Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿ.. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ.

- Advertisement -
- Advertisement -

ನೀಟಾಗಿ ತೋಟ ಇಡುವುದೆಂದರೆ ಸಕಲ ಸಾವಯವ ವಸ್ತುಗಳನ್ನು ಅಲ್ಲಲ್ಲಿ ಗುಡ್ಡೆ ಹಾಕಿ ಸುಟ್ಟು, ತೋಟದ ಬದುಗಳನ್ನೆಲ್ಲಾ ಗುಡಿಸಿ ಅಂದವಾಗಿ ಕಾಣುವಂತೆ ಇಟ್ಟುಕೊಳ್ಳುವುದು ಎಂದು ನಂಬಿದ್ದ ನಮ್ಮಪ್ಪ ಹಾಗೇ ಇಟ್ಟುಕೊಂಡಿದ್ದರು. “ಇವರ ಅಪ್ಪ ಎಷ್ಟು ಅಚ್ಚುಕಟ್ಟಾಗಿ ತೋಟ ಇಟ್ಟುಕೊಂಡಿದ್ದರು, ನಡುಮನೆಯಂಥಾ ತೋಟವನ್ನು ಈ ಮನುಷ್ಯ ತಿಪ್ಪೆ ಗುಂಡಿ ಮಾಡಿ ಗಬ್ಬೆಬ್ಬಿಸಿದ್ದಾನೆ, ಇವನ ಪ್ರಯೋಗಕ್ಕಷ್ಟು ಬೆಂಕಿ ಹಾಕ, ಅಡವಾಗಿ ಸಂಬಳ ಬರುತ್ತೆ ಏನೇನಾದರು ಮಾಡಂಗಾಗುತ್ತೆ..” ಇತ್ಯಾದಿ ಬೈಗುಳಗಳನ್ನು ನಮ್ಮ ತೋಟದ ದಾರಿಯಲ್ಲಿ ಸಾಗುವ ಜನರು ಬಿತ್ತರಿಸುವಾಗ, ನಾನು ಬೇಲಿ ಸಾಲಲ್ಲಿ ಕೂತು ಆಲಿಸಿದ್ದೇನೆ. ಇದು ನನ್ನ ಭಾಗ್ಯ ಎಂದೇ ತಿಳಿದಿದ್ದೇನೆ. ಏಕೆಂದರೆ ಹಾಗೆ ಬೈದವರೇ ನಮ್ಮ ತೋಟವನ್ನು ಅನುಸರಿಸಿ ದಾರಿಗೆ ಬಂದಿದ್ದಾರೆ.

ಅವರ ಈ ಅಂಬೋಣಕ್ಕೆ ಕಾರಣವೂ ಇತ್ತು. ಮೊದಲು ನಾವು ತೋಟದ ಉಳುಮೆ ಬಿಟ್ಟಾಗ ಎಲ್ಲಾ ತೋಟದ ಉಳಿಕೆಯನ್ನು ಮರದ ಬುಡದಲ್ಲೆ ರಾಶಿಯಾಗುವಂತೆ ಬಿಟ್ಟ ಪರಿಣಾಮ ಅತಿಯಾಗಿ ಸೆದಾಲು ಉಂಟಾಯಿತು. ಅದರ ಮಧ್ಯದಲ್ಲಿ ಅನಗತ್ಯ ತರಾವರಿ ಗಿಡಗಳನ್ನು ಬೆಳೆಯಲು ಬಿಟ್ಟ ಕಾರಣ ತೋಟ ಕಾಡಿನ ಸ್ವರೂಪಕ್ಕೆ ತಲುಪಿತ್ತು. ನಡುಮನೆಯಂತಿದ್ದ ತೋಟವೀಗ ಒಡೆಯರಿಲ್ಲದೆ ರಜ ತುಂಬಿದ ತೋಟವಾಗಿ ಅವರಿಗೆ ಕಾಣತೊಡಗಿತ್ತು. ಕಾಲ ಕಳೆದಂತೆ ನಮಗೂ ಅದರ ಬಿಸಿ ತಟ್ಟಿತು. ತೋಟದೊಳಗೆ ಕೆಲಸ ಮಾಡುವುದು ಕಷ್ಟವಾಯಿತು. ಹುಳು ಹುಪ್ಪಡಿ ಮತ್ತು ಆಕಸ್ಮಿಕ ಬೆಂಕಿಯ ಭಯಗಳು ಸೇರಿಕೊಂಡು ನಮ್ಮನ್ನು ಎಚ್ಚರಿಸಿದವು.

