Homeಕರ್ನಾಟಕಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ - ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

ಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ – ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

- Advertisement -
- Advertisement -

ಕ್ರಿಯಾ ಮಾಧ್ಯಮ ಮತ್ತು ನವಕರ್ನಾಟಕ ಜಂಟಿಯಾಗಿ ಹಮ್ಮಿಕೊಂಡಿರುವ ‘ಏಂಗೆಲ್ಸ್-200 ಮಾಲಿಕೆ’ಯ ಲೇಖಕ ನಾ. ದಿವಾಕರ ಅವರು ಅನುವಾದಿಸಿರುವ ‘ಜರ್ಮನ್ ರೈತ ಯುದ್ಧ’ ಪುಸ್ತಕ ಬಿಡುಗಡೆ ಸೆಪ್ಟೆಂಬರ್ 21ರ ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವನಗುಡಿಯಲ್ಲಿರುವ ‘ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ’ಯಲ್ಲಿ ನಡೆಯಲಿದೆ.

ಚಿಂತಕ ಜಿ.ಎನ್.ನಾಗರಾಜ್ ಅವರು ಪುಸ್ತಕವನ್ನು ಬಿಡುಗಡೆ ಮಾಡಿ, “ಜರ್ಮನ್ ರೈತ ಯುದ್ಧದ ಮರು-ಓದು: ಜನರ ಸಂಕಟಗಳು, ಚಳುವಳಿಗಳು ಮತ್ತು ಧಾರ್ಮಿಕ ರೂಪಗಳು” ಎಂಬ ವಿಷಯದ ಕುರಿತು  ಉಪನ್ಯಾಸ ನೀಡಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಸಂವಾದದಲ್ಲಿ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ರೈತ ಹೋರಾಟಗಾರ ನವೀನ್ ಕುಮಾರ್ ಎಚ್.ಆರ್ ಪುಸ್ತಕವನ್ನು ಪರಿಚಯ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1524-25ರಲ್ಲಿ ನಡೆದ ಜರ್ಮನ್ ರೈತ ಯುದ್ಧ 1789ರ ಫ್ರೆಂಚ್ ಕ್ರಾಂತಿಯ ಮೊದಲು ನಡೆದ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೋರಾಟವಾಗಿದೆ. ಇತರ ಹಲವು ಅಂಶಗಳ ಜತೆಗೆ ಲೂಥರ್ ಮಂಡಿಸಿದ ಧಾರ್ಮಿಕ ಸುಧಾರಣೆಗಳ ಹಿನ್ನೆಲೆಯಲ್ಲಿ ಬೆಳೆದು ಬಂದ ಇದು, ಹಲವು ತಿಂಗಳ ಕಾಲ ಮಧ್ಯ ಯುರೋಪಿನ ಈಗಿನ ಜರ್ಮನಿ, ನೆದರ್ ಲ್ಯಾಂಡ್ಸ್ ಗಳ ಬಹುಭಾಗಗಳನ್ನು ಆವರಿಸಿ ಬೃಹತ್ ರೈತ ಯುದ್ಧವಾಗಿತ್ತು.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಚಳುವಳಿಯ ಆರಂಭದಲ್ಲೇ ರೂಪಿತವಾಗಿದ್ದ “ರೈತರ ಹನ್ನೆರಡು ಕಟ್ಟಳೆಗಳ” ಜಾರಿಗಾಗಿ ಈ ಯುದ್ಧವನ್ನು ಸಾರಲಾಯಿತು. ಇದು ರೈತ ಸಂಘಟನೆಗಳ ಒಕ್ಕೂಟದ ಪ್ರಣಾಳಿಕೆ, ಸಂವಿಧಾನ, ಹಕ್ಕೊತ್ತಾಯಗಳ ಪಟ್ಟಿ, ಗೆದ್ದರೆ ಮುಂಬರುವ ಆಡಳಿತದ ಕಾರ್ಯಸೂಚಿ ಇವೆಲ್ಲವನ್ನೂ ಒಳಗೊಂಡಿತ್ತು. ಇದನ್ನು ಮೊದಲ ಮಾನವ ಹಕ್ಕುಗಳ ಘೋಷಣೆ ಎಂದೂ ಪರಿಗಣಿಸಲಾಗಿದೆ.

ಜರ್ಮನ್ ರೈತ ಯುದ್ಧದಲ್ಲಿ ಸಶಸ್ತ್ರವಾಗಿ ಭಾಗವಹಿಸಿದ ರೈತರ ಸಂಖ್ಯೆ 3 ಲಕ್ಷವನ್ನು ಮೀರಿತ್ತು. ಯುದ್ಧದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು. ಈ ಚಾರಿತ್ರಿಕ ರೈತರ ಯುದ್ಧ ಸೋತರೂ ಯುರೋಪಿನಲ್ಲೂ ಜಾಗತಿಕವಾಗಿಯೂ ಹಲವು ಸ್ಥಿತ್ಯಂತರಗಳ ಮುನ್ನುಡಿ ಬರೆಯಿತು. ಇಂದಿನವರೆಗೂ ಎಲ್ಲ ರೈತ ಯುದ್ಧಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಪಾಳೆಯಗಾರಿ ವ್ಯವಸ್ಥೆಯ ವಿರುದ್ಧ ಬಂಡಾಯದ ಪ್ರತೀಕವಾಗಿದೆ.

ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ಹೆಚ್ಚಿನ ರೈತ ಸಂಬಂಧಿ ಪ್ರಶ್ನೆಗಳನ್ನು ಮೊದಲ ಬಾರಿಗೆ ಅಂದಿನ ಸಂದರ್ಭದಲ್ಲಿ ಎತ್ತಿ ಉತ್ತರಿಸಲು ಪ್ರಯತ್ನಿಸಿದ, ಈ ಕೃತಿ ಇಂದಿಗೂ ಅತ್ಯಂತ ಪ್ರಸ್ತುತ ಎಂದು ಕ್ರಿಯಾ ಮಾಧ್ಯಮ ಹೇಳಿದೆ. ಪುಸ್ತಕವು ಏಂಗೆಲ್ಸ್ ಅವರ ಗತಿತಾರ್ಕಿಕ ಭೌತವಾದವನ್ನು ಚರಿತ್ರೆಗೆ ಅನ್ವಯಿಸಿದ ಆರಂಭಿಕ ಪ್ರಯತ್ನಗಳಲ್ಲಿ ಒಂದಾಗಿದ್ದು, ಈ ವಿಧಾನ ಇತರ ಚಾರಿತ್ರಿಕ ವಿದ್ಯಮಾನಗಳ ಸಮಗ್ರ ಅರ್ಥೈಸುವಿಕೆಗೆ ಒಂದು ಮಾದರಿಯನ್ನು ಒದಗಿಸುತ್ತದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....