Homeಕರ್ನಾಟಕಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಜುಂಜಿ ಅಹ್ಮದ್ ಅವರು ಸ್ಥಲೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ- ರವಿಕೃಷ್ಣಾ ರೆಡ್ಡಿ

- Advertisement -
- Advertisement -

ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಬಂದ ದೂರುಗಳ ಆಧಾರದ ಮೇಲೆ ಪರಿಶೀಲನೆ ನಡೆಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ಮುಖ್ಯಸ್ಥರಾದ ರವಿಕೃಷ್ಣಾ ರೆಡ್ಡಿ ಮತ್ತು ಮುಖಂಡರನ್ನು ಬಂಧಿಸಲಾಗಿದೆ.

“ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ “ಲಂಚಮುಕ್ತ ಕರ್ನಾಟಕ” ಅಭಿಯಾನದ ಭಾಗವಾಗಿ ಇಂದು ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಮತ್ತು ನಮಗೆ ಬಂದ ದೂರುಗಳ ಬಗ್ಗೆ ಅಲ್ಲಿ ಪರಿಶೀಲಿಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದಾಗ, ಅಲ್ಲಿ ಅಸಭ್ಯವಾಗಿ ಮತ್ತು ಅಧಿಕಾರಿಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸಿರುವ ತಹಸೀಲ್ದಾರ್ ಕುಂಜಿ ಅಹ್ಮದ್ ನಮ್ಮ ಮೇಲೆ ಸುಳ್ಳು ಆರೋಪಗಳ ದೂರು ನೀಡಿ, ಸ್ಥಳೀಯ ಗೂಂಡಾಗಳನ್ನು ಪ್ರಚೋದಿಸಿ ಹಲ್ಲೆ ಮಾಡುವ ವಾತಾವರಣ ನಿರ್ಮಿಸಿ, ಸ್ಥಳೀಯ ಪೊಲೀಸರನ್ನು ಶಾಮೀಲು ಮಾಡಿಕೊಂಡು ದೂರು ದಾಖಲಿಸಿ ನಮ್ಮನ್ನು ಬಂಧಿಸುವಂತೆ ಮಾಡಿರುತ್ತಾರೆ” ಎಂದು ಪಕ್ಷದ ಮುಖಂಡರು ಆರೋಪಿಸಿದ್ದಾರೆ

“ಇಡೀ ಘಟನೆ ನಮ್ಮ ಪಕ್ಷದ FB ಪುಟದಲ್ಲಿ ಲೈವ್ ದಾಖಲಾಗಿರುತ್ತದೆ. ಇದನ್ನು ಈ ಮೂಲಕ ಕಂದಾಯ ಸಚಿವ ಆರ್ ಆಶೋಕ್ ಅವರ ಗಮನಕ್ಕೆ ತರುತ್ತಿದ್ದೇವೆ. ನಿಮ್ಮ ಇಲಾಖೆಯ ಸದರಿ ಅಧಿಕಾರಿಯ ಒಟ್ಟಾರೆ ವರ್ತನೆ ಅನೇಕ ಸಂಶಯಗಳನ್ನು ಹುಟ್ಟಿಸುತ್ತಿದೆ ಮತ್ತು ಅವರು ಇಲ್ಲಿ ಒಂದು ಖಾಸಗಿ ಪಟಾಲಂ ಕಟ್ಟಿಕೊಂಡು ಕಾನೂನುಬಾಹಿರ ಕೆಲಸಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ಈ ಕುರಿತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿಯೂ ಮನವಿ ಮಾಡಿದ್ದಾರೆ.

ನಾಗಮಂಗಲದ ಪೊಲೀಸ್ ಠಾಣೆಯಲ್ಲಿ ಪಕ್ಷದ ನಾಯಕರು. ರಾಜ್ಯಾಧ್ಯಕ್ಷರೂ ಸೇರಿದಂತೆ ಹಲವರನ್ನು ಕಳೆದ ಎರಡು ಗಂಟೆಗಳಿಂದ ಠಾಣೆಯಲ್ಲಿ ಇರಿಸಿಕೊಂಡು ಸುಳ್ಳು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಫೇಸ್‌ಬುಕ್ ಪುಟದಿಂದ ಘಟನೆಯ ಸಂಪೂರ್ಣ ವಿವರ ವೀಡಿಯೋ ದಾಖಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಪೊಲೀಸ್‌ ಠಾಣೆಯಿಂದಲೇ ಮಾತನಾಡಿದ ರವಿಕೃಷ್ಣಾ ರೆಡ್ಡಿ, “ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಕುಂಜಿ ಅಹ್ಮದ್ ಅವರು ಸ್ಥಳೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ” ಎಂದು ಹೇಳಿದರು.

ಇಂದು ಸಂಜೆಯ ವೇಳೆಗೆ ತಮ್ಮನ್ನು ಮಂಡ್ಯ ಕಾರಾಗೃಹಕ್ಕೆ ಕಳುಹಿಸುತ್ತಾರೆ ಎಂದೂ ಹೇಳಿದ್ದಾರೆ.


ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...