Homeಕರ್ನಾಟಕಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಜುಂಜಿ ಅಹ್ಮದ್ ಅವರು ಸ್ಥಲೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ- ರವಿಕೃಷ್ಣಾ ರೆಡ್ಡಿ

- Advertisement -
- Advertisement -

ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಬಂದ ದೂರುಗಳ ಆಧಾರದ ಮೇಲೆ ಪರಿಶೀಲನೆ ನಡೆಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ಮುಖ್ಯಸ್ಥರಾದ ರವಿಕೃಷ್ಣಾ ರೆಡ್ಡಿ ಮತ್ತು ಮುಖಂಡರನ್ನು ಬಂಧಿಸಲಾಗಿದೆ.

“ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ “ಲಂಚಮುಕ್ತ ಕರ್ನಾಟಕ” ಅಭಿಯಾನದ ಭಾಗವಾಗಿ ಇಂದು ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಮತ್ತು ನಮಗೆ ಬಂದ ದೂರುಗಳ ಬಗ್ಗೆ ಅಲ್ಲಿ ಪರಿಶೀಲಿಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದಾಗ, ಅಲ್ಲಿ ಅಸಭ್ಯವಾಗಿ ಮತ್ತು ಅಧಿಕಾರಿಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸಿರುವ ತಹಸೀಲ್ದಾರ್ ಕುಂಜಿ ಅಹ್ಮದ್ ನಮ್ಮ ಮೇಲೆ ಸುಳ್ಳು ಆರೋಪಗಳ ದೂರು ನೀಡಿ, ಸ್ಥಳೀಯ ಗೂಂಡಾಗಳನ್ನು ಪ್ರಚೋದಿಸಿ ಹಲ್ಲೆ ಮಾಡುವ ವಾತಾವರಣ ನಿರ್ಮಿಸಿ, ಸ್ಥಳೀಯ ಪೊಲೀಸರನ್ನು ಶಾಮೀಲು ಮಾಡಿಕೊಂಡು ದೂರು ದಾಖಲಿಸಿ ನಮ್ಮನ್ನು ಬಂಧಿಸುವಂತೆ ಮಾಡಿರುತ್ತಾರೆ” ಎಂದು ಪಕ್ಷದ ಮುಖಂಡರು ಆರೋಪಿಸಿದ್ದಾರೆ

“ಇಡೀ ಘಟನೆ ನಮ್ಮ ಪಕ್ಷದ FB ಪುಟದಲ್ಲಿ ಲೈವ್ ದಾಖಲಾಗಿರುತ್ತದೆ. ಇದನ್ನು ಈ ಮೂಲಕ ಕಂದಾಯ ಸಚಿವ ಆರ್ ಆಶೋಕ್ ಅವರ ಗಮನಕ್ಕೆ ತರುತ್ತಿದ್ದೇವೆ. ನಿಮ್ಮ ಇಲಾಖೆಯ ಸದರಿ ಅಧಿಕಾರಿಯ ಒಟ್ಟಾರೆ ವರ್ತನೆ ಅನೇಕ ಸಂಶಯಗಳನ್ನು ಹುಟ್ಟಿಸುತ್ತಿದೆ ಮತ್ತು ಅವರು ಇಲ್ಲಿ ಒಂದು ಖಾಸಗಿ ಪಟಾಲಂ ಕಟ್ಟಿಕೊಂಡು ಕಾನೂನುಬಾಹಿರ ಕೆಲಸಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ಈ ಕುರಿತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿಯೂ ಮನವಿ ಮಾಡಿದ್ದಾರೆ.

ನಾಗಮಂಗಲದ ಪೊಲೀಸ್ ಠಾಣೆಯಲ್ಲಿ ಪಕ್ಷದ ನಾಯಕರು. ರಾಜ್ಯಾಧ್ಯಕ್ಷರೂ ಸೇರಿದಂತೆ ಹಲವರನ್ನು ಕಳೆದ ಎರಡು ಗಂಟೆಗಳಿಂದ ಠಾಣೆಯಲ್ಲಿ ಇರಿಸಿಕೊಂಡು ಸುಳ್ಳು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಫೇಸ್‌ಬುಕ್ ಪುಟದಿಂದ ಘಟನೆಯ ಸಂಪೂರ್ಣ ವಿವರ ವೀಡಿಯೋ ದಾಖಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಪೊಲೀಸ್‌ ಠಾಣೆಯಿಂದಲೇ ಮಾತನಾಡಿದ ರವಿಕೃಷ್ಣಾ ರೆಡ್ಡಿ, “ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಕುಂಜಿ ಅಹ್ಮದ್ ಅವರು ಸ್ಥಳೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ” ಎಂದು ಹೇಳಿದರು.

ಇಂದು ಸಂಜೆಯ ವೇಳೆಗೆ ತಮ್ಮನ್ನು ಮಂಡ್ಯ ಕಾರಾಗೃಹಕ್ಕೆ ಕಳುಹಿಸುತ್ತಾರೆ ಎಂದೂ ಹೇಳಿದ್ದಾರೆ.


ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...