HomeಚಳವಳಿKRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

- Advertisement -
- Advertisement -

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಒತ್ತಾಯಿಸಿ ರೈತಸಂಘ, ದಲಿತ ಸಂಘರ್ಷ ಸಮಿತಿ, ಸ್ವರಾಜ್ ಇಂಡಿಯಾ ಪಕ್ಷ ಹಾಗೂ ಜನಾಂದೋಲನಗಳ ಮಹಾಮೈತ್ರಿ ಸಂಘಟನೆಗಳು ಹೋರಾಟಕ್ಕಿಳಿದಿವೆ. ಇಂದು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಲು ರೈತರು ಸಜ್ಜಾಗಿದ್ದಾರೆ.

ಜಲಾಶಯ
ಕೃಪೆ: ಸ್ಟಾರ್ ಆಫ್ ಮೈಸೂರು

ಬುಧವಾರ ನಡೆದ ಜಂಟಿ ಸುದ್ಧಿಗೋಷ್ಟಿಯಲ್ಲಿ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ, ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ, ಮತ್ತು ಕೆಆರ್‌ಎಸ್‌ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಶಾಶ್ವತ ನಿಷೇ‍ಧಕ್ಕೆ ಮತ್ತು ನಾಲ್ವಡಿಯವರ ಏಕ ಪ್ರತಿಮೆಗೆ ಒತ್ತಾಯಿಸಿ ಸಿಎಂಗೆ ಕಪ್ಪ ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದರು.

ಇಂದು ಮಧ್ಯಾಹ್ನದ ವೇಳೆಗೆ ಸಿಎಂ ಕೆಆರ್‌ಎಸ್‌ಗೆ ಆಗಮಿಸಲಿದ್ದು ಬಾಗಿನ ಅರ್ಪಿಸಲಿದ್ದಾರೆ. ಹಾಗಾಗಿ ಈಗಾಗಲೇ ಸ್ಥಳಕ್ಕೆ ಆಗಮಿಸುತ್ತಿರುವ ನೂರಾರು ಪ್ರತಿಭಟನಾಕಾರರನ್ನು ಜಿಲ್ಲಾ ಪೋಲೀಸರು ತಡೆದಿದ್ದಾರೆ. ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತು ರವೀಂದ್ರ ಅವರನ್ನು ಈಗಾಗಲೆ ಬಂಧಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನಾನುಗೌರಿ.ಕಾಂಗೆ ತಿಳಿಸಿದರು. ನಮ್ಮನ್ನೂ ಬಂಧಿಸುವುದಾಗಿ ಪೋಲೀಸರು ಹೇಳಿದ್ದಾರೆ. ಆದರೂ ನಾವು ಕಛೇರಿಯ ಬಳಿಯೇ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಹೋರಾಟಗಾರರನ್ನು ಸಹ ಕೆಆರ್‌ಎಸ್‌ಗೆ ಹೋಗುವಾಗ ಹೊಸೂರ್ ಗೇಟ್ ಬಳಿ ಬಂಧಿಸಲಾಗಿದೆ. ಕೆಆರ್‌ಎಸ್‌ಗೆ ಪ್ರತಿಭಟನೆಗೆ ಬರುತ್ತಿದ್ದವರನ್ನು ದಾರಿ ಮಧ್ಯೆಯೆ ತಡೆದು ಬಂಧಿಸಿದ್ದಾರೆ ಎಂದ ರೈತ ಸಂಘದ ಅಧ್ಯಕ್ಷರು ಹೇಳಿದ್ದಾರೆ.

ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ. ಫೋಟೊ ಕೃಪೆ: ಪ್ರಜಾವಾಣಿ

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ, ‘KRS ಜಲಾಶಯದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸದಿದ್ದರೆ, ರಾಜ್ಯ ಮಟ್ಟದಲ್ಲಿ ದೊಡ್ಡ ಹೋರಾಟ ಹಮ್ಮಿಕೊಳ್ಳುವುದಾಗಿ ಯಡಿಯೂರಪ್ಪನವರು ಎಚ್ಚರಿಕೆ ನೀಡಿದ್ದರು. ಆದರೆ ಈಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ವರ್ಷ ಕಳೆದರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿಯೇ ಈ ಪ್ರತಿಭಟನೆ ಎಂದು ಕೆಂಪೂಗೌಡರು ಹೇಳಿದರು.

