Homeಕರ್ನಾಟಕಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ, ಪ್ರತಿ ಜಿಲ್ಲೆಯಲ್ಲೂ ‘ಲಂಚಮುಕ್ತ ಕರ್ನಾಟಕ’ ಜಾಗೃತಿ ಅಭಿಯಾನವನ್ನು ಪಕ್ಷ ನಡೆಸುತ್ತಿದೆ.

- Advertisement -
- Advertisement -

ರಾಜ್ಯದ ಪ್ರಮುಖ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿರುವ ‘ಕರ್ನಾಟಕ ರಾಷ್ಟ್ರ ಸಮಿತಿ’(KRS) ಪಕ್ಷವು, ‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು ನಡೆಸುತ್ತಿದೆ. ಆಗಸ್ಟ್ 8 ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ, 32 ದಿನಗಳ ಕಾಲ, 3500 ಕಿಲೋಮೀಟರ್‌ ಪ್ರವಾಸ ಮತ್ತು ಜನಜಾಗೃತಿ ಅಭಿಯಾನದ ಮೂಲಕ ನಡೆಯಲಿದೆ.

ಈಗಾಗಲೆ 12 ದಿನವನ್ನು ಪೂರೈಸಿರುವ ಅಭಿಯಾನವು ಪ್ರಸ್ತುತ ಲಿಂಗಸುಗೂರು ಮತ್ತು ಮಸ್ಕಿಯಲ್ಲಿದ್ದು, ಇಂದು ಅಲ್ಲಿನ ತಾಲೂಕು ಕಚೇರಿಗಳಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಅಭಿಯಾನದ ಅಂಗವಾಗಿ ಪ್ರತಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿ, “ಲಂಚಮುಕ್ತ ಕರ್ನಾಟಕ” ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇಷ್ಟೇ ಅಲ್ಲದೆ, ಸ್ಥಳೀಯ ಭ್ರಷ್ಟಾಚಾರಿಗಳ ವಿರುದ್ದ ಜನಜಾಗೃತಿ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಾರ್ವಜನಿಕರೊಡನೆ ಮತ್ತು ವೈದ್ಯಾಧಿಕಾರಿಗಳೊಡನೆ ಅಲ್ಲಿಯ ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ, ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಆಗ್ರಹ, ಪರಿಸರ ಕಾರ್ಯಕ್ರಮಗಳು, ಪ್ರಾಮಾಣಿಕ ಹೋರಾಟಗಾರ/ರಾಜಕಾರಣಿಗಳ ಭೇಟಿ, ಭ್ರಷ್ಟರನ್ನು ರಾಜಕೀಯದಿಂದ ಹೊರಗಟ್ಟಲು ಪ್ರಾಮಾಣಿಕರು ಚುನಾವಣಾ ರಾಜಕೀಯವನ್ನು ಪ್ರವೇಶಿಸಲು ಉತ್ತೇಜನ, ಪಕ್ಷ ಸೇರ್ಪಡೆ, ಇತ್ಯಾದಿ ಕಾರ್ಯಕ್ರಮಗಳನ್ನು ಪಕ್ಷವು ಈ ಅಭಿಯಾನದ ಅಂಗವಾಗಿ ನಡೆಸುತ್ತಿದೆ.

