Homeಕರ್ನಾಟಕಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಜುಂಜಿ ಅಹ್ಮದ್ ಅವರು ಸ್ಥಲೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ- ರವಿಕೃಷ್ಣಾ ರೆಡ್ಡಿ

- Advertisement -
- Advertisement -

ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಬಂದ ದೂರುಗಳ ಆಧಾರದ ಮೇಲೆ ಪರಿಶೀಲನೆ ನಡೆಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ಮುಖ್ಯಸ್ಥರಾದ ರವಿಕೃಷ್ಣಾ ರೆಡ್ಡಿ ಮತ್ತು ಮುಖಂಡರನ್ನು ಬಂಧಿಸಲಾಗಿದೆ.

“ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ “ಲಂಚಮುಕ್ತ ಕರ್ನಾಟಕ” ಅಭಿಯಾನದ ಭಾಗವಾಗಿ ಇಂದು ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಮತ್ತು ನಮಗೆ ಬಂದ ದೂರುಗಳ ಬಗ್ಗೆ ಅಲ್ಲಿ ಪರಿಶೀಲಿಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದಾಗ, ಅಲ್ಲಿ ಅಸಭ್ಯವಾಗಿ ಮತ್ತು ಅಧಿಕಾರಿಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸಿರುವ ತಹಸೀಲ್ದಾರ್ ಕುಂಜಿ ಅಹ್ಮದ್ ನಮ್ಮ ಮೇಲೆ ಸುಳ್ಳು ಆರೋಪಗಳ ದೂರು ನೀಡಿ, ಸ್ಥಳೀಯ ಗೂಂಡಾಗಳನ್ನು ಪ್ರಚೋದಿಸಿ ಹಲ್ಲೆ ಮಾಡುವ ವಾತಾವರಣ ನಿರ್ಮಿಸಿ, ಸ್ಥಳೀಯ ಪೊಲೀಸರನ್ನು ಶಾಮೀಲು ಮಾಡಿಕೊಂಡು ದೂರು ದಾಖಲಿಸಿ ನಮ್ಮನ್ನು ಬಂಧಿಸುವಂತೆ ಮಾಡಿರುತ್ತಾರೆ” ಎಂದು ಪಕ್ಷದ ಮುಖಂಡರು ಆರೋಪಿಸಿದ್ದಾರೆ

“ಇಡೀ ಘಟನೆ ನಮ್ಮ ಪಕ್ಷದ FB ಪುಟದಲ್ಲಿ ಲೈವ್ ದಾಖಲಾಗಿರುತ್ತದೆ. ಇದನ್ನು ಈ ಮೂಲಕ ಕಂದಾಯ ಸಚಿವ ಆರ್ ಆಶೋಕ್ ಅವರ ಗಮನಕ್ಕೆ ತರುತ್ತಿದ್ದೇವೆ. ನಿಮ್ಮ ಇಲಾಖೆಯ ಸದರಿ ಅಧಿಕಾರಿಯ ಒಟ್ಟಾರೆ ವರ್ತನೆ ಅನೇಕ ಸಂಶಯಗಳನ್ನು ಹುಟ್ಟಿಸುತ್ತಿದೆ ಮತ್ತು ಅವರು ಇಲ್ಲಿ ಒಂದು ಖಾಸಗಿ ಪಟಾಲಂ ಕಟ್ಟಿಕೊಂಡು ಕಾನೂನುಬಾಹಿರ ಕೆಲಸಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ಈ ಕುರಿತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿಯೂ ಮನವಿ ಮಾಡಿದ್ದಾರೆ.

ನಾಗಮಂಗಲದ ಪೊಲೀಸ್ ಠಾಣೆಯಲ್ಲಿ ಪಕ್ಷದ ನಾಯಕರು. ರಾಜ್ಯಾಧ್ಯಕ್ಷರೂ ಸೇರಿದಂತೆ ಹಲವರನ್ನು ಕಳೆದ ಎರಡು ಗಂಟೆಗಳಿಂದ ಠಾಣೆಯಲ್ಲಿ ಇರಿಸಿಕೊಂಡು ಸುಳ್ಳು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಫೇಸ್‌ಬುಕ್ ಪುಟದಿಂದ ಘಟನೆಯ ಸಂಪೂರ್ಣ ವಿವರ ವೀಡಿಯೋ ದಾಖಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಪೊಲೀಸ್‌ ಠಾಣೆಯಿಂದಲೇ ಮಾತನಾಡಿದ ರವಿಕೃಷ್ಣಾ ರೆಡ್ಡಿ, “ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಕುಂಜಿ ಅಹ್ಮದ್ ಅವರು ಸ್ಥಳೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ” ಎಂದು ಹೇಳಿದರು.

ಇಂದು ಸಂಜೆಯ ವೇಳೆಗೆ ತಮ್ಮನ್ನು ಮಂಡ್ಯ ಕಾರಾಗೃಹಕ್ಕೆ ಕಳುಹಿಸುತ್ತಾರೆ ಎಂದೂ ಹೇಳಿದ್ದಾರೆ.


ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...