Homeಕರ್ನಾಟಕಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ, ಪ್ರತಿ ಜಿಲ್ಲೆಯಲ್ಲೂ ‘ಲಂಚಮುಕ್ತ ಕರ್ನಾಟಕ’ ಜಾಗೃತಿ ಅಭಿಯಾನವನ್ನು ಪಕ್ಷ ನಡೆಸುತ್ತಿದೆ.

- Advertisement -
- Advertisement -

ರಾಜ್ಯದ ಪ್ರಮುಖ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿರುವ ‘ಕರ್ನಾಟಕ ರಾಷ್ಟ್ರ ಸಮಿತಿ’(KRS) ಪಕ್ಷವು, ‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು ನಡೆಸುತ್ತಿದೆ. ಆಗಸ್ಟ್ 8 ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ, 32 ದಿನಗಳ ಕಾಲ, 3500 ಕಿಲೋಮೀಟರ್‌ ಪ್ರವಾಸ ಮತ್ತು ಜನಜಾಗೃತಿ ಅಭಿಯಾನದ ಮೂಲಕ ನಡೆಯಲಿದೆ.

ಈಗಾಗಲೆ 12 ದಿನವನ್ನು ಪೂರೈಸಿರುವ ಅಭಿಯಾನವು ಪ್ರಸ್ತುತ ಲಿಂಗಸುಗೂರು ಮತ್ತು ಮಸ್ಕಿಯಲ್ಲಿದ್ದು, ಇಂದು ಅಲ್ಲಿನ ತಾಲೂಕು ಕಚೇರಿಗಳಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಅಭಿಯಾನದ ಅಂಗವಾಗಿ ಪ್ರತಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿ, “ಲಂಚಮುಕ್ತ ಕರ್ನಾಟಕ” ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇಷ್ಟೇ ಅಲ್ಲದೆ, ಸ್ಥಳೀಯ ಭ್ರಷ್ಟಾಚಾರಿಗಳ ವಿರುದ್ದ ಜನಜಾಗೃತಿ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಾರ್ವಜನಿಕರೊಡನೆ ಮತ್ತು ವೈದ್ಯಾಧಿಕಾರಿಗಳೊಡನೆ ಅಲ್ಲಿಯ ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ, ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಆಗ್ರಹ, ಪರಿಸರ ಕಾರ್ಯಕ್ರಮಗಳು, ಪ್ರಾಮಾಣಿಕ ಹೋರಾಟಗಾರ/ರಾಜಕಾರಣಿಗಳ ಭೇಟಿ, ಭ್ರಷ್ಟರನ್ನು ರಾಜಕೀಯದಿಂದ ಹೊರಗಟ್ಟಲು ಪ್ರಾಮಾಣಿಕರು ಚುನಾವಣಾ ರಾಜಕೀಯವನ್ನು ಪ್ರವೇಶಿಸಲು ಉತ್ತೇಜನ, ಪಕ್ಷ ಸೇರ್ಪಡೆ, ಇತ್ಯಾದಿ ಕಾರ್ಯಕ್ರಮಗಳನ್ನು ಪಕ್ಷವು ಈ ಅಭಿಯಾನದ ಅಂಗವಾಗಿ ನಡೆಸುತ್ತಿದೆ.

