HomeಚಳವಳಿKRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

- Advertisement -
- Advertisement -

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಒತ್ತಾಯಿಸಿ ರೈತಸಂಘ, ದಲಿತ ಸಂಘರ್ಷ ಸಮಿತಿ, ಸ್ವರಾಜ್ ಇಂಡಿಯಾ ಪಕ್ಷ ಹಾಗೂ ಜನಾಂದೋಲನಗಳ ಮಹಾಮೈತ್ರಿ ಸಂಘಟನೆಗಳು ಹೋರಾಟಕ್ಕಿಳಿದಿವೆ. ಇಂದು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಲು ರೈತರು ಸಜ್ಜಾಗಿದ್ದಾರೆ.

ಜಲಾಶಯ
ಕೃಪೆ: ಸ್ಟಾರ್ ಆಫ್ ಮೈಸೂರು

ಬುಧವಾರ ನಡೆದ ಜಂಟಿ ಸುದ್ಧಿಗೋಷ್ಟಿಯಲ್ಲಿ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ, ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ, ಮತ್ತು ಕೆಆರ್‌ಎಸ್‌ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಶಾಶ್ವತ ನಿಷೇ‍ಧಕ್ಕೆ ಮತ್ತು ನಾಲ್ವಡಿಯವರ ಏಕ ಪ್ರತಿಮೆಗೆ ಒತ್ತಾಯಿಸಿ ಸಿಎಂಗೆ ಕಪ್ಪ ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದರು.

ಇಂದು ಮಧ್ಯಾಹ್ನದ ವೇಳೆಗೆ ಸಿಎಂ ಕೆಆರ್‌ಎಸ್‌ಗೆ ಆಗಮಿಸಲಿದ್ದು ಬಾಗಿನ ಅರ್ಪಿಸಲಿದ್ದಾರೆ. ಹಾಗಾಗಿ ಈಗಾಗಲೇ ಸ್ಥಳಕ್ಕೆ ಆಗಮಿಸುತ್ತಿರುವ ನೂರಾರು ಪ್ರತಿಭಟನಾಕಾರರನ್ನು ಜಿಲ್ಲಾ ಪೋಲೀಸರು ತಡೆದಿದ್ದಾರೆ. ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತು ರವೀಂದ್ರ ಅವರನ್ನು ಈಗಾಗಲೆ ಬಂಧಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನಾನುಗೌರಿ.ಕಾಂಗೆ ತಿಳಿಸಿದರು. ನಮ್ಮನ್ನೂ ಬಂಧಿಸುವುದಾಗಿ ಪೋಲೀಸರು ಹೇಳಿದ್ದಾರೆ. ಆದರೂ ನಾವು ಕಛೇರಿಯ ಬಳಿಯೇ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಹೋರಾಟಗಾರರನ್ನು ಸಹ ಕೆಆರ್‌ಎಸ್‌ಗೆ ಹೋಗುವಾಗ ಹೊಸೂರ್ ಗೇಟ್ ಬಳಿ ಬಂಧಿಸಲಾಗಿದೆ. ಕೆಆರ್‌ಎಸ್‌ಗೆ ಪ್ರತಿಭಟನೆಗೆ ಬರುತ್ತಿದ್ದವರನ್ನು ದಾರಿ ಮಧ್ಯೆಯೆ ತಡೆದು ಬಂಧಿಸಿದ್ದಾರೆ ಎಂದ ರೈತ ಸಂಘದ ಅಧ್ಯಕ್ಷರು ಹೇಳಿದ್ದಾರೆ.

ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ. ಫೋಟೊ ಕೃಪೆ: ಪ್ರಜಾವಾಣಿ

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ, ‘KRS ಜಲಾಶಯದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸದಿದ್ದರೆ, ರಾಜ್ಯ ಮಟ್ಟದಲ್ಲಿ ದೊಡ್ಡ ಹೋರಾಟ ಹಮ್ಮಿಕೊಳ್ಳುವುದಾಗಿ ಯಡಿಯೂರಪ್ಪನವರು ಎಚ್ಚರಿಕೆ ನೀಡಿದ್ದರು. ಆದರೆ ಈಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ವರ್ಷ ಕಳೆದರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿಯೇ ಈ ಪ್ರತಿಭಟನೆ ಎಂದು ಕೆಂಪೂಗೌಡರು ಹೇಳಿದರು.

