Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿ.. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ.

- Advertisement -
- Advertisement -

ನೀಟಾಗಿ ತೋಟ ಇಡುವುದೆಂದರೆ ಸಕಲ ಸಾವಯವ ವಸ್ತುಗಳನ್ನು ಅಲ್ಲಲ್ಲಿ ಗುಡ್ಡೆ ಹಾಕಿ ಸುಟ್ಟು, ತೋಟದ ಬದುಗಳನ್ನೆಲ್ಲಾ ಗುಡಿಸಿ ಅಂದವಾಗಿ ಕಾಣುವಂತೆ ಇಟ್ಟುಕೊಳ್ಳುವುದು ಎಂದು ನಂಬಿದ್ದ ನಮ್ಮಪ್ಪ ಹಾಗೇ ಇಟ್ಟುಕೊಂಡಿದ್ದರು. “ಇವರ ಅಪ್ಪ ಎಷ್ಟು ಅಚ್ಚುಕಟ್ಟಾಗಿ ತೋಟ ಇಟ್ಟುಕೊಂಡಿದ್ದರು, ನಡುಮನೆಯಂಥಾ ತೋಟವನ್ನು ಈ ಮನುಷ್ಯ ತಿಪ್ಪೆ ಗುಂಡಿ ಮಾಡಿ ಗಬ್ಬೆಬ್ಬಿಸಿದ್ದಾನೆ, ಇವನ ಪ್ರಯೋಗಕ್ಕಷ್ಟು ಬೆಂಕಿ ಹಾಕ, ಅಡವಾಗಿ ಸಂಬಳ ಬರುತ್ತೆ ಏನೇನಾದರು ಮಾಡಂಗಾಗುತ್ತೆ..” ಇತ್ಯಾದಿ ಬೈಗುಳಗಳನ್ನು ನಮ್ಮ ತೋಟದ ದಾರಿಯಲ್ಲಿ ಸಾಗುವ ಜನರು ಬಿತ್ತರಿಸುವಾಗ, ನಾನು ಬೇಲಿ ಸಾಲಲ್ಲಿ ಕೂತು ಆಲಿಸಿದ್ದೇನೆ. ಇದು ನನ್ನ ಭಾಗ್ಯ ಎಂದೇ ತಿಳಿದಿದ್ದೇನೆ. ಏಕೆಂದರೆ ಹಾಗೆ ಬೈದವರೇ ನಮ್ಮ ತೋಟವನ್ನು ಅನುಸರಿಸಿ ದಾರಿಗೆ ಬಂದಿದ್ದಾರೆ.

ಅವರ ಈ ಅಂಬೋಣಕ್ಕೆ ಕಾರಣವೂ ಇತ್ತು. ಮೊದಲು ನಾವು ತೋಟದ ಉಳುಮೆ ಬಿಟ್ಟಾಗ ಎಲ್ಲಾ ತೋಟದ ಉಳಿಕೆಯನ್ನು ಮರದ ಬುಡದಲ್ಲೆ ರಾಶಿಯಾಗುವಂತೆ ಬಿಟ್ಟ ಪರಿಣಾಮ ಅತಿಯಾಗಿ ಸೆದಾಲು ಉಂಟಾಯಿತು. ಅದರ ಮಧ್ಯದಲ್ಲಿ ಅನಗತ್ಯ ತರಾವರಿ ಗಿಡಗಳನ್ನು ಬೆಳೆಯಲು ಬಿಟ್ಟ ಕಾರಣ ತೋಟ ಕಾಡಿನ ಸ್ವರೂಪಕ್ಕೆ ತಲುಪಿತ್ತು. ನಡುಮನೆಯಂತಿದ್ದ ತೋಟವೀಗ ಒಡೆಯರಿಲ್ಲದೆ ರಜ ತುಂಬಿದ ತೋಟವಾಗಿ ಅವರಿಗೆ ಕಾಣತೊಡಗಿತ್ತು. ಕಾಲ ಕಳೆದಂತೆ ನಮಗೂ ಅದರ ಬಿಸಿ ತಟ್ಟಿತು. ತೋಟದೊಳಗೆ ಕೆಲಸ ಮಾಡುವುದು ಕಷ್ಟವಾಯಿತು. ಹುಳು ಹುಪ್ಪಡಿ ಮತ್ತು ಆಕಸ್ಮಿಕ ಬೆಂಕಿಯ ಭಯಗಳು ಸೇರಿಕೊಂಡು ನಮ್ಮನ್ನು ಎಚ್ಚರಿಸಿದವು.

