದಾನೆ, ಇವನ ಪ್ರಯೋಗಕ್ಕಷ್ಟು ಬೆಂಕಿ ಹಾಕ, ಅಡವಾಗಿ ಸಂಬಳ ಬರುತ್ತೆ ಏನೇನಾದರು ಮಾಡಂಗಾಗುತ್ತೆ..” ಇತ್ಯಾದಿ ಬೈಗುಳಗಳನ್ನು ನಮ್ಮ ತೋಟದ ದಾರಿಯಲ್ಲಿ ಸಾಗುವ ಜನರು ಬಿತ್ತರಿಸುವಾಗ, ನಾನು ಬೇಲಿ ಸಾಲಲ್ಲಿ ಕೂತು ಆಲಿಸಿದ್ದೇನೆ. ಇದು ನನ್ನ ಭಾಗ್ಯ ಎಂದೇ ತಿಳಿದಿದ್ದೇನೆ. ಏಕೆಂದರೆ ಹಾಗೆ ಬೈದವರೇ ನಮ್ಮ ತೋಟವನ್ನು ಅನುಸರಿಸಿ ದಾರಿಗೆ ಬಂದಿದ್ದಾರೆ.

ಅವರ ಈ ಅಂಬೋಣಕ್ಕೆ ಕಾರಣವೂ ಇತ್ತು. ಮೊದಲು ನಾವು ತೋಟದ ಉಳುಮೆ ಬಿಟ್ಟಾಗ ಎಲ್ಲಾ ತೋಟದ ಉಳಿಕೆಯನ್ನು ಮರದ ಬುಡದಲ್ಲೆ ರಾಶಿಯಾಗುವಂತೆ ಬಿಟ್ಟ ಪರಿಣಾಮ ಅತಿಯಾಗಿ ಸೆದಾಲು ಉಂಟಾಯಿತು. ಅದರ ಮಧ್ಯದಲ್ಲಿ ಅನಗತ್ಯ ತರಾವರಿ ಗಿಡಗಳನ್ನು ಬೆಳೆಯಲು ಬಿಟ್ಟ ಕಾರಣ ತೋಟ ಕಾಡಿನ ಸ್ವರೂಪಕ್ಕೆ ತಲುಪಿತ್ತು. ನಡುಮನೆಯಂತಿದ್ದ ತೋಟವೀಗ ಒಡೆಯರಿಲ್ಲದೆ ರಜ ತುಂಬಿದ ತೋಟವಾಗಿ ಅವರಿಗೆ ಕಾಣತೊಡಗಿತ್ತು. ಕಾಲ ಕಳೆದಂತೆ ನಮಗೂ ಅದರ ಬಿಸಿ ತಟ್ಟಿತು. ತೋಟದೊಳಗೆ ಕೆಲಸ ಮಾಡುವುದು ಕಷ್ಟವಾಯಿತು. ಹುಳು ಹುಪ್ಪಡಿ ಮತ್ತು ಆಕಸ್ಮಿಕ ಬೆಂಕಿಯ ಭಯಗಳು ಸೇರಿಕೊಂಡು ನಮ್ಮನ್ನು ಎಚ್ಚರಿಸಿದವು.

ನಾವೀಗ ತೋಟದ ಉಳಿಕೆಯನ್ನು ನೆಲಕ್ಕೆ ವ್ಯವಸ್ಥಿತವಾಗಿ ಹೊದಿಸುತ್ತೇವೆ. ಅತಿ ಹೆಚ್ಚಾದ ಸಾವಯವ ಉಳಿಕೆಯನ್ನು ಬುಡದಿಂದ ತೆಗೆದು ಕಡಗಿಗೆ ಹಾಕುತ್ತೇವೆ. ಈ ಎಲ್ಲ ಉಳಿಕೆ ನೆಲದ ಸಂಪರ್ಕಕ್ಕೆ ಬರುವ ಕಾರಣ ಗೆದ್ದಲು ಆಯಾ ವರ್ಷದ ಉಳಿಕೆಯನ್ನು ಆಯಾ ವರ್ಷವೇ ತಿಂದು ಮಣ್ಣು ಮಾಡುತ್ತವೆ. ಅನಗತ್ಯ ಗಿಡಗಳನ್ನು ಕಿತ್ತುಹಾಕಿ ತಿರುಗಾಡಲು ಅನುಕೂಲ ಮಾಡಿಕೊಳ್ಳುತ್ತೇವೆ.