ಕೆ ಆರ್ ಎಸ್ ಬಳಿ ಗಣಿಗಾರಿಕೆ
ಕೃಪೆ: ಸ್ಟಾರ್ ಆಫ್ ಮೈಸೂರು

ಗಣಿಗಾರಿಕೆಯಿಂದ ಸುತ್ತಮುತ್ತಲಿನ ಕೃಷಿ ಪರಿಸರಕ್ಕೆ, ಅರಣ್ಯ ಪ್ರದೇಶಕ್ಕೆ ಮತ್ತು ಜಲಾಶಯಕ್ಕೆ ಹೆಚ್ಚಿನ ತೊಂದರೆಯಾಗಲಿದೆ. ಇಲ್ಲಿನ ಗಣಿಗಾರಿಕೆಯ ನಿಷೇಧದ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದರೂ, ಸರ್ಕಾರ ಈ ಕೆಲಸಕ್ಕೆ ಕೈ ಹಾಕುತ್ತಿಲ್ಲ ಎಂದು ಹಲವು ಹೋರಾಟಗಾರರು ಅಸಮಧಾನ ವ್ಯಕ್ತಪಡಿಸಿದರು.

ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ KRS ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‌ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು 2018ರ ಸೆಪ್ಟೆಂಬರ್ 25ರಂದು ಕೆಆರ್‌ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ.

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‌ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‌ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‌ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವವೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 87 ವರ್ಷ ಹಳೆಯದಾದ ಕೆಆರ್‌ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ.

ಸ್ವತಃ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಇಲಾಖೆಯೇ KRS ಜಲಾಶಯ ಅಪಾದಲ್ಲಿದೆ ಎಂದು ವರದಿ ಸಲ್ಲಿಸಿದ್ದರೂ ಸಹ ರಾಜ್ಯ ಸರ್ಕಾರ ಗಣಿಗಾರಿಕೆಯ ನಿಷೇಧಕ್ಕೆ ಮುಂದಾಗುತ್ತಿಲ್ಲ. ಜಲಾಶಯಕ್ಕೆ ಏನಾದರೂ ಹಾನಿಯಾದರೆ ಬೆಂಗಳೂರು ಸೇರಿದಂತೆ ಸುಮಾರು 8 ಜಿಲ್ಲೆಗಳಿಗೆ ತೊಂದರೆಯಾಗಲಿದೆ. ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪನವರು ಹೇಳಿದ ಮಾತನ್ನು ನೆನಪಿಸುವ ಸಲುವಾಗಿ ಈ ಹೋರಾಟ ಮಾಡುತ್ತಿದ್ದೇವ ಎಂದು ಹೋರಾಟಗಾರರಾದ ಸುರೇಶ್ ಶಂಭುನಹಳ್ಳಿ ಹೇಳಿದರು.

ಇಂದು ಬಂಧನಕ್ಕೆ ಒಳಗಾಗಿರುವ ಮತ್ತೋರ್ವ ಹೋರಾಟಗಾರರಾದ ಅಭಿ ಹನಕೆರೆ ಮಾತನಾಡಿ, KRS ಉಳಿವಿಗಾಗಿ ಪ್ರತಿಭಟಿಸುತ್ತೇವೆ ಎಂದು ತಿಳಿದ ತಕ್ಷಣ ನೆನ್ನೆ ರಾತ್ರಿಯಿಂದಲೇ ಮಂಡ್ಯದಾದ್ಯಂತ ಇರುವ ಬಹುತೇಕ ಎಲ್ಲಾ ನಾಯಕರನ್ನೂ ಬಂಧಿಸಲಾಗಿದೆ. ಇದರ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುತ್ತಿದೆ. ಇಂಥಾ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಬಾಗಿನ ಬಿಡುವಂತಹ ಕಂದಾಚಾರಗಳನ್ನು ಮಾಡಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. 


ಇದನ್ನೂ ಓದಿ: ಕೆಆರ್‌ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...