Homeಕರ್ನಾಟಕಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ - ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

ಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ – ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

- Advertisement -
- Advertisement -

ಕ್ರಿಯಾ ಮಾಧ್ಯಮ ಮತ್ತು ನವಕರ್ನಾಟಕ ಜಂಟಿಯಾಗಿ ಹಮ್ಮಿಕೊಂಡಿರುವ ‘ಏಂಗೆಲ್ಸ್-200 ಮಾಲಿಕೆ’ಯ ಲೇಖಕ ನಾ. ದಿವಾಕರ ಅವರು ಅನುವಾದಿಸಿರುವ ‘ಜರ್ಮನ್ ರೈತ ಯುದ್ಧ’ ಪುಸ್ತಕ ಬಿಡುಗಡೆ ಸೆಪ್ಟೆಂಬರ್ 21ರ ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವನಗುಡಿಯಲ್ಲಿರುವ ‘ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ’ಯಲ್ಲಿ ನಡೆಯಲಿದೆ.

ಚಿಂತಕ ಜಿ.ಎನ್.ನಾಗರಾಜ್ ಅವರು ಪುಸ್ತಕವನ್ನು ಬಿಡುಗಡೆ ಮಾಡಿ, “ಜರ್ಮನ್ ರೈತ ಯುದ್ಧದ ಮರು-ಓದು: ಜನರ ಸಂಕಟಗಳು, ಚಳುವಳಿಗಳು ಮತ್ತು ಧಾರ್ಮಿಕ ರೂಪಗಳು” ಎಂಬ ವಿಷಯದ ಕುರಿತು  ಉಪನ್ಯಾಸ ನೀಡಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಸಂವಾದದಲ್ಲಿ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ರೈತ ಹೋರಾಟಗಾರ ನವೀನ್ ಕುಮಾರ್ ಎಚ್.ಆರ್ ಪುಸ್ತಕವನ್ನು ಪರಿಚಯ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1524-25ರಲ್ಲಿ ನಡೆದ ಜರ್ಮನ್ ರೈತ ಯುದ್ಧ 1789ರ ಫ್ರೆಂಚ್ ಕ್ರಾಂತಿಯ ಮೊದಲು ನಡೆದ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೋರಾಟವಾಗಿದೆ. ಇತರ ಹಲವು ಅಂಶಗಳ ಜತೆಗೆ ಲೂಥರ್ ಮಂಡಿಸಿದ ಧಾರ್ಮಿಕ ಸುಧಾರಣೆಗಳ ಹಿನ್ನೆಲೆಯಲ್ಲಿ ಬೆಳೆದು ಬಂದ ಇದು, ಹಲವು ತಿಂಗಳ ಕಾಲ ಮಧ್ಯ ಯುರೋಪಿನ ಈಗಿನ ಜರ್ಮನಿ, ನೆದರ್ ಲ್ಯಾಂಡ್ಸ್ ಗಳ ಬಹುಭಾಗಗಳನ್ನು ಆವರಿಸಿ ಬೃಹತ್ ರೈತ ಯುದ್ಧವಾಗಿತ್ತು.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಚಳುವಳಿಯ ಆರಂಭದಲ್ಲೇ ರೂಪಿತವಾಗಿದ್ದ “ರೈತರ ಹನ್ನೆರಡು ಕಟ್ಟಳೆಗಳ” ಜಾರಿಗಾಗಿ ಈ ಯುದ್ಧವನ್ನು ಸಾರಲಾಯಿತು. ಇದು ರೈತ ಸಂಘಟನೆಗಳ ಒಕ್ಕೂಟದ ಪ್ರಣಾಳಿಕೆ, ಸಂವಿಧಾನ, ಹಕ್ಕೊತ್ತಾಯಗಳ ಪಟ್ಟಿ, ಗೆದ್ದರೆ ಮುಂಬರುವ ಆಡಳಿತದ ಕಾರ್ಯಸೂಚಿ ಇವೆಲ್ಲವನ್ನೂ ಒಳಗೊಂಡಿತ್ತು. ಇದನ್ನು ಮೊದಲ ಮಾನವ ಹಕ್ಕುಗಳ ಘೋಷಣೆ ಎಂದೂ ಪರಿಗಣಿಸಲಾಗಿದೆ.

ಜರ್ಮನ್ ರೈತ ಯುದ್ಧದಲ್ಲಿ ಸಶಸ್ತ್ರವಾಗಿ ಭಾಗವಹಿಸಿದ ರೈತರ ಸಂಖ್ಯೆ 3 ಲಕ್ಷವನ್ನು ಮೀರಿತ್ತು. ಯುದ್ಧದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು. ಈ ಚಾರಿತ್ರಿಕ ರೈತರ ಯುದ್ಧ ಸೋತರೂ ಯುರೋಪಿನಲ್ಲೂ ಜಾಗತಿಕವಾಗಿಯೂ ಹಲವು ಸ್ಥಿತ್ಯಂತರಗಳ ಮುನ್ನುಡಿ ಬರೆಯಿತು. ಇಂದಿನವರೆಗೂ ಎಲ್ಲ ರೈತ ಯುದ್ಧಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಪಾಳೆಯಗಾರಿ ವ್ಯವಸ್ಥೆಯ ವಿರುದ್ಧ ಬಂಡಾಯದ ಪ್ರತೀಕವಾಗಿದೆ.

ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ಹೆಚ್ಚಿನ ರೈತ ಸಂಬಂಧಿ ಪ್ರಶ್ನೆಗಳನ್ನು ಮೊದಲ ಬಾರಿಗೆ ಅಂದಿನ ಸಂದರ್ಭದಲ್ಲಿ ಎತ್ತಿ ಉತ್ತರಿಸಲು ಪ್ರಯತ್ನಿಸಿದ, ಈ ಕೃತಿ ಇಂದಿಗೂ ಅತ್ಯಂತ ಪ್ರಸ್ತುತ ಎಂದು ಕ್ರಿಯಾ ಮಾಧ್ಯಮ ಹೇಳಿದೆ. ಪುಸ್ತಕವು ಏಂಗೆಲ್ಸ್ ಅವರ ಗತಿತಾರ್ಕಿಕ ಭೌತವಾದವನ್ನು ಚರಿತ್ರೆಗೆ ಅನ್ವಯಿಸಿದ ಆರಂಭಿಕ ಪ್ರಯತ್ನಗಳಲ್ಲಿ ಒಂದಾಗಿದ್ದು, ಈ ವಿಧಾನ ಇತರ ಚಾರಿತ್ರಿಕ ವಿದ್ಯಮಾನಗಳ ಸಮಗ್ರ ಅರ್ಥೈಸುವಿಕೆಗೆ ಒಂದು ಮಾದರಿಯನ್ನು ಒದಗಿಸುತ್ತದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....