ಈಗ ತೋಟ ನೋಡಿದವರು ಮೊದಲಿನಂತೆ ಬೈಯ್ಯದೆ ಒಪ್ಪುವುದಕ್ಕೆ ಮನಸ್ಸು ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ತಾವೂ ಬೆಳೆಗಳ ಉಳಿಕೆಗಳನ್ನು ಸುಡುವುದನ್ನು ನಿಲ್ಲಿಸಿ ಗೆದ್ದಲಿಗೆ ಉಣಿಸುತ್ತಿದ್ದಾರೆ. ಈಗವರಿಗೆ ಗೊತ್ತಾಗಿದೆ ಸುಟ್ಟರೆ ಸಿಕ್ಕುವುದು ಬೂದಿಯೆಂದು, ತೋಟ ಸುಡುಗಾಡಾಗುವುದೆಂದು. ತೋಟ ಸ್ವಲ್ಪ ಅಸ್ತವ್ಯಸ್ತವಾಗಿದ್ದರೂ ಪರವಾಗಿಲ್ಲವೆಂಬ ತಿಳುವಳಿಕೆ ಅವರಿಗೀಗ ಬಂದಿದೆ.

ಕೆಲವರು ಇಂಥ ಸಾವಯವ ಉಳಿಕೆಗಳನ್ನು ಪುಡಿಮಾಡಲು ದೊಡ್ಡ ಮಿಷನ್‌ ತಂದು ಪ್ರಯತ್ನಿಸಿದರು. ಹೀಗೆ ಮಾಡದಿದ್ದರೆ ತೆಂಗಿನ ಎಡಮಟ್ಟೆ, ಕುರಂಬಳೆ, ಮಟ್ಟೆ ಇತ್ಯಾದಿಗಳು ಕರಗುವುದಿಲ್ಲವೆಂಬುದು ಇವರ ಅಂಬೋಣವಾಗಿತ್ತು. ಆದರೆ ಇದು ಬಲು ಖರ್ಚಿನ, ಅತಿ ಶ್ರಮದ ಬಾಬ್ತು. ನಿಜ, ಎಡಮಟ್ಟೆಗಳು ಬೇಗ ಕರಗುವುದಿಲ್ಲ, ಅದಕ್ಕೆ ನಾವು ಈ ಎಡಮಟ್ಟೆಗಳನ್ನು ಬೇಲಿ ಸಾಲಲ್ಲಿ ವ್ಯವಸ್ಥಿತವಾಗಿ ಒಟ್ಟುತ್ತೇವೆ. ಅವು ಅಲ್ಲಿ ನಿಧಾನವಾಗಿ ಗೆದ್ದಲು ಪಾಲಾಗಿ ಗೊಬ್ಬರವಾಗುತ್ತದೆ. ಬೆಟ್ಟಕ್ಕೆ ಕಲ್ಲು ಹೊರುವುದು ತಪ್ಪುತ್ತದೆ. ತೋಟದೊಳಗೇ ಗೊಬ್ಬರ ಉತ್ಪಾದನೆಯಾಗಿ ಮೇಲೆ ಫಲ ಪಲ್ಲವಿಸುವ ವಿಸ್ಮಯವಿದು.