“ತನ್ನ ನ್ಯಾಯಬದ್ದ ಕೆಲಸಕ್ಕಾಗಿ ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ಕೊಡುವ ಜನಸಾಮಾನ್ಯನಿಗೆ ಇಂದು ಅಲ್ಲಿ ಗೌರವ ಸಿಗುತ್ತಿಲ್ಲ. ರೈತರೂ ಸೇರಿದಂತೆ ಅತಿ ಹೆಚ್ಚು ಜನರು ಭೇಟಿ ಕೊಡುವ ಕಂದಾಯ ಇಲಾಖೆಯಲ್ಲಿಯಂತೂ ಲಂಚ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಂದು ಸುಲಿಗೆಯ, ವಂಚನೆಯ, ದೌರ್ಜನ್ಯದ ಕೇಂದ್ರಗಳಾಗಿವೆ ಹಾಗೂ ಅಪರಾಧಗಳನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿವೆ. ಇದರ ವಿರುದ್ಧ ಕೆಆರ್‌ಎಸ್‌ ಪಕ್ಷವು ಅಭಿಯಾನವನ್ನು ನಡೆಸುತ್ತಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಈ ಮಧ್ಯೆ, ದಾವಣಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆಯು ನಡೆದಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿ ಅವರು ಹೇಳುವಂತೆ, “ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ KRS ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಹರಿಹಾಯ್ದಿದ್ದಾರೆ. ಅವರ ಫೋನ್ ಕಿತ್ತುಕೊಂಡು, ಅದರಿಂದ ವಿಡಿಯೋ ಡಿಲೀಟ್ ಮಾಡಿ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿ, ನಂತರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಠಾಣೆಗೂ ಎಳೆದುಕೊಂಡು ಹೋಗಿ, ಅಲ್ಲಿಯೂ ಹೆದರಿಸಿ ಬೆದರಿಸಿ ಬಲಾತ್ಕಾರದಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೀಸರ ಈ ನಡೆಯ ಬಗ್ಗೆ ಪ್ರಕರಣ ದಾಖಲಿಸಲು ಠಾಣೆಗೆ ತೆರಳಿದಾಗ ಪಕ್ಷದ ಯುವ ಮುಖಂಡನ್ನು, ‘ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿದರು’ ಎಂದು ಸುಳ್ಳು ಆರೋಪ ಹೊರಿಸಿ ಠಾಣೆಯಲ್ಲಿಯೇ ಬಂಧಿಸಿ ಏಳು ಜೈಲಿನಲ್ಲಿಡಲಾಗಿತ್ತು. ಇದೀಗ ಅವರು ಜಾಮೀನಿನ ಅಡಿಯಲ್ಲಿ ಬಿಡುಗಡೆಯಾಗಿದ್ದು, ಇಂದಲ್ಲ ನಾಳೆ ದೂರುದಾರ ಪೊಲೀಸನಿಗೆ ಮಂಪರು ಪರೀಕ್ಷೆ ಮಾಡಿಸಿ ಅಮಾಯಕರ ಪ್ರಾಣ ಹಿಂಡುವ ಕಾನೂನು ಭಂಜಕ ಅಪರಾಧಿ ಮನೋಭಾವದ ಪೊಲೀಸರಿಗೆ ಪಕ್ಷವು ಪಾಠ ಕಲಿಸದೆ ಬಿಡುವುದಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪ್ರಕರಣದಲ್ಲಿ ಪೊಲೀಸರು ಅವರನ್ನು ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವಿಕೃಷ್ಣ ರೆಡ್ಡಿ ತಾನು ಆಗಸ್ಟ್‌ 24 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದು, “ಪೊಲೀಸರು ಅಂದು ಬಂಧಿಸಿದರೂ ಬಂಧಿಸಬಹುದೇನೋ! ಯಾರಿಗೆ ಗೊತ್ತು? ನಾನೂ ದಾವಣಗೆರೆ ಜೈಲು ನೋಡಿಲ್ಲ. ಈ ರಾಜ್ಯದಲ್ಲಿ ಅದೆಷ್ಟು ಸಾವಿರ, ಲಕ್ಷ ಅಮಾಯಕರು ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೋ! ಎಷ್ಟೆಲ್ಲಾ ನಿರಪರಾಧಿಗಳು ಸುಳ್ಳು ಕೇಸುಗಳಲ್ಲಿ ಜೈಲು ಪಾಲಾಗಿದ್ದಾರೋ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಭಿಯಾನ ಪ್ರಾರಂಭವಾಗಿ 12 ದಿನಗಳಷ್ಟೇ ಆಗಿದ್ದು ಈಗಾಗಲೆ ಪಕ್ಷದ ಅಭಿಯಾನವು ಸರ್ಕಾರಿ ಕಚೇರಿಗಳಲ್ಲಿನ ಹಲವು ಸಮಸ್ಯೆಗಳನ್ನು ಬಯಲಿಗೆ ಎಳೆದಿದೆ. ಅಭಿಯಾನದ ಎಲ್ಲಾ ದೃಶ್ಯಗಳನ್ನು ಪಕ್ಷವು ಫೇಸ್‌ಬುಕ್ ಮೂಲಕ ರಾಜ್ಯದ ಜನತೆಗೆ ತಲುಪಿಸುತ್ತಿದೆ. ಅಭಿಯಾನದ ತಂಡವು ಇನ್ನೂ ಇಪ್ಪತ್ತು ದಿನಗಳು ರಾಜ್ಯದಾದ್ಯಂತ ಸಂಚರಿಸಲಿದೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...