ನಾವೀಗ ತೋಟದ ಉಳಿಕೆಯನ್ನು ನೆಲಕ್ಕೆ ವ್ಯವಸ್ಥಿತವಾಗಿ ಹೊದಿಸುತ್ತೇವೆ. ಅತಿ ಹೆಚ್ಚಾದ ಸಾವಯವ ಉಳಿಕೆಯನ್ನು ಬುಡದಿಂದ ತೆಗೆದು ಕಡಗಿಗೆ ಹಾಕುತ್ತೇವೆ. ಈ ಎಲ್ಲ ಉಳಿಕೆ ನೆಲದ ಸಂಪರ್ಕಕ್ಕೆ ಬರುವ ಕಾರಣ ಗೆದ್ದಲು ಆಯಾ ವರ್ಷದ ಉಳಿಕೆಯನ್ನು ಆಯಾ ವರ್ಷವೇ ತಿಂದು ಮಣ್ಣು ಮಾಡುತ್ತವೆ. ಅನಗತ್ಯ ಗಿಡಗಳನ್ನು ಕಿತ್ತುಹಾಕಿ ತಿರುಗಾಡಲು ಅನುಕೂಲ ಮಾಡಿಕೊಳ್ಳುತ್ತೇವೆ.

ಈಗ ತೋಟ ನೋಡಿದವರು ಮೊದಲಿನಂತೆ ಬೈಯ್ಯದೆ ಒಪ್ಪುವುದಕ್ಕೆ ಮನಸ್ಸು ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ತಾವೂ ಬೆಳೆಗಳ ಉಳಿಕೆಗಳನ್ನು ಸುಡುವುದನ್ನು ನಿಲ್ಲಿಸಿ ಗೆದ್ದಲಿಗೆ ಉಣಿಸುತ್ತಿದ್ದಾರೆ. ಈಗವರಿಗೆ ಗೊತ್ತಾಗಿದೆ ಸುಟ್ಟರೆ ಸಿಕ್ಕುವುದು ಬೂದಿಯೆಂದು, ತೋಟ ಸುಡುಗಾಡಾಗುವುದೆಂದು. ತೋಟ ಸ್ವಲ್ಪ ಅಸ್ತವ್ಯಸ್ತವಾಗಿದ್ದರೂ ಪರವಾಗಿಲ್ಲವೆಂಬ ತಿಳುವಳಿಕೆ ಅವರಿಗೀಗ ಬಂದಿದೆ.

ಕೆಲವರು ಇಂಥ ಸಾವಯವ ಉಳಿಕೆಗಳನ್ನು ಪುಡಿಮಾಡಲು ದೊಡ್ಡ ಮಿಷನ್‌ ತಂದು ಪ್ರಯತ್ನಿಸಿದರು. ಹೀಗೆ ಮಾಡದಿದ್ದರೆ ತೆಂಗಿನ ಎಡಮಟ್ಟೆ, ಕುರಂಬಳೆ, ಮಟ್ಟೆ ಇತ್ಯಾದಿಗಳು ಕರಗುವುದಿಲ್ಲವೆಂಬುದು ಇವರ ಅಂಬೋಣವಾಗಿತ್ತು. ಆದರೆ ಇದು ಬಲು ಖರ್ಚಿನ, ಅತಿ ಶ್ರಮದ ಬಾಬ್ತು. ನಿಜ, ಎಡಮಟ್ಟೆಗಳು ಬೇಗ ಕರಗುವುದಿಲ್ಲ, ಅದಕ್ಕೆ ನಾವು ಈ ಎಡಮಟ್ಟೆಗಳನ್ನು ಬೇಲಿ ಸಾಲಲ್ಲಿ ವ್ಯವಸ್ಥಿತವಾಗಿ ಒಟ್ಟುತ್ತೇವೆ. ಅವು ಅಲ್ಲಿ ನಿಧಾನವಾಗಿ ಗೆದ್ದಲು ಪಾಲಾಗಿ ಗೊಬ್ಬರವಾಗುತ್ತದೆ. ಬೆಟ್ಟಕ್ಕೆ ಕಲ್ಲು ಹೊರುವುದು ತಪ್ಪುತ್ತದೆ. ತೋಟದೊಳಗೇ ಗೊಬ್ಬರ ಉತ್ಪಾದನೆಯಾಗಿ ಮೇಲೆ ಫಲ ಪಲ್ಲವಿಸುವ ವಿಸ್ಮಯವಿದು.