ಈಗ ನಮ್ಮ ತೋಟದ ಸುತ್ತಮುತ್ತಲ ರೈತರಿಗೆ ಸುಡುವುದರ ನೋವು ಮತ್ತು ಸಾವು ಅರ್ಥವಾಗಿದೆ. ಅವರು ಸುಡುತ್ತಿದ್ದುದು ಕೇವಲ ತೆಂಗಿನ ಉಳಿಕೆಗಳಷ್ಟೇ ಅಲ್ಲ, ನಮಗೆ ಉಪಕಾರಿಯಾದ ಗೆದ್ದಲನ್ನು ಇನ್ನಿತರ ಜೀವಿಗಳನ್ನು ಎಂಬ ಅರಿವು ಉಂಟಾಗಿದೆ. ಅದಕ್ಕೀಗ ಅವರು ಬೆಂಕಿಬೊಮ್ಮರ ಸ್ಥಾನಕ್ಕೆ ರಾಜಿನಾಮೆ ಬಿಸಾಕಿದ್ದಾರೆ. ಗೆದ್ದಲು ಸಂಭ್ರಮದಿಂದ ತೋಟಕ್ಕೆ ಗೊಬ್ಬರ ಉತ್ಪಾದಿಸಿ ಕೊಡುತ್ತಿವೆ. ಅವುಗಳಿಗೆ ಸಲಾಂ ಹೇಳಲು ಬೇರೆ ಕಾರಣ ಇನ್ನೇನು ಬೇಕು? ಆದರೂ ಮುಳ್ಳು ಇನ್ನಿತರ ಕಸಗಳನ್ನು ಸುಡುವುದು ಮುಂದುವರಿದಿದೆ. ಏನನ್ನೂ ಸುಡುವ ಅಗತ್ಯವಿಲ್ಲ, ಬಂಡೆಯೇ ದಿನಪತ್ತಿನ ಮೇಲೆ ಕರಗುತ್ತದೆ ಎಂದರೆ ಇದ್ಯಾವ ಲೆಕ್ಕ?

ಎಷ್ಟೋ ಜನ ಗೆದ್ದಲು ಎಂದರೆ ಸಾವು ಎಂದು ತಿಳಿಯುತ್ತಾರೆ. ಗೆದ್ದಲು ಎಂದರೆ ಹುತ್ತದತ್ತ ಇವರ ಚಿತ್ತ ಹರಿಯುತ್ತದೆ, ಹಾವುಗಳು ಇವರನ್ನು ಸುತ್ತಿಕೊಳ್ಳುತ್ತವೆ, ಗೆದ್ದಲು ಎಂದರೆ ನಾಶ ಎಂದೆ ಇವರ ಸ್ವಷ್ಟ ನಿಲುವು. ಆದರೆ ವಾಸ್ತವವೇ ಬೇರೆ. ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿಗಳೆಂದು ಅವರಿಗೆ ಗೊತ್ತಿಲ್ಲ. ನಿಮ್ಮ ಹೊಲ ತೋಟಗಳಲ್ಲಿ ಗೆದ್ದಲು ಒಣಗಿದ ಎಲೆ, ಗರಿ, ತೊಗಟೆ ಮುಂತಾದ ಪದಾರ್ಥಗಳನ್ನು ತಿಂದು ಬದುಕುತ್ತವೆ. ಇದರಿಂದ ಯಾರಿಗೂ ಯಾವ ತೊಂದರೆಯೂ ಇಲ್ಲ. ಇವುಗಳನ್ನು ಆಜನ್ಮ ವೈರಿಗಳೆಂದು ಭಾವಿಸುವುದು ತಪ್ಪು. ಅನೇಕರಿಗೆ ತಮ್ಮ ವೈರಿ ಯಾರೆಂದು ತಿಳಿಯುವುದೇ ಇಲ್ಲ, ತಮ್ಮ ಮಿತ್ರರನ್ನೇ ವೈರಿಗಳೆಂದು ತಿಳಿದು ಸುಟ್ಟು ಹಾಕುತ್ತಾರೆ. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ. ಕಡಿಮೆ ಖರ್ಚು ಒಳ್ಳೆ ಫಸಲು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ. ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೋಟವನ್ನು ಸುಡುಗಾಡು ಮಾಡದೆ ಕಾಯುವ ಕಾಡು ಮಾಡುವ ಸಂದೇಶದೊಂದಿಗೆ ಕೃಷಿಯ ಸಂತೋಷ ಸಾರುವ ಸುಂದರ ಲೇಖನ.
    ಧನ್ಯವಾದಗಳು ಬಿಳಿಗೆರೆ ಸರ್ ಮತ್ತು ಗೌರಿ.ಕಾಮ್

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...