ನಾವೀಗ ತೋಟದ ಉಳಿಕೆಯನ್ನು ನೆಲಕ್ಕೆ ವ್ಯವಸ್ಥಿತವಾಗಿ ಹೊದಿಸುತ್ತೇವೆ. ಅತಿ ಹೆಚ್ಚಾದ ಸಾವಯವ ಉಳಿಕೆಯನ್ನು ಬುಡದಿಂದ ತೆಗೆದು ಕಡಗಿಗೆ ಹಾಕುತ್ತೇವೆ. ಈ ಎಲ್ಲ ಉಳಿಕೆ ನೆಲದ ಸಂಪರ್ಕಕ್ಕೆ ಬರುವ ಕಾರಣ ಗೆದ್ದಲು ಆಯಾ ವರ್ಷದ ಉಳಿಕೆಯನ್ನು ಆಯಾ ವರ್ಷವೇ ತಿಂದು ಮಣ್ಣು ಮಾಡುತ್ತವೆ. ಅನಗತ್ಯ ಗಿಡಗಳನ್ನು ಕಿತ್ತುಹಾಕಿ ತಿರುಗಾಡಲು ಅನುಕೂಲ ಮಾಡಿಕೊಳ್ಳುತ್ತೇವೆ.

ಈಗ ತೋಟ ನೋಡಿದವರು ಮೊದಲಿನಂತೆ ಬೈಯ್ಯದೆ ಒಪ್ಪುವುದಕ್ಕೆ ಮನಸ್ಸು ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ತಾವೂ ಬೆಳೆಗಳ ಉಳಿಕೆಗಳನ್ನು ಸುಡುವುದನ್ನು ನಿಲ್ಲಿಸಿ ಗೆದ್ದಲಿಗೆ ಉಣಿಸುತ್ತಿದ್ದಾರೆ. ಈಗವರಿಗೆ ಗೊತ್ತಾಗಿದೆ ಸುಟ್ಟರೆ ಸಿಕ್ಕುವುದು ಬೂದಿಯೆಂದು, ತೋಟ ಸುಡುಗಾಡಾಗುವುದೆಂದು. ತೋಟ ಸ್ವಲ್ಪ ಅಸ್ತವ್ಯಸ್ತವಾಗಿದ್ದರೂ ಪರವಾಗಿಲ್ಲವೆಂಬ ತಿಳುವಳಿಕೆ ಅವರಿಗೀಗ ಬಂದಿದೆ.

ಕೆಲವರು ಇಂಥ ಸಾವಯವ ಉಳಿಕೆಗಳನ್ನು ಪುಡಿಮಾಡಲು ದೊಡ್ಡ ಮಿಷನ್‌ ತಂದು ಪ್ರಯತ್ನಿಸಿದರು. ಹೀಗೆ ಮಾಡದಿದ್ದರೆ ತೆಂಗಿನ ಎಡಮಟ್ಟೆ, ಕುರಂಬಳೆ, ಮಟ್ಟೆ ಇತ್ಯಾದಿಗಳು ಕರಗುವುದಿಲ್ಲವೆಂಬುದು ಇವರ ಅಂಬೋಣವಾಗಿತ್ತು. ಆದರೆ ಇದು ಬಲು ಖರ್ಚಿನ, ಅತಿ ಶ್ರಮದ ಬಾಬ್ತು. ನಿಜ, ಎಡಮಟ್ಟೆಗಳು ಬೇಗ ಕರಗುವುದಿಲ್ಲ, ಅದಕ್ಕೆ ನಾವು ಈ ಎಡಮಟ್ಟೆಗಳನ್ನು ಬೇಲಿ ಸಾಲಲ್ಲಿ ವ್ಯವಸ್ಥಿತವಾಗಿ ಒಟ್ಟುತ್ತೇವೆ. ಅವು ಅಲ್ಲಿ ನಿಧಾನವಾಗಿ ಗೆದ್ದಲು ಪಾಲಾಗಿ ಗೊಬ್ಬರವಾಗುತ್ತದೆ. ಬೆಟ್ಟಕ್ಕೆ ಕಲ್ಲು ಹೊರುವುದು ತಪ್ಪುತ್ತದೆ. ತೋಟದೊಳಗೇ ಗೊಬ್ಬರ ಉತ್ಪಾದನೆಯಾಗಿ ಮೇಲೆ ಫಲ ಪಲ್ಲವಿಸುವ ವಿಸ್ಮಯವಿದು.

