Homeಕರ್ನಾಟಕಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ - ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

ಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ – ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

- Advertisement -
- Advertisement -

ಕ್ರಿಯಾ ಮಾಧ್ಯಮ ಮತ್ತು ನವಕರ್ನಾಟಕ ಜಂಟಿಯಾಗಿ ಹಮ್ಮಿಕೊಂಡಿರುವ ‘ಏಂಗೆಲ್ಸ್-200 ಮಾಲಿಕೆ’ಯ ಲೇಖಕ ನಾ. ದಿವಾಕರ ಅವರು ಅನುವಾದಿಸಿರುವ ‘ಜರ್ಮನ್ ರೈತ ಯುದ್ಧ’ ಪುಸ್ತಕ ಬಿಡುಗಡೆ ಸೆಪ್ಟೆಂಬರ್ 21ರ ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವನಗುಡಿಯಲ್ಲಿರುವ ‘ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ’ಯಲ್ಲಿ ನಡೆಯಲಿದೆ.

ಚಿಂತಕ ಜಿ.ಎನ್.ನಾಗರಾಜ್ ಅವರು ಪುಸ್ತಕವನ್ನು ಬಿಡುಗಡೆ ಮಾಡಿ, “ಜರ್ಮನ್ ರೈತ ಯುದ್ಧದ ಮರು-ಓದು: ಜನರ ಸಂಕಟಗಳು, ಚಳುವಳಿಗಳು ಮತ್ತು ಧಾರ್ಮಿಕ ರೂಪಗಳು” ಎಂಬ ವಿಷಯದ ಕುರಿತು  ಉಪನ್ಯಾಸ ನೀಡಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಸಂವಾದದಲ್ಲಿ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ರೈತ ಹೋರಾಟಗಾರ ನವೀನ್ ಕುಮಾರ್ ಎಚ್.ಆರ್ ಪುಸ್ತಕವನ್ನು ಪರಿಚಯ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1524-25ರಲ್ಲಿ ನಡೆದ ಜರ್ಮನ್ ರೈತ ಯುದ್ಧ 1789ರ ಫ್ರೆಂಚ್ ಕ್ರಾಂತಿಯ ಮೊದಲು ನಡೆದ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೋರಾಟವಾಗಿದೆ. ಇತರ ಹಲವು ಅಂಶಗಳ ಜತೆಗೆ ಲೂಥರ್ ಮಂಡಿಸಿದ ಧಾರ್ಮಿಕ ಸುಧಾರಣೆಗಳ ಹಿನ್ನೆಲೆಯಲ್ಲಿ ಬೆಳೆದು ಬಂದ ಇದು, ಹಲವು ತಿಂಗಳ ಕಾಲ ಮಧ್ಯ ಯುರೋಪಿನ ಈಗಿನ ಜರ್ಮನಿ, ನೆದರ್ ಲ್ಯಾಂಡ್ಸ್ ಗಳ ಬಹುಭಾಗಗಳನ್ನು ಆವರಿಸಿ ಬೃಹತ್ ರೈತ ಯುದ್ಧವಾಗಿತ್ತು.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಚಳುವಳಿಯ ಆರಂಭದಲ್ಲೇ ರೂಪಿತವಾಗಿದ್ದ “ರೈತರ ಹನ್ನೆರಡು ಕಟ್ಟಳೆಗಳ” ಜಾರಿಗಾಗಿ ಈ ಯುದ್ಧವನ್ನು ಸಾರಲಾಯಿತು. ಇದು ರೈತ ಸಂಘಟನೆಗಳ ಒಕ್ಕೂಟದ ಪ್ರಣಾಳಿಕೆ, ಸಂವಿಧಾನ, ಹಕ್ಕೊತ್ತಾಯಗಳ ಪಟ್ಟಿ, ಗೆದ್ದರೆ ಮುಂಬರುವ ಆಡಳಿತದ ಕಾರ್ಯಸೂಚಿ ಇವೆಲ್ಲವನ್ನೂ ಒಳಗೊಂಡಿತ್ತು. ಇದನ್ನು ಮೊದಲ ಮಾನವ ಹಕ್ಕುಗಳ ಘೋಷಣೆ ಎಂದೂ ಪರಿಗಣಿಸಲಾಗಿದೆ.

ಜರ್ಮನ್ ರೈತ ಯುದ್ಧದಲ್ಲಿ ಸಶಸ್ತ್ರವಾಗಿ ಭಾಗವಹಿಸಿದ ರೈತರ ಸಂಖ್ಯೆ 3 ಲಕ್ಷವನ್ನು ಮೀರಿತ್ತು. ಯುದ್ಧದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು. ಈ ಚಾರಿತ್ರಿಕ ರೈತರ ಯುದ್ಧ ಸೋತರೂ ಯುರೋಪಿನಲ್ಲೂ ಜಾಗತಿಕವಾಗಿಯೂ ಹಲವು ಸ್ಥಿತ್ಯಂತರಗಳ ಮುನ್ನುಡಿ ಬರೆಯಿತು. ಇಂದಿನವರೆಗೂ ಎಲ್ಲ ರೈತ ಯುದ್ಧಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಪಾಳೆಯಗಾರಿ ವ್ಯವಸ್ಥೆಯ ವಿರುದ್ಧ ಬಂಡಾಯದ ಪ್ರತೀಕವಾಗಿದೆ.

ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ಹೆಚ್ಚಿನ ರೈತ ಸಂಬಂಧಿ ಪ್ರಶ್ನೆಗಳನ್ನು ಮೊದಲ ಬಾರಿಗೆ ಅಂದಿನ ಸಂದರ್ಭದಲ್ಲಿ ಎತ್ತಿ ಉತ್ತರಿಸಲು ಪ್ರಯತ್ನಿಸಿದ, ಈ ಕೃತಿ ಇಂದಿಗೂ ಅತ್ಯಂತ ಪ್ರಸ್ತುತ ಎಂದು ಕ್ರಿಯಾ ಮಾಧ್ಯಮ ಹೇಳಿದೆ. ಪುಸ್ತಕವು ಏಂಗೆಲ್ಸ್ ಅವರ ಗತಿತಾರ್ಕಿಕ ಭೌತವಾದವನ್ನು ಚರಿತ್ರೆಗೆ ಅನ್ವಯಿಸಿದ ಆರಂಭಿಕ ಪ್ರಯತ್ನಗಳಲ್ಲಿ ಒಂದಾಗಿದ್ದು, ಈ ವಿಧಾನ ಇತರ ಚಾರಿತ್ರಿಕ ವಿದ್ಯಮಾನಗಳ ಸಮಗ್ರ ಅರ್ಥೈಸುವಿಕೆಗೆ ಒಂದು ಮಾದರಿಯನ್ನು ಒದಗಿಸುತ್ತದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...