“ತನ್ನ ನ್ಯಾಯಬದ್ದ ಕೆಲಸಕ್ಕಾಗಿ ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ಕೊಡುವ ಜನಸಾಮಾನ್ಯನಿಗೆ ಇಂದು ಅಲ್ಲಿ ಗೌರವ ಸಿಗುತ್ತಿಲ್ಲ. ರೈತರೂ ಸೇರಿದಂತೆ ಅತಿ ಹೆಚ್ಚು ಜನರು ಭೇಟಿ ಕೊಡುವ ಕಂದಾಯ ಇಲಾಖೆಯಲ್ಲಿಯಂತೂ ಲಂಚ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಂದು ಸುಲಿಗೆಯ, ವಂಚನೆಯ, ದೌರ್ಜನ್ಯದ ಕೇಂದ್ರಗಳಾಗಿವೆ ಹಾಗೂ ಅಪರಾಧಗಳನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿವೆ. ಇದರ ವಿರುದ್ಧ ಕೆಆರ್‌ಎಸ್‌ ಪಕ್ಷವು ಅಭಿಯಾನವನ್ನು ನಡೆಸುತ್ತಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಈ ಮಧ್ಯೆ, ದಾವಣಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆಯು ನಡೆದಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿ ಅವರು ಹೇಳುವಂತೆ, “ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ KRS ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಹರಿಹಾಯ್ದಿದ್ದಾರೆ. ಅವರ ಫೋನ್ ಕಿತ್ತುಕೊಂಡು, ಅದರಿಂದ ವಿಡಿಯೋ ಡಿಲೀಟ್ ಮಾಡಿ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿ, ನಂತರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಠಾಣೆಗೂ ಎಳೆದುಕೊಂಡು ಹೋಗಿ, ಅಲ್ಲಿಯೂ ಹೆದರಿಸಿ ಬೆದರಿಸಿ ಬಲಾತ್ಕಾರದಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೀಸರ ಈ ನಡೆಯ ಬಗ್ಗೆ ಪ್ರಕರಣ ದಾಖಲಿಸಲು ಠಾಣೆಗೆ ತೆರಳಿದಾಗ ಪಕ್ಷದ ಯುವ ಮುಖಂಡನ್ನು, ‘ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿದರು’ ಎಂದು ಸುಳ್ಳು ಆರೋಪ ಹೊರಿಸಿ ಠಾಣೆಯಲ್ಲಿಯೇ ಬಂಧಿಸಿ ಏಳು ಜೈಲಿನಲ್ಲಿಡಲಾಗಿತ್ತು. ಇದೀಗ ಅವರು ಜಾಮೀನಿನ ಅಡಿಯಲ್ಲಿ ಬಿಡುಗಡೆಯಾಗಿದ್ದು, ಇಂದಲ್ಲ ನಾಳೆ ದೂರುದಾರ ಪೊಲೀಸನಿಗೆ ಮಂಪರು ಪರೀಕ್ಷೆ ಮಾಡಿಸಿ ಅಮಾಯಕರ ಪ್ರಾಣ ಹಿಂಡುವ ಕಾನೂನು ಭಂಜಕ ಅಪರಾಧಿ ಮನೋಭಾವದ ಪೊಲೀಸರಿಗೆ ಪಕ್ಷವು ಪಾಠ ಕಲಿಸದೆ ಬಿಡುವುದಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪ್ರಕರಣದಲ್ಲಿ ಪೊಲೀಸರು ಅವರನ್ನು ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವಿಕೃಷ್ಣ ರೆಡ್ಡಿ ತಾನು ಆಗಸ್ಟ್‌ 24 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದು, “ಪೊಲೀಸರು ಅಂದು ಬಂಧಿಸಿದರೂ ಬಂಧಿಸಬಹುದೇನೋ! ಯಾರಿಗೆ ಗೊತ್ತು? ನಾನೂ ದಾವಣಗೆರೆ ಜೈಲು ನೋಡಿಲ್ಲ. ಈ ರಾಜ್ಯದಲ್ಲಿ ಅದೆಷ್ಟು ಸಾವಿರ, ಲಕ್ಷ ಅಮಾಯಕರು ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೋ! ಎಷ್ಟೆಲ್ಲಾ ನಿರಪರಾಧಿಗಳು ಸುಳ್ಳು ಕೇಸುಗಳಲ್ಲಿ ಜೈಲು ಪಾಲಾಗಿದ್ದಾರೋ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಭಿಯಾನ ಪ್ರಾರಂಭವಾಗಿ 12 ದಿನಗಳಷ್ಟೇ ಆಗಿದ್ದು ಈಗಾಗಲೆ ಪಕ್ಷದ ಅಭಿಯಾನವು ಸರ್ಕಾರಿ ಕಚೇರಿಗಳಲ್ಲಿನ ಹಲವು ಸಮಸ್ಯೆಗಳನ್ನು ಬಯಲಿಗೆ ಎಳೆದಿದೆ. ಅಭಿಯಾನದ ಎಲ್ಲಾ ದೃಶ್ಯಗಳನ್ನು ಪಕ್ಷವು ಫೇಸ್‌ಬುಕ್ ಮೂಲಕ ರಾಜ್ಯದ ಜನತೆಗೆ ತಲುಪಿಸುತ್ತಿದೆ. ಅಭಿಯಾನದ ತಂಡವು ಇನ್ನೂ ಇಪ್ಪತ್ತು ದಿನಗಳು ರಾಜ್ಯದಾದ್ಯಂತ ಸಂಚರಿಸಲಿದೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...