ಈಗ ನಮ್ಮ ತೋಟದ ಸುತ್ತಮುತ್ತಲ ರೈತರಿಗೆ ಸುಡುವುದರ ನೋವು ಮತ್ತು ಸಾವು ಅರ್ಥವಾಗಿದೆ. ಅವರು ಸುಡುತ್ತಿದ್ದುದು ಕೇವಲ ತೆಂಗಿನ ಉಳಿಕೆಗಳಷ್ಟೇ ಅಲ್ಲ, ನಮಗೆ ಉಪಕಾರಿಯಾದ ಗೆದ್ದಲನ್ನು ಇನ್ನಿತರ ಜೀವಿಗಳನ್ನು ಎಂಬ ಅರಿವು ಉಂಟಾಗಿದೆ. ಅದಕ್ಕೀಗ ಅವರು ಬೆಂಕಿಬೊಮ್ಮರ ಸ್ಥಾನಕ್ಕೆ ರಾಜಿನಾಮೆ ಬಿಸಾಕಿದ್ದಾರೆ. ಗೆದ್ದಲು ಸಂಭ್ರಮದಿಂದ ತೋಟಕ್ಕೆ ಗೊಬ್ಬರ ಉತ್ಪಾದಿಸಿ ಕೊಡುತ್ತಿವೆ. ಅವುಗಳಿಗೆ ಸಲಾಂ ಹೇಳಲು ಬೇರೆ ಕಾರಣ ಇನ್ನೇನು ಬೇಕು? ಆದರೂ ಮುಳ್ಳು ಇನ್ನಿತರ ಕಸಗಳನ್ನು ಸುಡುವುದು ಮುಂದುವರಿದಿದೆ. ಏನನ್ನೂ ಸುಡುವ ಅಗತ್ಯವಿಲ್ಲ, ಬಂಡೆಯೇ ದಿನಪತ್ತಿನ ಮೇಲೆ ಕರಗುತ್ತದೆ ಎಂದರೆ ಇದ್ಯಾವ ಲೆಕ್ಕ?

ಎಷ್ಟೋ ಜನ ಗೆದ್ದಲು ಎಂದರೆ ಸಾವು ಎಂದು ತಿಳಿಯುತ್ತಾರೆ. ಗೆದ್ದಲು ಎಂದರೆ ಹುತ್ತದತ್ತ ಇವರ ಚಿತ್ತ ಹರಿಯುತ್ತದೆ, ಹಾವುಗಳು ಇವರನ್ನು ಸುತ್ತಿಕೊಳ್ಳುತ್ತವೆ, ಗೆದ್ದಲು ಎಂದರೆ ನಾಶ ಎಂದೆ ಇವರ ಸ್ವಷ್ಟ ನಿಲುವು. ಆದರೆ ವಾಸ್ತವವೇ ಬೇರೆ. ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿಗಳೆಂದು ಅವರಿಗೆ ಗೊತ್ತಿಲ್ಲ. ನಿಮ್ಮ ಹೊಲ ತೋಟಗಳಲ್ಲಿ ಗೆದ್ದಲು ಒಣಗಿದ ಎಲೆ, ಗರಿ, ತೊಗಟೆ ಮುಂತಾದ ಪದಾರ್ಥಗಳನ್ನು ತಿಂದು ಬದುಕುತ್ತವೆ. ಇದರಿಂದ ಯಾರಿಗೂ ಯಾವ ತೊಂದರೆಯೂ ಇಲ್ಲ. ಇವುಗಳನ್ನು ಆಜನ್ಮ ವೈರಿಗಳೆಂದು ಭಾವಿಸುವುದು ತಪ್ಪು. ಅನೇಕರಿಗೆ ತಮ್ಮ ವೈರಿ ಯಾರೆಂದು ತಿಳಿಯುವುದೇ ಇಲ್ಲ, ತಮ್ಮ ಮಿತ್ರರನ್ನೇ ವೈರಿಗಳೆಂದು ತಿಳಿದು ಸುಟ್ಟು ಹಾಕುತ್ತಾರೆ. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ. ಕಡಿಮೆ ಖರ್ಚು ಒಳ್ಳೆ ಫಸಲು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ. ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೋಟವನ್ನು ಸುಡುಗಾಡು ಮಾಡದೆ ಕಾಯುವ ಕಾಡು ಮಾಡುವ ಸಂದೇಶದೊಂದಿಗೆ ಕೃಷಿಯ ಸಂತೋಷ ಸಾರುವ ಸುಂದರ ಲೇಖನ.
    ಧನ್ಯವಾದಗಳು ಬಿಳಿಗೆರೆ ಸರ್ ಮತ್ತು ಗೌರಿ.ಕಾಮ್

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...