Homeಕರ್ನಾಟಕಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ - ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

ಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ – ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

- Advertisement -
- Advertisement -

ಕ್ರಿಯಾ ಮಾಧ್ಯಮ ಮತ್ತು ನವಕರ್ನಾಟಕ ಜಂಟಿಯಾಗಿ ಹಮ್ಮಿಕೊಂಡಿರುವ ‘ಏಂಗೆಲ್ಸ್-200 ಮಾಲಿಕೆ’ಯ ಲೇಖಕ ನಾ. ದಿವಾಕರ ಅವರು ಅನುವಾದಿಸಿರುವ ‘ಜರ್ಮನ್ ರೈತ ಯುದ್ಧ’ ಪುಸ್ತಕ ಬಿಡುಗಡೆ ಸೆಪ್ಟೆಂಬರ್ 21ರ ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವನಗುಡಿಯಲ್ಲಿರುವ ‘ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ’ಯಲ್ಲಿ ನಡೆಯಲಿದೆ.

ಚಿಂತಕ ಜಿ.ಎನ್.ನಾಗರಾಜ್ ಅವರು ಪುಸ್ತಕವನ್ನು ಬಿಡುಗಡೆ ಮಾಡಿ, “ಜರ್ಮನ್ ರೈತ ಯುದ್ಧದ ಮರು-ಓದು: ಜನರ ಸಂಕಟಗಳು, ಚಳುವಳಿಗಳು ಮತ್ತು ಧಾರ್ಮಿಕ ರೂಪಗಳು” ಎಂಬ ವಿಷಯದ ಕುರಿತು  ಉಪನ್ಯಾಸ ನೀಡಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಸಂವಾದದಲ್ಲಿ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ರೈತ ಹೋರಾಟಗಾರ ನವೀನ್ ಕುಮಾರ್ ಎಚ್.ಆರ್ ಪುಸ್ತಕವನ್ನು ಪರಿಚಯ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1524-25ರಲ್ಲಿ ನಡೆದ ಜರ್ಮನ್ ರೈತ ಯುದ್ಧ 1789ರ ಫ್ರೆಂಚ್ ಕ್ರಾಂತಿಯ ಮೊದಲು ನಡೆದ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೋರಾಟವಾಗಿದೆ. ಇತರ ಹಲವು ಅಂಶಗಳ ಜತೆಗೆ ಲೂಥರ್ ಮಂಡಿಸಿದ ಧಾರ್ಮಿಕ ಸುಧಾರಣೆಗಳ ಹಿನ್ನೆಲೆಯಲ್ಲಿ ಬೆಳೆದು ಬಂದ ಇದು, ಹಲವು ತಿಂಗಳ ಕಾಲ ಮಧ್ಯ ಯುರೋಪಿನ ಈಗಿನ ಜರ್ಮನಿ, ನೆದರ್ ಲ್ಯಾಂಡ್ಸ್ ಗಳ ಬಹುಭಾಗಗಳನ್ನು ಆವರಿಸಿ ಬೃಹತ್ ರೈತ ಯುದ್ಧವಾಗಿತ್ತು.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಚಳುವಳಿಯ ಆರಂಭದಲ್ಲೇ ರೂಪಿತವಾಗಿದ್ದ “ರೈತರ ಹನ್ನೆರಡು ಕಟ್ಟಳೆಗಳ” ಜಾರಿಗಾಗಿ ಈ ಯುದ್ಧವನ್ನು ಸಾರಲಾಯಿತು. ಇದು ರೈತ ಸಂಘಟನೆಗಳ ಒಕ್ಕೂಟದ ಪ್ರಣಾಳಿಕೆ, ಸಂವಿಧಾನ, ಹಕ್ಕೊತ್ತಾಯಗಳ ಪಟ್ಟಿ, ಗೆದ್ದರೆ ಮುಂಬರುವ ಆಡಳಿತದ ಕಾರ್ಯಸೂಚಿ ಇವೆಲ್ಲವನ್ನೂ ಒಳಗೊಂಡಿತ್ತು. ಇದನ್ನು ಮೊದಲ ಮಾನವ ಹಕ್ಕುಗಳ ಘೋಷಣೆ ಎಂದೂ ಪರಿಗಣಿಸಲಾಗಿದೆ.

ಜರ್ಮನ್ ರೈತ ಯುದ್ಧದಲ್ಲಿ ಸಶಸ್ತ್ರವಾಗಿ ಭಾಗವಹಿಸಿದ ರೈತರ ಸಂಖ್ಯೆ 3 ಲಕ್ಷವನ್ನು ಮೀರಿತ್ತು. ಯುದ್ಧದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು. ಈ ಚಾರಿತ್ರಿಕ ರೈತರ ಯುದ್ಧ ಸೋತರೂ ಯುರೋಪಿನಲ್ಲೂ ಜಾಗತಿಕವಾಗಿಯೂ ಹಲವು ಸ್ಥಿತ್ಯಂತರಗಳ ಮುನ್ನುಡಿ ಬರೆಯಿತು. ಇಂದಿನವರೆಗೂ ಎಲ್ಲ ರೈತ ಯುದ್ಧಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಪಾಳೆಯಗಾರಿ ವ್ಯವಸ್ಥೆಯ ವಿರುದ್ಧ ಬಂಡಾಯದ ಪ್ರತೀಕವಾಗಿದೆ.

ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ಹೆಚ್ಚಿನ ರೈತ ಸಂಬಂಧಿ ಪ್ರಶ್ನೆಗಳನ್ನು ಮೊದಲ ಬಾರಿಗೆ ಅಂದಿನ ಸಂದರ್ಭದಲ್ಲಿ ಎತ್ತಿ ಉತ್ತರಿಸಲು ಪ್ರಯತ್ನಿಸಿದ, ಈ ಕೃತಿ ಇಂದಿಗೂ ಅತ್ಯಂತ ಪ್ರಸ್ತುತ ಎಂದು ಕ್ರಿಯಾ ಮಾಧ್ಯಮ ಹೇಳಿದೆ. ಪುಸ್ತಕವು ಏಂಗೆಲ್ಸ್ ಅವರ ಗತಿತಾರ್ಕಿಕ ಭೌತವಾದವನ್ನು ಚರಿತ್ರೆಗೆ ಅನ್ವಯಿಸಿದ ಆರಂಭಿಕ ಪ್ರಯತ್ನಗಳಲ್ಲಿ ಒಂದಾಗಿದ್ದು, ಈ ವಿಧಾನ ಇತರ ಚಾರಿತ್ರಿಕ ವಿದ್ಯಮಾನಗಳ ಸಮಗ್ರ ಅರ್ಥೈಸುವಿಕೆಗೆ ಒಂದು ಮಾದರಿಯನ್ನು ಒದಗಿಸುತ್ತದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...