Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....