Homeಕರ್ನಾಟಕಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ - ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

ಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ – ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

- Advertisement -
- Advertisement -

ಕ್ರಿಯಾ ಮಾಧ್ಯಮ ಮತ್ತು ನವಕರ್ನಾಟಕ ಜಂಟಿಯಾಗಿ ಹಮ್ಮಿಕೊಂಡಿರುವ ‘ಏಂಗೆಲ್ಸ್-200 ಮಾಲಿಕೆ’ಯ ಲೇಖಕ ನಾ. ದಿವಾಕರ ಅವರು ಅನುವಾದಿಸಿರುವ ‘ಜರ್ಮನ್ ರೈತ ಯುದ್ಧ’ ಪುಸ್ತಕ ಬಿಡುಗಡೆ ಸೆಪ್ಟೆಂಬರ್ 21ರ ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವನಗುಡಿಯಲ್ಲಿರುವ ‘ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ’ಯಲ್ಲಿ ನಡೆಯಲಿದೆ.

ಚಿಂತಕ ಜಿ.ಎನ್.ನಾಗರಾಜ್ ಅವರು ಪುಸ್ತಕವನ್ನು ಬಿಡುಗಡೆ ಮಾಡಿ, “ಜರ್ಮನ್ ರೈತ ಯುದ್ಧದ ಮರು-ಓದು: ಜನರ ಸಂಕಟಗಳು, ಚಳುವಳಿಗಳು ಮತ್ತು ಧಾರ್ಮಿಕ ರೂಪಗಳು” ಎಂಬ ವಿಷಯದ ಕುರಿತು  ಉಪನ್ಯಾಸ ನೀಡಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಸಂವಾದದಲ್ಲಿ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ರೈತ ಹೋರಾಟಗಾರ ನವೀನ್ ಕುಮಾರ್ ಎಚ್.ಆರ್ ಪುಸ್ತಕವನ್ನು ಪರಿಚಯ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1524-25ರಲ್ಲಿ ನಡೆದ ಜರ್ಮನ್ ರೈತ ಯುದ್ಧ 1789ರ ಫ್ರೆಂಚ್ ಕ್ರಾಂತಿಯ ಮೊದಲು ನಡೆದ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೋರಾಟವಾಗಿದೆ. ಇತರ ಹಲವು ಅಂಶಗಳ ಜತೆಗೆ ಲೂಥರ್ ಮಂಡಿಸಿದ ಧಾರ್ಮಿಕ ಸುಧಾರಣೆಗಳ ಹಿನ್ನೆಲೆಯಲ್ಲಿ ಬೆಳೆದು ಬಂದ ಇದು, ಹಲವು ತಿಂಗಳ ಕಾಲ ಮಧ್ಯ ಯುರೋಪಿನ ಈಗಿನ ಜರ್ಮನಿ, ನೆದರ್ ಲ್ಯಾಂಡ್ಸ್ ಗಳ ಬಹುಭಾಗಗಳನ್ನು ಆವರಿಸಿ ಬೃಹತ್ ರೈತ ಯುದ್ಧವಾಗಿತ್ತು.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಚಳುವಳಿಯ ಆರಂಭದಲ್ಲೇ ರೂಪಿತವಾಗಿದ್ದ “ರೈತರ ಹನ್ನೆರಡು ಕಟ್ಟಳೆಗಳ” ಜಾರಿಗಾಗಿ ಈ ಯುದ್ಧವನ್ನು ಸಾರಲಾಯಿತು. ಇದು ರೈತ ಸಂಘಟನೆಗಳ ಒಕ್ಕೂಟದ ಪ್ರಣಾಳಿಕೆ, ಸಂವಿಧಾನ, ಹಕ್ಕೊತ್ತಾಯಗಳ ಪಟ್ಟಿ, ಗೆದ್ದರೆ ಮುಂಬರುವ ಆಡಳಿತದ ಕಾರ್ಯಸೂಚಿ ಇವೆಲ್ಲವನ್ನೂ ಒಳಗೊಂಡಿತ್ತು. ಇದನ್ನು ಮೊದಲ ಮಾನವ ಹಕ್ಕುಗಳ ಘೋಷಣೆ ಎಂದೂ ಪರಿಗಣಿಸಲಾಗಿದೆ.

ಜರ್ಮನ್ ರೈತ ಯುದ್ಧದಲ್ಲಿ ಸಶಸ್ತ್ರವಾಗಿ ಭಾಗವಹಿಸಿದ ರೈತರ ಸಂಖ್ಯೆ 3 ಲಕ್ಷವನ್ನು ಮೀರಿತ್ತು. ಯುದ್ಧದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು. ಈ ಚಾರಿತ್ರಿಕ ರೈತರ ಯುದ್ಧ ಸೋತರೂ ಯುರೋಪಿನಲ್ಲೂ ಜಾಗತಿಕವಾಗಿಯೂ ಹಲವು ಸ್ಥಿತ್ಯಂತರಗಳ ಮುನ್ನುಡಿ ಬರೆಯಿತು. ಇಂದಿನವರೆಗೂ ಎಲ್ಲ ರೈತ ಯುದ್ಧಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಪಾಳೆಯಗಾರಿ ವ್ಯವಸ್ಥೆಯ ವಿರುದ್ಧ ಬಂಡಾಯದ ಪ್ರತೀಕವಾಗಿದೆ.

ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ಹೆಚ್ಚಿನ ರೈತ ಸಂಬಂಧಿ ಪ್ರಶ್ನೆಗಳನ್ನು ಮೊದಲ ಬಾರಿಗೆ ಅಂದಿನ ಸಂದರ್ಭದಲ್ಲಿ ಎತ್ತಿ ಉತ್ತರಿಸಲು ಪ್ರಯತ್ನಿಸಿದ, ಈ ಕೃತಿ ಇಂದಿಗೂ ಅತ್ಯಂತ ಪ್ರಸ್ತುತ ಎಂದು ಕ್ರಿಯಾ ಮಾಧ್ಯಮ ಹೇಳಿದೆ. ಪುಸ್ತಕವು ಏಂಗೆಲ್ಸ್ ಅವರ ಗತಿತಾರ್ಕಿಕ ಭೌತವಾದವನ್ನು ಚರಿತ್ರೆಗೆ ಅನ್ವಯಿಸಿದ ಆರಂಭಿಕ ಪ್ರಯತ್ನಗಳಲ್ಲಿ ಒಂದಾಗಿದ್ದು, ಈ ವಿಧಾನ ಇತರ ಚಾರಿತ್ರಿಕ ವಿದ್ಯಮಾನಗಳ ಸಮಗ್ರ ಅರ್ಥೈಸುವಿಕೆಗೆ ಒಂದು ಮಾದರಿಯನ್ನು ಒದಗಿಸುತ್ತದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...