ಕೆ ಆರ್ ಎಸ್ ಬಳಿ ಗಣಿಗಾರಿಕೆ
ಕೃಪೆ: ಸ್ಟಾರ್ ಆಫ್ ಮೈಸೂರು

ಗಣಿಗಾರಿಕೆಯಿಂದ ಸುತ್ತಮುತ್ತಲಿನ ಕೃಷಿ ಪರಿಸರಕ್ಕೆ, ಅರಣ್ಯ ಪ್ರದೇಶಕ್ಕೆ ಮತ್ತು ಜಲಾಶಯಕ್ಕೆ ಹೆಚ್ಚಿನ ತೊಂದರೆಯಾಗಲಿದೆ. ಇಲ್ಲಿನ ಗಣಿಗಾರಿಕೆಯ ನಿಷೇಧದ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದರೂ, ಸರ್ಕಾರ ಈ ಕೆಲಸಕ್ಕೆ ಕೈ ಹಾಕುತ್ತಿಲ್ಲ ಎಂದು ಹಲವು ಹೋರಾಟಗಾರರು ಅಸಮಧಾನ ವ್ಯಕ್ತಪಡಿಸಿದರು.

ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ KRS ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‌ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು 2018ರ ಸೆಪ್ಟೆಂಬರ್ 25ರಂದು ಕೆಆರ್‌ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ.

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‌ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‌ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‌ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವವೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 87 ವರ್ಷ ಹಳೆಯದಾದ ಕೆಆರ್‌ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ.

ಸ್ವತಃ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಇಲಾಖೆಯೇ KRS ಜಲಾಶಯ ಅಪಾದಲ್ಲಿದೆ ಎಂದು ವರದಿ ಸಲ್ಲಿಸಿದ್ದರೂ ಸಹ ರಾಜ್ಯ ಸರ್ಕಾರ ಗಣಿಗಾರಿಕೆಯ ನಿಷೇಧಕ್ಕೆ ಮುಂದಾಗುತ್ತಿಲ್ಲ. ಜಲಾಶಯಕ್ಕೆ ಏನಾದರೂ ಹಾನಿಯಾದರೆ ಬೆಂಗಳೂರು ಸೇರಿದಂತೆ ಸುಮಾರು 8 ಜಿಲ್ಲೆಗಳಿಗೆ ತೊಂದರೆಯಾಗಲಿದೆ. ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪನವರು ಹೇಳಿದ ಮಾತನ್ನು ನೆನಪಿಸುವ ಸಲುವಾಗಿ ಈ ಹೋರಾಟ ಮಾಡುತ್ತಿದ್ದೇವ ಎಂದು ಹೋರಾಟಗಾರರಾದ ಸುರೇಶ್ ಶಂಭುನಹಳ್ಳಿ ಹೇಳಿದರು.

ಇಂದು ಬಂಧನಕ್ಕೆ ಒಳಗಾಗಿರುವ ಮತ್ತೋರ್ವ ಹೋರಾಟಗಾರರಾದ ಅಭಿ ಹನಕೆರೆ ಮಾತನಾಡಿ, KRS ಉಳಿವಿಗಾಗಿ ಪ್ರತಿಭಟಿಸುತ್ತೇವೆ ಎಂದು ತಿಳಿದ ತಕ್ಷಣ ನೆನ್ನೆ ರಾತ್ರಿಯಿಂದಲೇ ಮಂಡ್ಯದಾದ್ಯಂತ ಇರುವ ಬಹುತೇಕ ಎಲ್ಲಾ ನಾಯಕರನ್ನೂ ಬಂಧಿಸಲಾಗಿದೆ. ಇದರ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುತ್ತಿದೆ. ಇಂಥಾ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಬಾಗಿನ ಬಿಡುವಂತಹ ಕಂದಾಚಾರಗಳನ್ನು ಮಾಡಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. 


ಇದನ್ನೂ ಓದಿ: ಕೆಆರ್‌ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...