ಈಗ ನಮ್ಮ ತೋಟದ ಸುತ್ತಮುತ್ತಲ ರೈತರಿಗೆ ಸುಡುವುದರ ನೋವು ಮತ್ತು ಸಾವು ಅರ್ಥವಾಗಿದೆ. ಅವರು ಸುಡುತ್ತಿದ್ದುದು ಕೇವಲ ತೆಂಗಿನ ಉಳಿಕೆಗಳಷ್ಟೇ ಅಲ್ಲ, ನಮಗೆ ಉಪಕಾರಿಯಾದ ಗೆದ್ದಲನ್ನು ಇನ್ನಿತರ ಜೀವಿಗಳನ್ನು ಎಂಬ ಅರಿವು ಉಂಟಾಗಿದೆ. ಅದಕ್ಕೀಗ ಅವರು ಬೆಂಕಿಬೊಮ್ಮರ ಸ್ಥಾನಕ್ಕೆ ರಾಜಿನಾಮೆ ಬಿಸಾಕಿದ್ದಾರೆ. ಗೆದ್ದಲು ಸಂಭ್ರಮದಿಂದ ತೋಟಕ್ಕೆ ಗೊಬ್ಬರ ಉತ್ಪಾದಿಸಿ ಕೊಡುತ್ತಿವೆ. ಅವುಗಳಿಗೆ ಸಲಾಂ ಹೇಳಲು ಬೇರೆ ಕಾರಣ ಇನ್ನೇನು ಬೇಕು? ಆದರೂ ಮುಳ್ಳು ಇನ್ನಿತರ ಕಸಗಳನ್ನು ಸುಡುವುದು ಮುಂದುವರಿದಿದೆ. ಏನನ್ನೂ ಸುಡುವ ಅಗತ್ಯವಿಲ್ಲ, ಬಂಡೆಯೇ ದಿನಪತ್ತಿನ ಮೇಲೆ ಕರಗುತ್ತದೆ ಎಂದರೆ ಇದ್ಯಾವ ಲೆಕ್ಕ?

ಎಷ್ಟೋ ಜನ ಗೆದ್ದಲು ಎಂದರೆ ಸಾವು ಎಂದು ತಿಳಿಯುತ್ತಾರೆ. ಗೆದ್ದಲು ಎಂದರೆ ಹುತ್ತದತ್ತ ಇವರ ಚಿತ್ತ ಹರಿಯುತ್ತದೆ, ಹಾವುಗಳು ಇವರನ್ನು ಸುತ್ತಿಕೊಳ್ಳುತ್ತವೆ, ಗೆದ್ದಲು ಎಂದರೆ ನಾಶ ಎಂದೆ ಇವರ ಸ್ವಷ್ಟ ನಿಲುವು. ಆದರೆ ವಾಸ್ತವವೇ ಬೇರೆ. ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿಗಳೆಂದು ಅವರಿಗೆ ಗೊತ್ತಿಲ್ಲ. ನಿಮ್ಮ ಹೊಲ ತೋಟಗಳಲ್ಲಿ ಗೆದ್ದಲು ಒಣಗಿದ ಎಲೆ, ಗರಿ, ತೊಗಟೆ ಮುಂತಾದ ಪದಾರ್ಥಗಳನ್ನು ತಿಂದು ಬದುಕುತ್ತವೆ. ಇದರಿಂದ ಯಾರಿಗೂ ಯಾವ ತೊಂದರೆಯೂ ಇಲ್ಲ. ಇವುಗಳನ್ನು ಆಜನ್ಮ ವೈರಿಗಳೆಂದು ಭಾವಿಸುವುದು ತಪ್ಪು. ಅನೇಕರಿಗೆ ತಮ್ಮ ವೈರಿ ಯಾರೆಂದು ತಿಳಿಯುವುದೇ ಇಲ್ಲ, ತಮ್ಮ ಮಿತ್ರರನ್ನೇ ವೈರಿಗಳೆಂದು ತಿಳಿದು ಸುಟ್ಟು ಹಾಕುತ್ತಾರೆ. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ. ಕಡಿಮೆ ಖರ್ಚು ಒಳ್ಳೆ ಫಸಲು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ. ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೋಟವನ್ನು ಸುಡುಗಾಡು ಮಾಡದೆ ಕಾಯುವ ಕಾಡು ಮಾಡುವ ಸಂದೇಶದೊಂದಿಗೆ ಕೃಷಿಯ ಸಂತೋಷ ಸಾರುವ ಸುಂದರ ಲೇಖನ.
    ಧನ್ಯವಾದಗಳು ಬಿಳಿಗೆರೆ ಸರ್ ಮತ್ತು ಗೌರಿ.ಕಾಮ್

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...